ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ.  ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.  

Written by - Ranjitha R K | Last Updated : Apr 17, 2024, 01:09 PM IST
  • ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
  • ಆಹಾರದಲ್ಲಿ ಸ್ವಲ್ಪ ಏರುಪೇರಾದರೂ ರಕ್ತದಲ್ಲಿನ ಸಕ್ಕರೆ ಹಠಾತ್ ಹೆಚ್ಚಳವಾಗುವ ಸಾಧ್ಯತೆ ಇದೆ.
  • ಇದು ಆರೋಗ್ಯಕ್ಕೆ ಹಾನಿಕಾರಕವಾಗಿ ಪರಿಣಮಿಸಬಹುದು.
ಮಧುಮೇಹಿಗಳು ಬೆಳಿಗ್ಗೆ ಎದ್ದ ಕೂಡಲೇ ಇದನ್ನು ತಿನ್ನಿ! ದಿನವಿಡೀ ನಾರ್ಮಲ್ ಆಗಿರುವುದು ಬ್ಲಡ್ ಶುಗರ್  title=

ಬೆಂಗಳೂರು : ಮಧುಮೇಹಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.ಆಹಾರದಲ್ಲಿ ಸ್ವಲ್ಪ ಏರುಪೇರಾದರೂ ರಕ್ತದಲ್ಲಿನ ಸಕ್ಕರೆ ಹಠಾತ್ ಹೆಚ್ಚಳವಾಗುವ ಸಾಧ್ಯತೆ ಇದೆ.ಇದು ಆರೋಗ್ಯಕ್ಕೆ ಹಾನಿಕಾರಕವಾಗಿ  ಪರಿಣಮಿಸಬಹುದು. ವಿಶೇಷವಾಗಿ, ಬೆಳಿಗ್ಗೆ ತಿನ್ನುವ ಮತ್ತು ಕುಡಿಯುವ ಯಾವುದೇ  ಆಹಾರ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ.  ಮಧುಮೇಹ ರೋಗಿಗಳು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಯಾವ ಆಹಾರವನ್ನೂ ಸೇವಿಸಬಾರದು.ಇನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಕೆಲವು ಆಹಾರಗಳಿವೆ.  ಅವುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳಬಹುದು.

ಮಧುಮೇಹಕ್ಕೆ ಮೊಳಕೆಯೊಡೆದ ಮೆಂತ್ಯೆ :
ಮೊಳಕೆಯೊಡೆದ ಮೆಂತ್ಯೆಯನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸುವುದು ಮಧುಮೇಹ ರೋಗಿಗಳಿಗೆ ಹೆಚ್ಚು ಪ್ರಯೋಜನಕಾರಿಯಾಗಿರಲಿದೆ. ಇದರಲ್ಲಿ ಫೈಬರ್ ಹೇರಳವಾಗಿ ಕಂಡು ಬರುತ್ತದೆ. ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಇದು ಜೀರ್ಣಕ್ರಿಯೆಯನ್ನು ಕೂಡಾ ಸುಧಾರಿಸುತ್ತದೆ. ಮಧುಮೇಹ ರೋಗಿಗಳಲ್ಲಿ ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. 

ಇದನ್ನೂ ಓದಿ : ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ! ಬೆಳಗ್ಗೆ ಮೂತ್ರದ ಮೂಲಕವೇ ಹೊರಹೋಗುತ್ತದೆ ಯೂರಿಕ್ ಆಸಿಡ್ !

ನೆನೆ ಹಾಕಿದ ಒಣ ಹಣ್ಣುಗಳು : 
ಮಧುಮೇಹ ರೋಗಿಗಳು ನೆನೆ ಹಾಕಿದ ಒಣ ಹಣ್ಣುಗಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವಿಸಬಹುದು.ಇದಕ್ಕಾಗಿ ಬಾದಾಮಿ,ವಾಲ್ ನಟ್ಸ್,ಒಣದ್ರಾಕ್ಷಿ ಮತ್ತು ಇತರ ಒಣ ಹಣ್ಣುಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಡಬೇಕು. ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸಬೇಕು. ಇದರಲ್ಲಿ ಪ್ರೋಟೀನ್,ಫೈಬರ್,ಮೆಗ್ನೀಸಿಯಮ್ ಮತ್ತು ಆಂಟಿಆಕ್ಸಿಡೆಂಟ್ ಗುಣಲಕ್ಷಣಗಳು ಕಂಡುಬರುತ್ತವೆ.ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದನ್ನು ಸೇವಿಸುವುದರಿಂದ ಜೀರ್ಣಕ್ರಿಯೆಯೂ ಆರೋಗ್ಯಕರವಾಗಿರುತ್ತದೆ.

ಪಪ್ಪಾಯ :
ಮಧುಮೇಹ ರೋಗಿಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯವನ್ನು ಸೇವಿಸುವಂತೆ ಹೇಳಲಾಗುತ್ತದೆ.ಇದರಲ್ಲಿ ಫೈಬರ್ ಹೇರಳವಾಗಿ ಕಂಡು ಬರುತ್ತದೆ.  ಇದು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಇದಲ್ಲದೆ, ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸಿ, ಮಲಬದ್ಧತೆಯ ಸಮಸ್ಯೆಯನ್ನು ನಿವಾರಿಸುತ್ತದೆ. 

ಇದನ್ನೂ ಓದಿ : ಒಂದೇ ಒಂದು ತುಂಡು ಶುಂಠಿ ಸಾಕು ಕೊಲೆಸ್ಟ್ರಾಲ್ ಕರಗಿಸಲು ! ಸೇವಿಸುವ ವಿಧಾನ ಮಾತ್ರ ಹೀಗಿಯೇ ಇರಲಿ !
 
ಹೆಸರು ಬೇಳೆ : 
ಹೆಸರು ಬೇಳೆಯನ್ನು ಸೇವಿಸುವುದು ಮಧುಮೇಹ ರೋಗಿಗಳಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರ ಗ್ಲೈಸೆಮಿಕ್ ಇಂಡೆಕ್ಸ್ ಕಡಿಮೆ ಇರುತ್ತದೆ. ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಇದಲ್ಲದೆ, ಇದು ತೂಕ ನಷ್ಟಕ್ಕೂ ಸಹ ಸಹಾಯ ಮಾಡುತ್ತದೆ. 

ಚಕ್ಕೆ ನೀರು : 
ಮಧುಮೇಹ ರೋಗಿಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಚಕ್ಕೆ ನೀರನ್ನು ಸೇವಿಸಲು ಸಲಹೆ ನೀಡಲಾಗುತ್ತದೆ.ಇದಕ್ಕಾಗಿ ರಾತ್ರಿ ಮಲಗುವ ಮುನ್ನ ಒಂದು ಲೋಟ ನೀರಿನಲ್ಲಿ ಚಕ್ಕೆ ತುಂಡನ್ನು ನೆನೆಸಿಡಬೇಕು. ಮರುದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯಿರಿ.ಹೀಗೆ ನಿಯಮಿತವಾಗಿ ಸೇವಿಸುತ್ತಾ ಬಂದರೆ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ. 

( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News