ಚಕ್ಕೆ ಮತ್ತು ಜೇನುತುಪ್ಪ ಬೆರೆಸಿದ ನೀರು ಸಂಜೀವಿನಿ ಇದ್ದಂತೆ ! ಈ ಕಾಯಿಲೆಗಳಿಂದ ಶಾಶ್ವತವಾಗಿ ನೀಡುತ್ತದೆ ಮುಕ್ತಿ !

Benefits of Cinnamon and Honey: ಆಯುರ್ವೇದದ ಪ್ರಕಾರ ಚಕ್ಕೆ ಅಥವಾ ದಾಲ್ಚಿನ್ನಿ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದು ನಮ್ಮ ಆರೋಗ್ಯಕ್ಕೆ ಅಮೃತದಂತೆ ಕೆಲಸ ಮಾಡುತ್ತದೆ. 

Written by - Ranjitha R K | Last Updated : Mar 27, 2024, 10:40 AM IST
  • ಆಯುರ್ವೇದದಲ್ಲಿ ಕೆಲವೊಂದು ಪದಾರ್ಥಗಳನ್ನು ಸಂಜೀವಿನಿ ಎಂದು ಕರೆಯಲಾಗುತ್ತದೆ.
  • ಈ ಪದಾರ್ಥಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಬುಡದಿಂದಲೇ ಕಿತ್ತೆಸೆಯುತ್ತದೆ.
  • ಚಕ್ಕೆ ಜೇನುತುಪ್ಪದ ಮಿಶ್ರಣವು ಅಮೃತದಂತೆ ಕೆಲಸ ಮಾಡುತ್ತದೆ
ಚಕ್ಕೆ ಮತ್ತು ಜೇನುತುಪ್ಪ ಬೆರೆಸಿದ ನೀರು ಸಂಜೀವಿನಿ ಇದ್ದಂತೆ ! ಈ ಕಾಯಿಲೆಗಳಿಂದ ಶಾಶ್ವತವಾಗಿ ನೀಡುತ್ತದೆ ಮುಕ್ತಿ ! title=

ಬೆಂಗಳೂರು : Cinnamon and Honey : ಆಯುರ್ವೇದದಲ್ಲಿ ಕೆಲವೊಂದು ಪದಾರ್ಥಗಳನ್ನು ಸಂಜೀವಿನಿ ಎಂದು ಕರೆಯಲಾಗುತ್ತದೆ. ಯಾಕೆಂದರೆ ಈ ಪದಾರ್ಥಗಳು ಅನೇಕ ಆರೋಗ್ಯ ಸಮಸ್ಯೆಗಳನ್ನು ಬುಡದಿಂದಲೇ ಕಿತ್ತೆಸೆಯುತ್ತದೆ. ಇವುಗಳಲ್ಲಿ ಜೇನುತುಪ್ಪ ಮತ್ತು ಚಕ್ಕೆ ಕೂಡಾ ಸೇರಿವೆ. ಇವೆರಡರ ಮಿಶ್ರಣವು ಅಮೃತದಂತೆ ಕೆಲಸ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಎರಡು ಪದಾರ್ಥಗಳನ್ನು ಮಿಶ್ರಣ ಮಾಡಿದ ಮ್ಯಾಜಿಕ್ ನೀರು ಪವಾಡವನ್ನೇ ಮಾಡಿ ಬಿಡಬಲ್ಲದು. 

ಚಕ್ಕೆ ನೀರನ್ನು ಹೀಗೆ ಕುಡಿಯಬೇಕು: 
ಆಯುರ್ವೇದದ ಪ್ರಕಾರ ಚಕ್ಕೆ ಅಥವಾ ದಾಲ್ಚಿನ್ನಿ ನೀರನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಮೊದಲಿಗೆ ಎರಡು ಕಪ್ ನೀರಿಗೆ ಒಂದು ಚಮಚ ಚಕ್ಕೆ ಪುಡಿಯನ್ನು ಹಾಕಿ ಚೆನ್ನಾಗಿ ಕುದಿಸಿ.ಈ ನೀರು ಅರ್ಧದಷ್ಟಾದಾಗ ಗ್ಯಾಸ್ ಆಫ್ ಮಾಡಿ. ಈಗ ಈ ನೀರಿಗೆ ಅರ್ಧ ಚಮಚ ಜೇನುತುಪ್ಪ ಸೇರಿಸಿ ಕುಡಿಯಿರಿ.

ಇದನ್ನೂ ಓದಿ : Avocado: ಬ್ಲಡ್‌ ಶುಗರ್‌ನ್ನು ಕ್ಷಣಾರ್ಧದಲ್ಲಿ ನಿಯಂತ್ರಿಸುತ್ತೆ ಈ ಹಣ್ಣು.!

ಚಕ್ಕೆ ಮತ್ತು ಜೇನುತುಪ್ಪದ ನೀರಿನ ಪ್ರಯೋಜನಗಳು : 
ಬೆಳಿಗ್ಗೆ ನಿಯಮಿತವಾಗಿ ದಾಲ್ಚಿನ್ನಿ ಮತ್ತು ಜೇನುತುಪ್ಪದ ನೀರನ್ನು ಕುಡಿಯುವುದರಿಂದ  ಅನೇಕ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು. ಇದು ಬ್ಯಾಕ್ಟೀರಿಯಾ ವಿರೋಧಿ,  ಆಂಟಿವೈರಲ್ ಗುಣಲಕ್ಷಣಗಳನ್ನು ಹೊಂದಿದೆ. ಇದು  ರೋಗ ನಿರೋಧಕ ಶಕ್ತಿಯನ್ನು  ಹೆಚ್ಚಿಸಿ ಅನೇಕ ರೋಗಗಳಿಂದ ನಿಮ್ಮನ್ನು ರಕ್ಷಿಸುತ್ತದೆ. 

1.ತ್ವರಿತ ತೂಕ ನಷ್ಟಕ್ಕೆ : 
ವೇಗವಾಗಿ ತೂಕ ಇಳಿಸಿಕೊಳ್ಳಲು ಬಯಸಿದರೆ ಚಕ್ಕೆ ಮತ್ತು ಜೇನುತುಪ್ಪದ ನೀರನ್ನು ಕುಡಿಯಬಹುದು. ಇದು ದೇಹದಲ್ಲಿ ಸೇರಿಕೊಂಡಿರುವ ಹೆಚ್ಚುವರಿ ಕೊಬ್ಬನ್ನು ಬಹಳ ಬೇಗ ಕರಗಿಸುತ್ತದೆ. ತೂಕವು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತದೆ.

2. ಚಯಾಪಚಯ ಸುಧಾರಿಸುತ್ತದೆ : 
ಚಯಾಪಚಯವನ್ನು ಕಾಪಾಡಿಕೊಳ್ಳುವುದು ತೂಕ ನಷ್ಟಕ್ಕೆ ಮಾತ್ರವಲ್ಲ, ಒಟ್ಟಾರೆ ಆರೋಗ್ಯದ ದೃಷ್ಟಿಯಿಂದ ತುಂಬಾ ಮುಖ್ಯವಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಕ್ಕೆ ಮತ್ತು ಜೇನುತುಪ್ಪದ ನೀರನ್ನು ಕುಡಿಯುವುದರಿಂದ ಚಯಾಪಚಯ ಚುರುಕಾಗುತ್ತದೆ. 

ಇದನ್ನೂ ಓದಿ : Cancer In Women: ಮಹಿಳೆಯರಲ್ಲಿ ಕ್ಯಾನ್ಸರ್ ಅಪಾಯ ಕಡಿಮೆ ಮಾಡುತ್ತೆ ಈ ಅಭ್ಯಾಸಗಳು

3. ಹೊಟ್ಟೆಯ ಸಮಸ್ಯೆಗಳಿಗೆ ಪರಿಹಾರ : 
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಕ್ಕೆ ಮತ್ತು ಜೇನುತುಪ್ಪದ ನೀರನ್ನು ಕುಡಿಯುವುದರಿಂದ  ಜೀರ್ಣಾಂಗ ವ್ಯವಸ್ಥೆ ಸುಧಾರಿಸುತ್ತದೆ.ಜೇನುತುಪ್ಪವು ಕರುಳಿನ ಆರೋಗ್ಯಕ್ಕೆ ಅಗತ್ಯವಾಗಿರುವ ಅನೇಕ ಕಿಣ್ವಗಳನ್ನು ಹೊಂದಿರುತ್ತದೆ. ಈ ಕಿಣ್ವಗಳು ಜೀರ್ಣಕ್ರಿಯೆಯ ಪ್ರಕ್ರಿಯೆಯನ್ನು ಹೆಚ್ಚಿಸುತ್ತವೆ.ಚಕ್ಕೆ ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾವನ್ನು ಉತ್ತೇಜಿಸುವ ಮೂಲಕ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

4. ರಕ್ತದಲ್ಲಿನ ಸಕ್ಕರೆ ನಿಯಂತ್ರಣದಲ್ಲಿರುತ್ತದೆ : 
ಮಧುಮೇಹದಿಂದ ಬಳಲುತ್ತಿರುವವರಿಗೆ ಚಕ್ಕೆ ಮತ್ತು ಜೇನುತುಪ್ಪದ ನೀರು ಅಮೃತವಿದ್ದಂತೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ. ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರಿಂದ ಇನ್ಸುಲಿನ್ ಸೆನ್ಸಿಟಿವಿಟಿ ಹೆಚ್ಚುತ್ತದೆ. ಈ ನೀರು ನಿಮ್ಮ ರಕ್ತದಲ್ಲಿನ ಸಕ್ಕರೆಯನ್ನು ದಿನವಿಡೀ ನಿಯಂತ್ರಣದಲ್ಲಿಡುತ್ತದೆ.

5. ಹೃದಯದ ಆರೋಗ್ಯವನ್ನು ಕಾಪಾಡುತ್ತದೆ : 
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಕ್ಕೆ ಮತ್ತು ಜೇನುತುಪ್ಪದ ನೀರನ್ನು ಕುಡಿಯುವುದರಿಂದ  ಹೃದಯದ ಆರೋಗ್ಯವನ್ನು ಕಾಪಾಡಬಹುದು. ಉತ್ಕರ್ಷಣ ನಿರೋಧಕ-ಸಮೃದ್ಧ ಜೇನುತುಪ್ಪ ಮತ್ತು ಚಕ್ಕೆ ಎರಡೂ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಇದು ಹೃದಯವನ್ನು ಆರೋಗ್ಯಕರವಾಗಿರಿಸುತ್ತದೆ. ದೇಹದಲ್ಲಿನ ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ. ಇದು ಹೃದಯದ ಒತ್ತಡವನ್ನು ಕಡಿಮೆ ಮಾಡುತ್ತದೆ.

ಸೂಚನೆ: ಪ್ರಿಯ ಓದುಗರೇ, ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ದಯವಿಟ್ಟು ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News