ಪ್ರೀತಿ ಹೆಸರಲ್ಲಿ ಓರ್ವ, ಬ್ಲಾಕ್ ಮೇಲ್ ಮಾಡಿ ಮತ್ತೋರ್ವನಿಂದ ಬಾಲಕಿಯ ಅತ್ಯಾಚಾರ: ಕೀಚಕರಿಗೆ 20 ವರ್ಷ ಜೈಲು

ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು  ಅಪ್ರಾಪ್ತೆಯನ್ನು  ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. 

Written by - Yashaswini V | Last Updated : Apr 18, 2024, 07:09 PM IST
  • ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿದ್ದು ಸಾಕ್ಷ್ಯಾಧಾರಗಳಿಂದ ಸಾಬೀತು
  • ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಅಪ್ರಾಪ್ತೆ ಅಪಹರಿಸಿ ಬಳಿಕ ಅತ್ಯಾಚಾರ ಎಸಗಿದ್ದ ಸಿದ್ದಮಲ್ಲು
  • ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರಕ್ಕೆ ಬ್ಲಾಕ್ ಮೇಲ್ ಮಾಡಿ ಮಹೇಶ್ ಪ್ರಸಾದ್ ಎಂಬಾತನಿಂದ ಅತ್ಯಾಚಾರ
ಪ್ರೀತಿ ಹೆಸರಲ್ಲಿ  ಓರ್ವ, ಬ್ಲಾಕ್ ಮೇಲ್ ಮಾಡಿ ಮತ್ತೋರ್ವನಿಂದ ಬಾಲಕಿಯ ಅತ್ಯಾಚಾರ: ಕೀಚಕರಿಗೆ 20 ವರ್ಷ ಜೈಲು title=

ಚಾಮರಾಜನಗರ: ಅಪ್ರಾಪ್ತ ಬಾಲಕಿಯನ್ನು ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿರುವುದು ಸಾಬೀತಾದ ಹಿನ್ನೆಲೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು  ಸತ್ರ ಎಫ್ಟಿಎಸ್ಸಿ ವಿಶೇಷ ಪೋಕ್ಸೋ ನ್ಯಾಯಾಲಯವು 20 ವರ್ಷ ಕಠಿಣ ಶಿಕ್ಷೆ ವಿಧಿಸಿ ಗುರುವಾರ ಆದೇಶಿಸಿದೆ.

ಚಾಮರಾಜನಗರ ತಾಲೂಕಿನ ಆಲೂರು ಗ್ರಾಮದ ಮಹೇಶ್ ಪ್ರಸಾದ್, ವೆಂಕಟಯ್ಯನಛತ್ರ ಗ್ರಾಮದ ಸಿದ್ದಮಲ್ಲು ಶಿಕ್ಷೆಗೊಳಗಾದ ಅಪರಾಧಿಗಳು. ಇವರಿಬ್ಬರು ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರ ಎಸಗಿ ಲೈಂಗಿಕ ದೌರ್ಜನ್ಯ ನೀಡಿದ್ದು ಸಾಕ್ಷ್ಯಾಧಾರಗಳಿಂದ ಸಾಬೀತಾದ ಹಿನ್ನೆಲೆ ಚಾಮರಾಜನಗರ ಅಧಿಕ ಜಿಲ್ಲಾ ಮತ್ತು  ಸತ್ರ ಎಫ್ಟಿಎಸ್ಸಿ ವಿಶೇಷ ಪೋಕ್ಸೋ ನ್ಯಾಯಾಧೀಶರಾದ ಎನ್.ಆರ್. ಲೋಕಪ್ಪ 20 ವರ್ಷ ಕಠಿಣ ಶಿಕ್ಷೆ, 55 ಸಾವಿರ ರೂ. ದಂಡ ವಿಧಿಸಿದ್ದಾರೆ.

ಇದನ್ನೂ ಓದಿ- ಹಿಂದಿ ಟೀಚರ್ ನಿಂದ ಹೀನಾಯ ಕೃತ್ಯ: ನೊಂದ ಬಾಲಕನಿಗೆ 1 ಲಕ್ಷ ರೂ. ಪರಿಹಾರ

ಏನಿದು ಪ್ರಕರಣ..? 
ವರಸೆಯಲ್ಲಿ ಸ್ವಂತ ತಂಗಿ ಎಂದು ಗೊತ್ತಿದ್ದರೂ ಸಿದ್ದಮಲ್ಲು  ಅಪ್ರಾಪ್ತೆಯನ್ನು  ಅಪಹರಿಸಿ ಮದುವೆ ಮಾಡಿಕೊಳ್ಳುವೆ ಎಂದು ನಂಬಿಸಿ ಅತ್ಯಾಚಾರ ಎಸಗಿದ್ದಾನೆ. ಇದಕ್ಕೂ ಮುನ್ನ, ಇವರಿಬ್ಬರ ಪ್ರೀತಿ ವಿಚಾರ ತಿಳಿದಿದ್ದ ಮಹೇಶ್ ಪ್ರಸಾದ್ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದಾನೆ. 

ಸಿದ್ದಮಲ್ಲು ಬಂಧಿಸಿದ ಬಳಿಕ ಆಪ್ತ ಸಮಾಲೋಚನೆಯಲ್ಲಿ ನೊಂದ ಬಾಲಕಿಯು ಬ್ಲಾಕ್ ಮೇಲ್ ವಿಚಾರವನ್ನು ತಿಳಿಸಿದ ಬಳಿಕ ವಿಚಾರ ಪೊಲೀಸರ ಗಮನಕ್ಕೆ ಬಂದಿದೆ. 

ಇದನ್ನೂ ಓದಿ- Rajasthan: ಟ್ರಕ್​ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, 7 ಮಂದಿ ಸಜೀವ ದಹನ!

ಸದ್ಯ, ಇಬ್ಬರು ಅಪರಾಧಿಗಳಿಗೂ 20 ವರ್ಷ ಕಠಿಣ ಶಿಕ್ಷೆ ವಿಧಿಸಿ, ನೊಂದ ಬಾಲಕಿಗೆ ಕಾನೂನು ಸೇವಾ ಪ್ರಾಧಿಕಾರದಿಂದ 4 ಲಕ್ಷ ರೂ.‌ ಪರಿಹಾರ ಕೊಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಕೆ.ಯೋಗೇಶ್ ವಾದ ಮಂಡಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News