ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಪ್ರಚಾರ ಮಾಡಲಿದ್ದಾರೆ ಕಿಚ್ಚ ಸುದೀಪ್

ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿನ ಅಭಿಮಾನದಿಂದ ಚಾಮುಂಡೇಶ್ವರಿಯಲ್ಲಿ ಪ್ರಚಾರ.

Last Updated : May 4, 2018, 05:14 PM IST
ಚಾಮುಂಡೇಶ್ವರಿಯಲ್ಲಿ ಸಿಎಂ ಪರ ಪ್ರಚಾರ ಮಾಡಲಿದ್ದಾರೆ ಕಿಚ್ಚ ಸುದೀಪ್ title=

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲಿನ ಅಭಿಮಾನದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಪರ ಪ್ರಚಾರ ಮಾಡುವುದಾಗಿ ಸ್ಯಾಂಡಲ್ ವುಡ್ ನ ಖ್ಯಾತ ನಟ ಕಿಚ್ಚ ಸುದೀಪ್ ತಿಳಿಸಿದ್ದಾರೆ.

ನಾನು ನಟ, ನಟನಾಗಿಯೇ ಇರುತ್ತೇನೆ. ನಾನು ಯಾವುದೇ ಪಕ್ಷದ ಪರ ಪ್ರಚಾರ ಮಾಡುವುದಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಿಎಂ ಆಗುವ ಮೊದಲು ನಮ್ಮೊಂದಿಗೆ ಹೇಗಿದ್ದರೋ ಈಗಲೂ ಹಾಗೆ ಇದ್ದಾರೆ. ಸಿದ್ದರಾಮಯ್ಯ ನನಗೆ ಬಹಳ ಆತ್ಮೀಯರು, ಅವರ ಮೇಲಿನ ಪ್ರೀತಿ ಹಾಗೂ ಅಭಿಮಾನದಿಂದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಅವರ ಪ್ರಚಾರ ಮಾಡುತ್ತೇನೆ ಎಂದು ಕಿಚ್ಚ ತಿಳಿಸಿದ್ದಾರೆ.

Trending News