Govt Schemes : ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂ.ವರೆಗೆ ಸಾಲ! ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಿಗುವುದು ಭರ್ಜರಿ ಲಾಭ!

Pradhanamantri mudra Yojana :ಕೇಂದ್ರದ ನರೇಂದ್ರ ಮೋದಿ ಸರ್ಕಾರವು ತನ್ನ ಮೊದಲ ಅವಧಿಯಲ್ಲಿ ಕೈಗೆಟುಕುವ ಬಡ್ಡಿದರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಅನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, ಸಣ್ಣ ವ್ಯಾಪಾರ ಆರಂಭಿಸಲು 10 ಲಕ್ಷ ರೂ.ವರೆಗೆ ಸಾಲವನ್ನು ನೀಡಲಾಗುತ್ತದೆ. 

Written by - Ranjitha R K | Last Updated : Jan 26, 2024, 09:55 AM IST
  • ಕೇಂದ್ರ ಸರ್ಕಾರ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ
  • ಪ್ರಧಾನ ಮಂತ್ರಿ ಮುದ್ರಾ ಯೋಜನೆ ಕೂಡಾ ಅವುಗಳಲ್ಲಿ ಒಂದು
  • ಸಣ್ಣ ವ್ಯಾಪಾರ ಆರಂಭಿಸಲು 10 ಲಕ್ಷ ರೂ.ವರೆಗೆ ಸಾಲವನ್ನು ನೀಡಲಾಗುತ್ತದೆ.
Govt Schemes : ಅತ್ಯಂತ ಕಡಿಮೆ ಬಡ್ಡಿ ದರದಲ್ಲಿ 10 ಲಕ್ಷ ರೂ.ವರೆಗೆ ಸಾಲ! ಕೇಂದ್ರ ಸರ್ಕಾರದ ಈ ಯೋಜನೆಯಿಂದ ಸಿಗುವುದು ಭರ್ಜರಿ ಲಾಭ! title=

Pradhanamantri mudra Yojana : ಕೇಂದ್ರ ಸರ್ಕಾರದ ಇಂತಹ ಹಲವು ಯೋಜನೆಗಗಳಿಂದ ಜನಸಾಮಾನ್ಯರ ಭವಿಷ್ಯ ಬದಲಾಗಿದೆ. ಅಂತಹ ಒಂದು ಯೋಜನೆ ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY).ಈ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಕೈಗೆಟಕುವ ಬಡ್ಡಿದರದಲ್ಲಿ ಸಾಲ ನೀಡಲಾಗುವುದು.  ಸಣ್ಣ ವ್ಯಾಪಾರ ಆರಂಭಿಸಲು 10 ಲಕ್ಷ ರೂ.ವರೆಗೆ ಸಾಲವನ್ನು ನೀಡಲಾಗುತ್ತದೆ. 

ಮುದ್ರಾ ಯೋಜನೆಯ ವಿವರಗಳು :
ಕೇಂದ್ರದ ನರೇಂದ್ರ ಮೋದಿ ಸರ್ಕಾರವು ತನ್ನ ಮೊದಲ ಅವಧಿಯಲ್ಲಿ ಕೈಗೆಟುಕುವ ಬಡ್ಡಿದರದಲ್ಲಿ ಪ್ರಧಾನ ಮಂತ್ರಿ ಮುದ್ರಾ ಯೋಜನೆ (PMMY) ಅನ್ನು ಪ್ರಾರಂಭಿಸಿತು. ಈ ಯೋಜನೆಯಡಿಯಲ್ಲಿ, ಸಣ್ಣ ವ್ಯಾಪಾರ ಆರಂಭಿಸಲು 10 ಲಕ್ಷ ರೂ.ವರೆಗೆ ಸಾಲವನ್ನು ನೀಡಲಾಗುತ್ತದೆ. 

ಇದನ್ನೂ ಓದಿ :Union Budget 2024: ಶ್ರೀಸಾಮಾನ್ಯರಿಗೊಂದು ಸಂತಸದ ಸುದ್ದಿ, ದ್ವಿಗುಣವಾಗಲಿದೆ ಈ ಸರ್ಕಾರಿ ಯೋಜನೆಯ ಮಿತಿ!

ಶೆಡ್ಯೂಲ್ಡ್ ವಾಣಿಜ್ಯ ಬ್ಯಾಂಕುಗಳು (SCBs), ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು (RRBs), ಬ್ಯಾಂಕಿಂಗ್ ಅಲ್ಲದ ಹಣಕಾಸು ಕಂಪನಿಗಳು (NBFCs) ಮತ್ತು ಮೈಕ್ರೋ ಫೈನಾನ್ಸ್ ಸಂಸ್ಥೆಗಳು (MFI ಗಳು)  ಈ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಸಾಲ ನೀಡುತ್ತದೆ. 

ಸಾಲದ ಮೂರು ವಿಭಾಗಗಳು :
ಈ ಸಾಲವನ್ನು ಮೂರು ವಿಭಾಗಗಲ್ಲಿ ನೀಡಲಾಗುತ್ತದೆ. ಅವುಗಳೆಂದರೆ ಶಿಶು, ಕಿಶೋರ ಮತ್ತು ತರುಣ. ಸಾಲದ ಮೊತ್ತವು ಎಲ್ಲಾ ಮೂರು ವಿಭಾಗಗಳಲ್ಲಿ ಬದಲಾಗುತ್ತದೆ.
ಶಿಶು ವಿಭಾಗ : 50,000 ರೂ.ವರೆಗೆ ಸಾಲ.
ಕಿಶೋರ :   50,000 ಕ್ಕಿಂತ ಹೆಚ್ಚು ಮತ್ತು  5 ಲಕ್ಷಕ್ಕಿಂತ ಕಡಿಮೆ ಸಾಲ
ತರುಣ್: 5 ಲಕ್ಷದಿಂದ 10 ಲಕ್ಷ ರೂ.ವರೆಗಿನ ಸಾಲ  

ಇದನ್ನೂ ಓದಿ : Budget 2024 : ಮಹಿಳೆಯರ ಪಾಲಿಗೆ ವಿಶೇಷವಾಗಿರಲಿದೆ ಈ ಬಜೆಟ್ !ಈಡೇರಬಹುದು ಈ ನಿರೀಕ್ಷೆಗಳು

ಅಂಕಿಅಂಶಗಳು ಏನು ಹೇಳುತ್ತವೆ? :
ಸರ್ಕಾರದ ಅಂಕಿಅಂಶಗಳ ಪ್ರಕಾರ, ಕಳೆದ ಐದು ಹಣಕಾಸು ವರ್ಷಗಳಲ್ಲಿ ಈ ಯೋಜನೆಯಡಿಯಲ್ಲಿ 17.77 ಲಕ್ಷ ಕೋಟಿ ರೂಪಾಯಿಗಳ ಮಂಜೂರಾದ ಮೊತ್ತದೊಂದಿಗೆ 28.89 ಕೋಟಿಗೂ ಹೆಚ್ಚು ಸಾಲಗಳನ್ನು ನೀಡಲಾಗಿದೆ.ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಡಾ.ಭಾಗವತ್ ಕಿಸನರಾವ್ ಕರಾಡ್ ಕೂಡ ಸದನಕ್ಕೆ ಈ ಮಾಹಿತಿ ನೀಡಿದ್ದಾರೆ. 7.93 ಲಕ್ಷ ಕೋಟಿ ಮೊತ್ತ ಅಂದರೆ 19.22 ಕೋಟಿಗೂ ಹೆಚ್ಚು ಸಾಲವನ್ನು ಮಹಿಲಯುಯರಿಗೆ ನೀಡಲಾಗಿದೆ. ಅಂದರೆ ಈ ಯೋಜನೆಯಡಿ ಮಂಜೂರಾದ ಒಟ್ಟು ಸಾಲದ ಶೇಕಡಾ 67 ರಷ್ಟು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News