ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ...!

Nikhil Kumarswamy new movie : ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನೆರವೇರಿತು. ಮಾಜಿ ಪ್ರಧಾನ ಮಂತ್ರಿಗಳಾದ ಹೆಚ್ ಡಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಆಗಮಿಸಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ನೂತನ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು.  

Written by - Savita M B | Last Updated : Aug 24, 2023, 01:46 PM IST
  • ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ
  • "ಸೀತಾರಾಮ ಕಲ್ಯಾಣ" ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು.
  • ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ.
ನಿಖಿಲ್ ಕುಮಾರ್ ಅಭಿನಯದ ನೂತನ ಚಿತ್ರ ಆರಂಭ...! title=

Nikhilkumarswamy : ದಕ್ಷಿಣ ಭಾರತದ ಹೆಸರಾಂತ ಚಿತ್ರ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್ ಸಂಸ್ಥೆ ಈಗ ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದೆ. ಈ ಚಿತ್ರದ ನಾಯಕನಾಗಿ ನಾನು ನಟಿಸುತ್ತಿದ್ದೇನೆ. ಲಕ್ಷ್ಮಣ್ ಅವರು ಈ ಚಿತ್ರದ ನಿರ್ದೇಶಕರು.

ಈ ಹಿಂದೆ "ಸೀತಾರಾಮ ಕಲ್ಯಾಣ" ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಲೈಕಾ ಸಂಸ್ಥೆಯ ಸುಭಾಸ್ಕರನ್ ಅವರು ಆಗಮಿಸಿದ್ದರು. "ನಮ್ಮ ಸಂಸ್ಥೆಯ ನಿರ್ಮಾಣದ ಚಿತ್ರದಲ್ಲಿ ನೀವು ನಾಯಕರಾಗಿ ನಟಿಸಬೇಕು" ಎಂದು ಸುಭಾಸ್ಕರನ್ ಅವರು ಹೇಳಿದ್ದರು. ಈಗ ಚಿತ್ರ ಆರಂಭವಾಗುತ್ತಿದೆ. ಈ ಚಿತ್ರಕ್ಕಾಗಿ ನಿರ್ದೇಶಕರು ಒಂದು ವರ್ಷದಿಂದ ಬೆಂಗಳೂರಿನಲ್ಲೇ ಇದ್ದು ಕೆಲಸ  ಮಾಡುತ್ತಿದ್ದಾರೆ. ಸದ್ಯದಲ್ಲೇ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ನೀಡುವುದಾಗಿ ನಿಖಿಲ್ ಕುಮಾರ್ ತಿಳಿಸಿದರು.

ಇದನ್ನೂ ಓದಿ-ರಿಲೀಸ್ ಗೂ ಮುನ್ನವೇ ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ಕಿಂಗ್‌ಖಾನ್..ಜವಾನ್ ಪ್ರೀ-ಬುಕಿಂಗ್ ಕಲೆಕ್ಷನ್‌ ಇದು!

ತಮ್ಮ‌ ತಂಡವನ್ನು ಪರಿಚಯಿಸುತ್ತಾ ಮಾತು ಪ್ರಾರಂಭಿಸಿದ ನಿರ್ದೇಶಕ ಲಕ್ಷ್ಮಣ್, ಕನ್ನಡದಲ್ಲಿ ಇದು ನನ್ನ ಮೊದಲ ಚಿತ್ರ. ನಾನು ಬರೆದ ಕಥೆಯನ್ನು ಒಪ್ಪಿ ಚಿತ್ರ ನಿರ್ಮಾಣಕ್ಕೆ ಮುಂದಾಗಿರುವ ನಿರ್ಮಾಪಕರಿಗೆ ಹಾಗೂ ನಾಯಕ ನಿಖಿಲ್ ಕುಮಾರ್ ಅವರಿಗೆ ಧನ್ಯವಾದ. ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ನೀಡುವ ನಂಬಿಕೆ ಇದೆ. ಮುಂದಿನ ದಿನಗಳಲ್ಲಿ ಚಿತ್ರದ ಕುರಿತು ಹೆಚ್ಚಿನ ವಿವರಣೆ ನೀಡುತ್ತೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದರು. 

ಈ ಚಿತ್ರದಲ್ಲಿ ನಟಿಸುವಂತೆ ನಿಖಿಲ್ ಅವರು ಹೇಳಿದರು. ನಾನು ಕಥೆ ಕೇಳಿ ಒಪ್ಪಿಕೊಂಡೆ. ಕಥೆ ಚೆನ್ನಾಗಿದೆ ಎಂದು ನಟ ಕೋಮಲ್ ತಿಳಿಸಿದರು. ಲೈಕಾ ಪ್ರೊಡಕ್ಷನ್ಸ್ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಕನ್ನಡ ಚಿತ್ರವಿದು. ಚಿತ್ರ ಯಶಸ್ವಿಯಾಗಲಿ ಎಂದು ಲೈಕಾ ಪ್ರೊಡಕ್ಷನ್ಸ್ ಮುಖ್ಯಸ್ಥರಾದ ಸುಭಾಸ್ಕರನ್ ಅವರು ಹಾರೈಸಿದರು.

ನಾಯಕಿ ಯುಕ್ತಿ ತರೇಜ ಸಹ ನೂತನ ಚಿತ್ರದ ಕುರಿತು ಮಾತನಾಡಿದರು. ಹಲವಾರು ತಂತ್ರಜ್ಞರು ಹಾಗೂ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ-ಯಶ್‌19 ಕಥೆ ಅಲ್ಲ...ರಾಕಿ ಬಾಯ್‌ ರಾವಣನ ವೇಷದಲ್ಲಿ ಮಿಂಚಿದ್ದು ಇದೇ ಸಿನಿಮಾಗಾಗಿ!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News