ಮೂಡಬಿದಿರೆಯಲ್ಲಿ ಮೊದಲ ಬಾರಿಗೆ ಅರಳಿದ ಕಮಲ

      

Last Updated : May 15, 2018, 01:08 PM IST
ಮೂಡಬಿದಿರೆಯಲ್ಲಿ ಮೊದಲ ಬಾರಿಗೆ ಅರಳಿದ ಕಮಲ title=

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಳ ಬಹುಮತ ಪಡೆದು ಸರ್ಕಾರ ರಚನೆಗೆ ಜನಾದೇಶ ಪಡೆಯುವಲ್ಲಿ ಮುನ್ನುಗ್ಗಿದೆ. ಮೂಡಬಿದಿರೆಯಲ್ಲಿ ಇದೇ ಮೊದಲ ಬಾರಿಗೆ ಕಮಲ ಅರಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಳಿಗ್ಗೆ 10 ಗಂಟೆಗೆ ಮೊದಲ ಫಲಿತಾಂಶ ಮೂಡುಬಿದಿರೆ ಕ್ಷೇತ್ರದ ರೂಪದಲ್ಲಿ ಹೊರಬಂದಿದ್ದು, ಬಿಜೆಪಿಯ ಉಮಾನಾಥ್ ಕೋಟ್ಯಾನ್‌ ಅವರು ಜಯಭೇರಿ ಬಾರಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಅಭಯಚಂದ್ರ ಜೈನ್ ವಿರುದ್ಧ ಸುಮಾರು 29 ಸಾವಿರ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ.

Trending News