Karnataka Budget 2024: ಶೇ.3ರ ಬಡ್ಡಿ ದರದಲ್ಲಿ 15ಲಕ್ಷದ ವರೆಗೆ ಸಾಲ : ಸಿಎಂ ಘೋಷಣೆ

Karnataka Budget 2024:2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದ್ದಾರೆ.   

Written by - Ranjitha R K | Last Updated : Feb 16, 2024, 11:31 AM IST
  • ಸಹಕಾರ ವಲಯವನ್ನು ಬಲಪಡಿಸುವ ನಿಟ್ಟಿನಲ್ಲಿ ಆದ್ಯತೆ
  • ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕೈಗೊಂಡಿರುವ ಕ್ರಮ
  • ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಬಿಡುಗಡೆ
Karnataka Budget 2024: ಶೇ.3ರ ಬಡ್ಡಿ ದರದಲ್ಲಿ 15ಲಕ್ಷದ ವರೆಗೆ ಸಾಲ : ಸಿಎಂ ಘೋಷಣೆ  title=

ಬೆಂಗಳೂರು:Latest news on Karnataka state budget 2024:  ಗ್ರಾಮೀಣ ಆರ್ಥಿಕತೆಯ ಜೀವನಾಡಿಯಾಗಿರುವ ಸಹಕಾರ ವಲಯವನ್ನು ಬಲಪಡಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ 2023-24ನೇ ಸಾಲಿನಲ್ಲಿ ಬಡ್ಡಿ ರಹಿತ ಅಲ್ಪಾವಧಿ ಸಾಲವನ್ನು 3 ಲಕ್ಷ ರೂ.ನಿಂದ 5 ಲಕ್ಷ ರೂ.ಗಳಿಗೆ ಹಾಗೂ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು ಶೇ.3ರ ಬಡ್ಡಿ ದರದಲ್ಲಿ 10 ಲಕ್ಷ ರೂ.ನಿಂದ 15 ಲಕ್ಷ ರೂ.ಗಳಿಗೆ ಏರಿಸುವ ಮಹತ್ತರ ಕ್ರಮ ತೆಗೆದುಕೊಂಡಿದ್ದಾರೆ. ಪ್ರಸಕ್ತ ಸಾಲಿನಲ್ಲಿ ರಾಜ್ಯದ 36 ಲಕ್ಷಕ್ಕಿಂತ ಹೆಚ್ಚಿನ ರೈತರಿಗೆ 27,000 ಕೋಟಿ ರೂ.ಗಳಷ್ಟು ದಾಖಲೆಯ ಸಾಲಗಳನ್ನು ವಿತರಿಸುವ ಗುರಿ ಹೊಂದಲಾಗಿದೆ ಎಂದು ಸಿಎಂ ಬಜೆಟ್ ನಲ್ಲಿ ಘೋಷಿಸಿದ್ದಾರೆ. 

ಸಹಕಾರಿ ಬ್ಯಾಂಕುಗಳ ಆರ್ಥಿಕ ಸ್ಥಿರತೆಯನ್ನು ಕಾಪಾಡಲು ಕೈಗೊಂಡಿರುವ ಕ್ರಮ : 
ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಬಿಡುಗಡೆ : 

1.ಹಿಂದಿನ ಅವಧಿಯಲ್ಲಿ 50,000 ರೂ. ವರೆಗಿನ ರೈತರ ಬೆಳೆ ಸಾಲ ಮನ್ನಾ ಯೋಜನೆಯಡಿ 21 ಲಕ್ಷ ರೈತರಿಗೆ 7,631 ಕೋಟಿ ರೂ.ಬೆಳೆ ಸಾಲ ಮನ್ನಾ ಮಾಡಲಾಗಿತ್ತು. ಈ ಯೋಜನೆಯಡಿಯಲ್ಲಿ ಡಿಸಿಸಿ ಬ್ಯಾಂಕುಗಳಿಗೆ ಸುಮಾರು 132 ಕೋಟಿ ರೂ. ಬಿಡುಗಡೆಯಾಗದ ಪರಿಣಾಮ ಬ್ಯಾಂಕುಗಳು ಆರ್ಥಿಕ ಸಂಕಷ್ಟಕ್ಕೆ ಒಳಗಾಗಬೇಕಾಯಿತು. ಆದ್ದರಿಂದ, ಡಿಸಿಸಿ ಬ್ಯಾಂಕುಗಳಿಗೆ ಬಾಕಿ ಇರುವ 132 ಕೋಟಿ ರೂ. ಮೊತ್ತ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ. 

ಇದನ್ನೂ ಓದಿ Karnataka Budget 2024: ಕೆ ಸಿ ಜನರಲ್ ಆಸ್ಪತ್ರೆ ನವೀಕರಣ, ಕ್ಯಾನ್ಸರ್ ಚಿಕಿತ್ಸೆಗೆ ಭರಪೂರ ಅನುದಾನ

ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ :
ಡಿಸಿಸಿ ಮತ್ತು ಪಿಕಾರ್ಡ್ ಬ್ಯಾಂಕುಗಳ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಬಡ್ಡಿ ಮನ್ನಾ ಮಾಡಲು ನಮ್ಮ ಸರ್ಕಾರ ತೀರ್ಮಾನ ಮಾಡಲಾಗಿದೆ.  ಈ ನಿರ್ಧಾರದಿಂದ 57,000 ರೈತರಿಗೆ ಅನುಕೂಲವಾಗಲಿದೆ. ಅಲ್ಲದೆ, ಸುಮಾರು ಡಿಸಿಸಿ/ಪಿಕಾರ್ಡ್ ಬ್ಯಾಂಕುಗಳಿಗೆ 496 ಕೋಟಿ ರೂ.ಗಳಷ್ಟು ಸಾಲ ಮರುಪಾವತಿಯಾಗುವ ನಿರೀಕ್ಷೆಯಿದ್ದು, ಬ್ಯಾಂಕುಗಳ ಆರ್ಥಿಕ ಪರಿಸ್ಥಿತಿಯಲ್ಲಿ ಗಣನೀಯ ಸುಧಾರಣೆಯಾಗಲಿದೆ.

ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರಕ್ಕೆ ಒತ್ತಾಯ : 
ಕರ್ನಾಟಕ ಕೃಷಿ ಬೆಲೆ ಆಯೋಗವು ತನ್ನ ವರದಿಯಲ್ಲಿ 26 ಬೆಳೆಗಳನ್ನು ಕರ್ನಾಟಕದಲ್ಲಿ ಪ್ರಮುಖವಾದವು ಎಂದು ಗುರುತಿಸಿದ್ದು, ಇವುಗಳಲ್ಲಿ 16ಕ್ಕೆ ಮಾತ್ರ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ ಘೋಷಿಸುತ್ತಿದೆ.ಆದ್ದರಿಂದ ಕರ್ನಾಟಕ ರಾಜ್ಯದ ಇತರ ಪ್ರಮುಖ ಬೆಳೆಗಳಾದ ಅಡಿಕೆ, ಈರುಳ್ಳಿ, ದ್ರಾಕ್ಷಿ, ಮಾವು, ಬಾಳೆ ಮತ್ತು ಇತರ ತೋಟಗಾರಿಕಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ಘೋಷಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇದನ್ನೂ ಓದಿ : Karnataka Budget 202 : ರಾಜ್ಯ ಬಜೆಟ್ ನಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಬಂಪರ್

ಕೃಷಿ ತಜ್ಞ ಎಂ.ಎಸ್.ಸ್ವಾಮಿನಾಥನ್ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಷಯ. ಅವರ ಅಧ್ಯಕ್ಷತೆಯ ಸಮಿತಿ ವರದಿ ಶಿಫಾರಸು ಮಾಡಿದಂತೆ ಕನಿಷ್ಠ ಬೆಂಬಲ ಬೆಲೆಯನ್ನು ವ್ಯವಸಾಯಕ್ಕೆ ತಗಲುವ ವೆಚ್ಚ ಮತ್ತು ಶೇ.50 ರಷ್ಟು ಲಾಭಾಂಶ ಆಧಾರದಡಿ ನಿಗದಿ ಮಾಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News