Bengaluru: ಕತ್ತು ಕೊಯ್ದು ಸರ್ಕಾರಿ ಮಹಿಳಾ ಅಧಿಕಾರಿ ಭೀಕರ ಹತ್ಯೆ..!

Bengaluru Murder Case: ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಒಬ್ಬರೇ ಇದ್ದಾಗ  ದುಷ್ಕರ್ಮಿಗಳು ಬಂದು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ.

Written by - Puttaraj K Alur | Last Updated : Nov 5, 2023, 01:00 PM IST
  • ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿಯ ಭೀಕರ ಕೊಲೆ
  • ಸುಬ್ರಹ್ಮಣ್ಯಪುರ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‍ನಲ್ಲಿ ಘಟನೆ
  • ಶನಿವಾರ ರಾತ್ರಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ
Bengaluru: ಕತ್ತು ಕೊಯ್ದು ಸರ್ಕಾರಿ ಮಹಿಳಾ ಅಧಿಕಾರಿ ಭೀಕರ ಹತ್ಯೆ..! title=
ಸರ್ಕಾರಿ ಮಹಿಳಾ ಅಧಿಕಾರಿ ಭೀಕರ ಹತ್ಯೆ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಸರ್ಕಾರಿ ಮಹಿಳಾ ಅಧಿಕಾರಿ ಭೀಕರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ (45) ಎಂಬವರನ್ನು ಕತ್ತುಕೊಯ್ದು ಹತ್ಯೆ ಮಾಡಲಾಗಿದೆ. ಶನಿವಾರ(ನ.4) ರಾತ್ರಿ ಮನೆಗೆ ನುಗ್ಗಿ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುಬ್ರಹ್ಮಣ್ಯಪುರ ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕಲ್ಲಸಂದ್ರದ ಗೋಕುಲ್‌ ಅಪಾರ್ಟ್ಮೆಂಟ್‍ನಲ್ಲಿ ಈ ಘಟನೆ ನಡೆದಿದೆ. ಒಬ್ಬರೇ ಇದ್ದಾಗ  ದುಷ್ಕರ್ಮಿಗಳು ಬಂದು ಮಹಿಳಾ ಅಧಿಕಾರಿಯನ್ನು ಕೊಲೆ ಮಾಡಿ ಎಸ್ಕೇಪ್ ಆಗಿದ್ದಾರೆ. ಕೊಲೆಯಾಗಿರುವ ಪ್ರತಿಮಾ ಅವರು ಬೆಂಗಳೂರು ಗ್ರಾಮಾಂತರ ಭೂಗರ್ಭಶಾಸ್ತ್ರ ವಿಭಾಗದ ಹಿರಿಯ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇದನ್ನೂ ಓದಿ: ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾವಣೆ ಫಿಕ್ಸ್

ಪ್ರತಿಮಾ ಶಿವಮೊಗ್ಗದ ತಿರ್ಥಹಳ್ಳಿ ಮೂಲದವರು. ಗಂಡ ಮತ್ತು ಮಗ ತೀರ್ಥಹಳ್ಳಿಯಲ್ಲಿಯೇ ವಾಸವಿದ್ದರು. ಶನಿವಾರ ರಾತ್ರಿ 8 ಗಂಟೆಗೆ ಕಚೇರಿಯಿಂದ ಮನೆಗೆ ಪ್ರತಿಮಾರನ್ನು ಚಾಲಕ ಡ್ರಾಪ್‌ ಮಾಡಿ ತೆರಳಿದ್ದ. ಬಳಿಕ ಹಂತಕರು ಬಂದು ಕೊಲೆ ಮಾಡಿ ಹೋಗಿದ್ದಾರೆ ಎನ್ನಲಾಗಿದೆ. ಮನೆಯೊಳಗೆ ಬಂದು ಕೊಲೆ ಮಾಡಿರುವ ಕಾರಣ ಮೇಲ್ನೋಟಕ್ಕೆ ಇದು ಪಕ್ಕಾ ಪ್ರೀ ಪ್ಲಾನ್ ಮರ್ಡರ್ ಎಂಬ ಶಂಕೆ ವ್ಯಕ್ತವಾಗಿದೆ.

ಶನಿವಾರ ರಾತ್ರಿ ಪ್ರತಿಮಾರಿಗೆ ಅಣ್ಣ ಕರೆ ಮಾಡಿದ್ದರಂತೆ. ಆದರೆ ಅವರು ಕರೆ ಸ್ವೀಕರಿಸಿರಲಿಲ್ಲ. ಬೆಳಗ್ಗೆ ಮನೆಗೆ ಬಂದು ನೋಡಿದಾಗ ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮನೆಯಲ್ಲಿ ಯಾವುದೇ ವಸ್ತುಗಳು ಕಾಣೆಯಾಗಿಲ್ಲ. ಹೀಗಾಗಿ ಇದೊಂದು ಪೂರ್ವನಿಯೋಜಿತ ಕೊಲೆ ಅಂತಾ ತಿಳಿದುಬಂದಿದೆ. ಪರಿಚಿತರೇ ಕೊಲೆ ಮಾಡಿರಬಹುದು ಅನ್ನೋ ಅನುಮಾನ ಇರುವ ಹಿನ್ನೆಲೆ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿದ ಡಿಸಿಪಿ ರಾಹುಲ್ ಶಹಪುರವಾಡ್ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಪಟ್ಟಕ್ಕಾಗಿ ನಾನು ಪ್ರಯತ್ನ ಮಾಡಿದ್ದೇ, ಆದ್ರೆ ಆಗಲಿಲ್ಲ : ಶ್ರೀರಾಮುಲು

ತೀರ್ಥಹಳ್ಳಿಯ ತುಡುಕಿ ಗ್ರಾಮದಲ್ಲಿ ಪ್ರತಿಮಾರ ಗಂಡ ಮತ್ತು ಪುತ್ರ ವಾಸವಿದ್ದಾರೆ. ಕಳೆದ 18 ವರ್ಷಗಳ ಹಿಂದೆ ಪ್ರತಿಮಾ ಹಾಗೂ ಸತ್ಯನಾರಾಯಣ ವಿವಾಹವಾಗಿದ್ದರು. ಮದುವೆಯ ಬಳಿಕ ಪ್ರತಿಮಾಗೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯಲ್ಲಿ ಸರ್ಕಾರಿ ಕೆಲಸ ಸಿಕ್ಕಿತು. ಈ ಹಿನ್ನೆಲೆ ಕೆಲಸದ ನಿಮಿತ್ತ ಬೆಂಗಳೂರಿಗೆ ಶಿಫ್ಟ್ ಆಗಿದ್ದ ಅವರು ಕಳೆದ 8 ವರ್ಷಗಳಿಂದ ಬಾಡಿಗೆ ಮನೆಯಲ್ಲಿ ವಾಸವಿದ್ದರು.

ಪ್ರತಿಮಾರನ್ನು ಉಸಿರುಗಟ್ಟಿಸಿ ಆ ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಈ ಬಗ್ಗೆ ಎಫ್‍ಎಸ್‍ಎಲ್ ಟೀಂ ಪರಿಶೀಲನೆ ನಡೆಸ್ತಿದೆ. ಪ್ರತಿಮಾರನ್ನು ಕೊಲೆಗೈದಿರುವ ಆರೋಪಿಗಳ ಪತ್ತೆಗಾಗಿ 3 ವಿಷೇಶ ತಂಡಗಳನ್ನು ರಚಿಸಲಾಗಿದೆ.  ಪ್ರಾಥಮಿಕ ತನಿಖೆಯಲ್ಲಿ ಕೊಲೆಗೆ ನಿಖರ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಕೊಲೆ ಮಾಡಿದವರನ್ನು ಆದಷ್ಟು ಬೇಗ ಪತ್ತೆ ಮಾಡಲಾಗುವುದು ಎಂದು ಡಿಸಿಪಿ ರಾಹುಲ್ ಶಹಪುರವಾಡ್ ತಿಳಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News