ಗುಣಮುಖರಾದ ನಂತರ ಎಲ್ಲರಿಗೂ ಥ್ಯಾಂಕ್ಸ್ ಹೇಳಿದ ನಟ ದಿಗಂತ್

ಇತ್ತಿಚಿಗಷ್ಟೇ ಗೋವಾದ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ರೆಸಾರ್ಟ್‌ ವೊಂದರಲ್ಲಿ ಸೋಮರ್‌ಸಾಲ್ಟ್ ಮಾಡಲು ಹೋಗಿ ಆಯತಪ್ಪಿ ಬಿದ್ದರಿಂದಾಗಿ ಕುತ್ತಿಗೆಗೆ ಗಾಯಮಾಡಿಕೊಂಡಿದ್ದ ನಟ ದಿಗಂತ್ ಈಗ ಚೇತರಿಸಿಕೊಂಡಿದ್ದಾರೆ.

Written by - Zee Kannada News Desk | Last Updated : Jul 2, 2022, 10:51 PM IST
  • ತದನಂತರ ಅವರಿಗೆ ಸುಮಾರು 3 ಗಂಟೆಗಳ ಕಾಲ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತು.
  • ಈಗ ಅವರು ಗುಣಮುಖರಾಗಿ ಮನೆಯಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ
ಗುಣಮುಖರಾದ ನಂತರ ಎಲ್ಲರಿಗೂ ಥ್ಯಾಂಕ್ಸ್ ಹೇಳಿದ ನಟ ದಿಗಂತ್ title=
screengrab

ಬೆಂಗಳೂರು: ಇತ್ತಿಚಿಗಷ್ಟೇ ಗೋವಾದ ಪ್ರವಾಸಕ್ಕೆ ತೆರಳಿದ್ದ ಸಂದರ್ಭದಲ್ಲಿ ಅಲ್ಲಿನ ರೆಸಾರ್ಟ್‌ ವೊಂದರಲ್ಲಿ ಸೋಮರ್‌ಸಾಲ್ಟ್ ಮಾಡಲು ಹೋಗಿ ಆಯತಪ್ಪಿ ಬಿದ್ದರಿಂದಾಗಿ ಕುತ್ತಿಗೆಗೆ ಗಾಯಮಾಡಿಕೊಂಡಿದ್ದ ನಟ ದಿಗಂತ್ ಈಗ ಚೇತರಿಸಿಕೊಂಡಿದ್ದಾರೆ.

ಅವರನ್ನು ಆಗ ತಕ್ಷಣ ಹತ್ತಿರದ ಆಸ್ಪತ್ರೆಗೆ ಸೇರಿಸಿ ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಗಿತ್ತಾದರೂ ಕೂಡ ನಂತರ ಅವರಿಗೆ ಶಸ್ತ್ರ ಚಿಕಿತ್ಸೆಯನ್ನು ಮಾಡುವ ಅವಶ್ಯತೆ ಬಿದ್ದಿದ್ದರಿಂದಾಗಿ ಕೊನೆಗೆ ಅವರನ್ನು ಪತ್ನಿ ಐಂದ್ರಿತಾ ರೇ ಏರ್‌ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಯಿತು.

ಇದನ್ನೂ ಓದಿ: ಗೊಂಬೆಯಂತಿದ್ದ ನಟಿ ಪಾಲಿಗೆ ವಿಲನ್ ಆದ ವೈದ್ಯರು! ದಂತ ಚಿಕಿತ್ಸೆ ಪಡೆದ ಯುವನಟಿಗೆ ಇಂದೆಂಥ ಸ್ಥಿತಿ?

ತದನಂತರ ಅವರಿಗೆ ಸುಮಾರು 3 ಗಂಟೆಗಳ ಕಾಲ ಯಶಸ್ವಿ ಶಸ್ತ್ರಚಿಕಿತ್ಸೆಯನ್ನು ಮಾಡಲಾಗಿತ್ತು. ಈಗ ಅವರು ಗುಣಮುಖರಾಗಿ ಮನೆಯಲ್ಲಿ ವಿಶ್ರಾಂತಿಯನ್ನು ಪಡೆಯುತ್ತಿದ್ದಾರೆ.ಇದೆ ವೇಳೆ ತಮಗೆ ನೆರವಾದ ಎಲ್ಲರಿಗೂ ಕೂಡ ಸಾಮಾಜಿಕ ವೇದಿಕೆಗಳ ಮೂಲಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.ಅಷ್ಟೇ ಅಲ್ಲದೆ ಏರ್ ಲಿಫ್ಟ್ ಮಾಡಲಿಕ್ಕೆ ನೆರವಾದ ಗೋವಾದ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅವರಿಗೂ ಕೂಡ ದಿಗಂತ್  ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News