ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಸಾಧ್ಯತೆ: BSY

ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯಬಹುದು ಅಥವಾ ಬಿಜೆಪಿ ಸರ್ಕಾರ ರಚನೆಯಾಗಬಹುದು- ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ

Last Updated : May 25, 2018, 10:35 AM IST
ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ಸಾಧ್ಯತೆ: BSY title=

ಬೆಂಗಳೂರು: ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯಬಹುದು ಅಥವಾ ಬಿಜೆಪಿ ಸರ್ಕಾರ ರಚನೆಯಾಗಬಹುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ 117 ಅಭ್ಯರ್ಥಿಗಳೊಂದಿಗೆ ಗುರುವಾರ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿದ ಬಿ.ಎಸ್. ಯಡಿಯೂರಪ್ಪ ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಮತ್ತೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆ ಇದ್ದು, ಆ ಚುನಾವನೆಯಲ್ಲಿ ನೀವೇ ಅಭ್ಯರ್ಥಿಗಳಾಗಿ ಕಣಕ್ಕಿಳಿಯುವಿರಿ. ಹಾಗಾಗಿ ನಾಳೆಯಿಂದಲೇ ನಿಮ್ಮ ನಿಮ್ಮ ಕ್ಷೇತ್ರದಲ್ಲಿ ಕೆಲಸ ಆರಂಭಿಸಿ ಎಂದು ಸೋತ ಅಭ್ಯರ್ಥಿಗಳಿಗೆ ತಿಳಿಸಿದರು.

ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆಯಬಹುದು ಅಥವಾ ಬಿಜೆಪಿ ಸರ್ಕಾರ ರಚನೆಯಾಗಬಹುದು. ಒಂದು ವೇಳೆ ನಾವೇ ಅಧಿಕಾರಕ್ಕೆ ಬಂದರೆ ನಿಮ್ಮ ಕ್ಷೇತ್ರಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳುತ್ತೇವೆ ಎಂದು ವಿಶ್ವಾಸ ನೀಡಿರುವ ಯಡಿಯೂರಪ್ಪ, ರಾಜ್ಯದಲ್ಲಿ ಮತ್ತೆ ಚುನಾವಣೆ ನಡೆದರೆ ಮಿಷನ್ 150 ಗುರಿ ಮುಟ್ಟಲು ತಕ್ಷಣದಿಂದಲೇ ಕಾರ್ಯೋನ್ಮುಖರಾಗುವಂತೆ ಅಭ್ಯರ್ಥಿಗಳಿಗೆ ಕರೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

Trending News