Interim Budget 2024: ಸ್ಟಾರ್ಟಪ್‌ಗಳಿಗೆ ವಿಶೇಷ ಲಾಭ ಘೋಷಿಸಿದ ನಿರ್ಮಲಾ ಸೀತಾರಾಮನ್

Budget 2024:ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್ ಅನ್ನು ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸಹ, ಸ್ಟಾರ್ಟಪ್‌ಗಳಿಗೆ ನೀಡಲಾದ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.  

Written by - Ranjitha R K | Last Updated : Feb 1, 2024, 01:43 PM IST
  • 2024ರ ಬಜೆಟ್ ಮಂಡನೆ
  • ಸ್ಟಾರ್ಟಪ್‌ ಇಕೋ ಸಿಸ್ಟಮ್ ಗೆ ಬೆಂಬಲ
  • ಯುವ ಉದ್ಯಮಿಗಳಿಗೆ ಲಾಭ
Interim Budget 2024: ಸ್ಟಾರ್ಟಪ್‌ಗಳಿಗೆ  ವಿಶೇಷ ಲಾಭ ಘೋಷಿಸಿದ ನಿರ್ಮಲಾ ಸೀತಾರಾಮನ್  title=

Budget 2024 : ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2024 ರ ಬಜೆಟ್  ಮಂಡಿಸಿದ್ದಾರೆ. ಆದಾಯ ತೆರಿಗೆಯಲ್ಲಿ ಯಾವುದೇ ವಿನಾಯಿತಿ ನೀಡದಿದ್ದರೂ ಸ್ಟಾರ್ಟಪ್‌ಗಳಿಗೆ ಕೆಲವು ವಿಶೇಷ ಪ್ರಯೋಜನಗಳ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಅಲ್ಲದೆ, IFSC ಯೂನಿಟ್ ನ ಸಾವೆರಿನ್ ವೆಲ್ತ್ ಅಥವಾ ಪಿಂಚಣಿ ನಿಧಿಯ ಪರವಾಗಿ ಮಾಡುವ ಹೂಡಿಕೆಗಳ ಮೇಲಿನ ತೆರಿಗೆ ವಿನಾಯಿತಿ ಮತ್ತು ಕೆಲವು ಐಎಫ್‌ಎಸ್‌ಸಿ ಘಟಕಗಳ ಆದಾಯದ ಮೇಲಿನ ತೆರಿಗೆ ವಿನಾಯಿತಿಯನ್ನು ವಿಸ್ತರಿಸಲಾಗಿದೆ.ಇಲ್ಲಿಯವರೆಗೆ ಈ ಕೊನೆಯ ದಿನಾಂಕ 31 ಮಾರ್ಚ್ 2024 ಆಗಿದ್ದು, ಅದನ್ನು  ಮಾರ್ಚ್ 31  2025ರವರೆಗೆ ವಿಸ್ತರಿಸಲಾಗಿದೆ.

ಸ್ಟಾರ್ಟಪ್‌ ಇಕೋ ಸಿಸ್ಟಮ್ ಗೆ ಬೆಂಬಲ : 
ಬಜೆಟ್ ಭಾಷಣಡ ವೇಳೆ ನಿರ್ಮಲಾ ಸೀತಾರಾಮನ್ ಸ್ಟಾರ್ಟಪ್‌ಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸ್ಟಾರ್ಟಪ್‌ಗಳಿಗೆ ಸರ್ಕಾರ ಹೇಗೆ ಸಹಾಯ ಮಾಡಿದೆ ಎನ್ನುವುದನ್ನು ವಿವರಿಸಿದ ಸಚಿವರು ಉದ್ಯೋಗವನ್ನು ಸೃಷ್ಟಿಸುವಲ್ಲಿ ಸ್ಟಾರ್ಟಪ್‌ಗಳು ಯಾವ ರೀತಿ ಪ್ರಮುಖ  ಪಾತ್ರವನ್ನು ವಹಿಸಿವೆ ಎನ್ನುವುದನ್ನು ತಿಳಿಸಿದ್ದಾರೆ. ಸ್ಟಾರ್ಟ್‌ಅಪ್‌ಗಳು ರೈತರಿಗೆ ಹೇಗೆ ಸಹಾಯಕವಾಗಿವೆ ಎಂಬುದನ್ನು ಕೂಡಾ ಹೇಳಿದ್ದಾರೆ. 

ಇದನ್ನೂ ಓದಿ : Union Budget 2024: ಸರ್ವೈಕಲ್ ಕ್ಯಾನ್ಸರ್ ನಿವಾರಣೆಗೆ ವ್ಯಾಕ್ಸಿನೇಶನ್, ರಕ್ಷಣಾ ಕ್ಷೇತ್ರದಲ್ಲಿ ಡೀಪ್ ತಂತ್ರಜ್ಞಾನಕ್ಕೆ ಒತ್ತು

ಕಳೆದ 10 ವರ್ಷಗಳಲ್ಲಿ ಭಾರತದ ಆರ್ಥಿಕತೆ ಉತ್ತಮ ಸಾಧನೆ ಮಾಡಿದೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಅಗ್ರಿಟೆಕ್ ಸ್ಟಾರ್ಟ್‌ಅಪ್‌ಗಳನ್ನು ಉಲ್ಲೇಖಿಸಿ ಮಾತನಾಡಿದ ಸಚಿವರು,  ಸ್ಟಾರ್ಟ್‌ಅಪ್‌ಗಳು ರೈತರಿಗೆ ಸಾಕಷ್ಟು ಸಹಾಯ ಮಾಡಿದೆ ಎಂದಿದ್ದಾರೆ. ತಂತ್ರಜ್ಞಾನದ ಸಹಾಯದಿಂದ ಕೃಷಿ ಸುಧಾರಿಸುವಂತಾಗಿದೆ. ರೈತರಿಗೆ ದೊಡ್ಡ ಮಾರುಕಟ್ಟೆಗಳಿಗೆ ಪ್ರವೇಶವನ್ನು ಒದಗಿಸುತ್ತಿದೆ. ಇದು ರೈತರ ಆದಾಯವನ್ನು ಹೆಚ್ಚಿಸುವ ಮೋದಿ ಸರ್ಕಾರದ ಯೋಜನೆಗೆ ಸಹಾಯ ಮಾಡುತ್ತಿದೆ ಎಂದು ಕೊಂಡಾಡಿದ್ದಾರೆ. 

ಯುವ ಉದ್ಯಮಿಗಳಿಗೆ ಲಾಭ :
ಫಂಡ್ ಆಫ್ ಫಂಡ್ಸ್, ಸ್ಟಾರ್ಟ್‌ಅಪ್ ಇಂಡಿಯಾ ಮತ್ತು ಸ್ಟಾರ್ಟ್‌ಅಪ್ ಕ್ರೆಡಿಟ್ ಗ್ಯಾರಂಟಿಯಂತಹ ಯೋಜನೆಗಳ ಸಹಾಯದಿಂದ ಯುವಕರು ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ ಎಂದು ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಮಹಿಳಾ ಉದ್ಯಮಶೀಲತೆಯನ್ನು ಉತ್ತೇಜಿಸುವ ಕುರಿತು ನಿರ್ಮಲಾ ಸೀತಾರಾಮನ್ ಅವರು ಮಹಿಳಾ ಉದ್ಯಮಿಗಳಿಗೆ 30 ಕೋಟಿ ಮುದ್ರಾ ಸಾಲವನ್ನು ನೀಡಲಾಗಿದೆ ಎಂದು ಹೇಳಿದರು. ದುಡಿಯುವ ಮಹಿಳೆಯರ ಸಂಖ್ಯೆ ವೇಗವಾಗಿ ಹೆಚ್ಚುತ್ತಿದೆ ಎಂದು ಹೇಳಿದರು. ನಿರ್ಮಲಾ ಸೀತಾರಾಮನ್ ಅವರು ಎಂಎಸ್‌ಎಂಇಗೆ ಸಂಬಂಧಿಸಿದ ನೀತಿಗಳನ್ನು ಅಂದರೆ ಸಣ್ಣ, ಮಧ್ಯಮ ಮತ್ತು ಸಣ್ಣ ಪ್ರಮಾಣದ ಕೈಗಾರಿಕೆಗಳನ್ನು ಸಹ ಮಾಡಲಾಗಿದೆ. ಎಂಎಸ್‌ಎಂಇಗಳಿಗೆ ವ್ಯವಹಾರವನ್ನು ಸುಲಭಗೊಳಿಸುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ. 

ಇದನ್ನೂ ಓದಿ : Lakhpati Didi Yojana: ಏನಿದು ಲಖ್ಪತಿ ದೀದಿ ಯೋಜನೆ? ಇದರಿಂದ ಯಾರಿಗೆ ಲಾಭ?

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News