Election Results 2023: ದೇಶಕ್ಕೆ "ನಮೋ" ಗ್ಯಾರಂಟಿ; ಪ್ರಧಾನಿ ಮೋದಿ ಇದ್ದರೆ ಎಲ್ಲವೂ ಸಾಧ್ಯ!

ASSEMBLY Election Results 2023: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು.

Written by - Puttaraj K Alur | Last Updated : Dec 3, 2023, 04:04 PM IST
  • ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಗೆ ಅಭೂತಪೂರ್ವ ಜಯ
  • ಸೂಪರ್ ಸಂಡೆ ಫಲಿತಾಂಶದಿಂದ ‘ಕಮಲ’ ಪಾಳೆಯದಲ್ಲಿ ಮುಗಿಲು ಮುಟ್ಟಿದ ಸಂಭ್ರಮ
  • ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಸಿಹಿ ವಿತರಿಸಿ ವಿಜಯೋತ್ಸವ ಆಚರಣೆ
Election Results 2023: ದೇಶಕ್ಕೆ "ನಮೋ" ಗ್ಯಾರಂಟಿ; ಪ್ರಧಾನಿ ಮೋದಿ ಇದ್ದರೆ ಎಲ್ಲವೂ ಸಾಧ್ಯ! title=
ಬಿಜೆಪಿಗೆ ಅಭೂತಪೂರ್ವ ಜಯ!

ಬೆಂಗಳೂರು: ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ‘ಕಮಲ’ ಪಾಳೆಯದಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. 230 ಕ್ಷೇತ್ರಗಳನ್ನು ಹೊಂದಿರುವ ಮಧ್ಯಪ್ರದೇಶದಲ್ಲಿ ಬಿಜೆಪಿ 165 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಸ್ಪಷ್ಟ ಬಹುಮತ ಪಡೆದುಕೊಂಡಿದೆ. ಸರ್ಕಾರ ರಚಿಸಲು ಮ್ಯಾಜಿಕ್ ನಂಬರ್ 116 ಆಗಿದೆ. ಇಲ್ಲಿ ಕಾಂಗ್ರೆಸ್ ಕೇವಲ 63 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡರೆ, ಇನ್ನುಳಿದ 2 ಕ್ಷೇತ್ರಗಳಲ್ಲಿ ಇತರರು ಗೆಲುವು ಸಾಧಿಸಿದ್ದಾರೆ.

ಅದೇ ರೀತಿ 199 ಕ್ಷೇತ್ರಗಳನ್ನು ಹೊಂದಿರುವ ರಾಜಸ್ಥಾನದಲ್ಲಿ 115 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಕಾಂಗ್ರೆಸ್ ಕೇವಲ 70 ಕ್ಷೇತ್ರ ಮತ್ತು ಇತರರು 14 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಸರ್ಕಾರ ರಚಿಸಲು ಇಲ್ಲಿ ಮ್ಯಾಜಿಕ್ ನಂಬರ್ 100 ಆಗಿದೆ. 90 ಕ್ಷೇತ್ರಗಳನ್ನು ಹೊಂದಿರುವ ಛತ್ತೀಸ್‌ಘಡದಲ್ಲಿ ಬಿಜೆಪಿ 53 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 35 ಕ್ಷೇತ್ರಗಳಲ್ಲಿ ಮತ್ತು 2 ಕ್ಷೇತ್ರಗಳಲ್ಲಿ ಇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ಇದನ್ನೂ ಓದಿ: MP Election Results: ಏಕಾಏಕಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿಗೆ ಬಂದ ಜ್ಯೋತಿರಾದಿತ್ಯ ಸಿಂಧಿಯಾ, ರಹಸ್ಯವೇನು?

ಇನ್ನು 119 ಕ್ಷೇತ್ರಗಳನ್ನು ಹೊಂದಿರುವ ತೆಲಂಗಾಣದಲ್ಲಿ ಕೆ.ಚಂದ್ರಶೇಖರ್ ರಾವ್ ಅವರ ಭಾರತ್ ರಾಷ್ಟ್ರ ಸಮಿತಿ(BRS)ಯ 10 ವರ್ಷಗಳ ಆಡಳಿತ ಅಂತ್ಯವಾಗಿದೆ. ಇಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದ್ದು, 67 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. 36 ಕ್ಷೇತ್ರಗಳಲ್ಲಿ BRS, 9 ಕ್ಷೇತ್ರಗಳಲ್ಲಿ ಬಿಜೆಪಿ, 6 ಕ್ಷೇತ್ರಗಳಲ್ಲಿ AIMIM ಮತ್ತು 1 ಕ್ಷೇತ್ರದಲ್ಲಿ ಇತರರು ಮುನ್ನಡೆ ಕಾಯ್ದುಕೊಂಡಿದ್ದಾರೆ.

ದೇಶಕ್ಕೆ "ನಮೋ" ಗ್ಯಾರಂಟಿ

4 ರಾಜ್ಯಗಳ ಪೈಕಿ 3ರಲ್ಲಿ ‘ಕಮಲ’ ಪಕ್ಷ ಅಭೂತಪೂರ್ವ ಜಯ ಗಳಿಸಿದೆ. 2024ರ ಲೋಕಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಬಿಂಬಿತವಾಗಿರುವ ಈ ಫಲಿತಾಂಶದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದರೆ, ಕಾಂಗ್ರೆಸ್ ಮತ್ತೊಮ್ಮೆ ಹೀನಾಯ ಸೋಲು ಕಂಡಿದೆ. ‘ಕೈ’ ಕೊಟ್ಟಿರುವ ಮತದಾರ ‘ಕಮಲ’ ಪಕ್ಷಕ್ಕೆ ಜೈ ಎಂದಿದ್ದಾನೆ. ಈ ಹಿನ್ನೆಲೆ ಟ್ವೀಟ್ ಮಾಡಿರುವ ಬಿಜೆಪಿ, ‘ದೇಶಕ್ಕೆ "ನಮೋ" ಗ್ಯಾರಂಟಿ; ಪ್ರಧಾನಿ ಮೋದಿ ಇದ್ದರೆ ಎಲ್ಲವೂ ಸಾಧ್ಯ’ವೆಂದು ಹೇಳಿದೆ.

ಸಿಹಿ ವಿತರಿಸಿ ವಿಜಯೋತ್ಸವ ಆಚರಣೆ

ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್‌ಘಡದಲ್ಲಿ ಬಿಜೆಪಿಯು ಅಭೂತಪೂರ್ವ ಜಯ ಗಳಿಸಿದ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ವಿಜಯೋತ್ಸವ ಆಚರಿಸಿ, ಸಿಹಿ ವಿತರಿಸಿ ಸಂಭ್ರಮಾಚರಿಸಲಾಯಿತು. ಈ ಸಂದರ್ಭದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಲೆಹರ್‌ ಸಿಂಗ್‌, ರಾಜ್ಯ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಮಾಜಿ ಶಾಸಕ ನಂದೀಶ್ ರೆಡ್ಡಿ, ಪದಾಧಿಕಾರಿಗಳು, ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.  

ಇದನ್ನೂ ಓದಿ: ಕೆಸಿಆರ್‌ʼಗೆ ಶಾಕ್‌ ಕೊಟ್ಟ ಟ್ರಬಲ್‌ ಶೂಟರ್‌..! ತೆಲಂಗಾಣದಲ್ಲಿ ಮೋಡಿ ಮಾಡಿದ ʼಡಿಕೆಶಿʼ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News