ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಈ ಬೇಳೆ ಕಾಳುಗಳನ್ನು ತಪ್ಪದೇ ಸೇವಿಸಿ

Bad Cholesterol Reduce By Pulses: ಸಾಮಾನ್ಯವಾಗಿ ಗ್ಯಾಸ್ಟ್ರಿಕ್ ಸಮಸ್ಯೆ ಹೆಚ್ಚಾಗುತ್ತದೆ ಎಂಬ ಕಾರಣಕ್ಕೆ ಕೆಲವರು ಬೇಳೆಕಾಳುಗಳನ್ನು ತಿನ್ನುವುದನ್ನು ತಪ್ಪಿಸುತ್ತಾರೆ. ಆದರೆ, ಬೇಳೆಕಾಳುಗಳು ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಬಹುದು ಎಂದು ನಿಮಗೆ ತಿಳಿದಿದೆಯೇ?  

Written by - Yashaswini V | Last Updated : Jul 12, 2022, 02:23 PM IST
  • ಸೂರ್ಯಕಾಂತಿ ಬೀಜಗಳಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು.
  • ಆಯುರ್ವೇದದಲ್ಲಿ ಇದನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ.
  • ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡಲು ಈ ಬೇಳೆ ಕಾಳುಗಳನ್ನು ತಪ್ಪದೇ ಸೇವಿಸಿ  title=
Bad Cholesterol

ಬೇಳೆಕಾಳುಗಳಿಂದ ಕಡಿಮೆ ಆಗುತ್ತೆ ಕೆಟ್ಟ ಕೊಲೆಸ್ಟ್ರಾಲ್ :  ಬದಲಾಗುತ್ತಿರುವ ಜೀವನಶೈಲಿಯಿಂದಾಗಿ ಹಲವು ರೀತಿಯ ಆರೋಗ್ಯ ಸಮಸ್ಯೆಗಳು ಸಹ ಕಾಡುತ್ತವೆ. ಅವುಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆಯೂ ಒಂದು. ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾದರೆ ಹೃದಯಾಘಾತದ ಅಪಾಯ ಉಳಿಯುತ್ತದೆ. ನಮ್ಮಲ್ಲಿ ಹಲವರು ಕೊಲೆಸ್ಟ್ರಾಲ್ ಸಮಸ್ಯೆ ನಿವಾರಿಸಲು ತಮ್ಮ ಡಯಟ್ ಬಗ್ಗೆ ಹೆಚ್ಚು ನಿಗಾವಹಿಸುತ್ತಾರೆ. ಕೆಲವರು ಬೇಳೆಕಾಳುಗಳನ್ನು ತಮ್ಮ ಆಹಾರ ಪದ್ದತಿಯಿಂದ ಹೊರಗಿಡುತ್ತಾರೆ. ಆದರೆ, ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವಲ್ಲಿ ಬೇಳೆಕಾಳುಗಳು  ಪ್ರಮುಖ ಪಾತ್ರವಹಿಸುತ್ತವೆ ಎಂದು ನಿಮಗೆ ತಿಳಿದಿದೆಯೇ?  ಹಾಗಾದರೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುವ ಅಂತಹ ಬೇಳೆಕಾಳುಗಳು ಯಾವುವು ಎಂದು ತಿಳಿಯೋಣ...

ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು, ಹೆಸರು ಕಾಳು ಸಹಾಯ ಮಾಡುತ್ತದೆ. ಇದನ್ನು ಪ್ರತಿದಿನ ಸೇವಿಸಿದರೆ ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರುತ್ತದೆ ಎಂದು ಹೇಳಲಾಗುತ್ತದೆ. ವರದಿಯ ಪ್ರಕಾರ, ಹೆಸರು ಕಾಳನ್ನು ಸೇವಿಸುವುದರಿಂದ ಹೃದಯಾಘಾತದ ಅಪಾಯವೂ ಕಡಿಮೆಯಾಗುತ್ತದೆ ಎಂದು ಹೇಳಲಾಗುತ್ತದೆ.

ಇದನ್ನೂ ಓದಿ- Joint Pain Relief: ಕೀಲು ನೋವಿನಿಂದ ತ್ವರಿತ ಪರಿಹಾರಕ್ಕಾಗಿ ಈ ಮನೆಮದ್ದುಗಳನ್ನು ಟ್ರೈ ಮಾಡಿ

ಮನೆಮದ್ದುಗಳಿಂದ ಕೊಲೆಸ್ಟ್ರಾಲ್ ನಿಯಂತ್ರಣ:
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಪ್ರಮಾಣ ಹೆಚ್ಚಾದರೆ ಹೃದಯಾಘಾತದ ಸಾಧ್ಯತೆ ಹೆಚ್ಚುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ಅದನ್ನು ನಿಯಂತ್ರಣದಲ್ಲಿಡಲು ಉತ್ತಮ ಜೀವನಶೈಲಿಯನ್ನು ಹೊಂದುವುದು ಬಹಳ ಮುಖ್ಯ. ಹದಗೆಡುತ್ತಿರುವ ಪರಿಸ್ಥಿತಿಯನ್ನು ನಿಭಾಯಿಸಲು ಅನೇಕ ಬಾರಿ, ಅನೇಕ ಜನರು ಔಷಧಿಗಳ ಮೊರೆ ಹೋಗುತ್ತಾರೆ.  ಆದರೆ ಕೆಲವರು ಮನೆಮದ್ದುಗಳನ್ನು ಅಳವಡಿಸಿಕೊಳ್ಳುತ್ತಾರೆ.  ನೀವೂ ಸಹ ಮನೆಮದ್ದುಗಳಿಂದ ಕೊಲೆಸ್ಟ್ರಾಲ್ ನಿಯಂತ್ರಿಸಲು ಬಯಸಿದರೆ ಇಲ್ಲಿವೆ ಕೆಲವು ಸಲಹೆಗಳು.

ಇದನ್ನೂ ಓದಿ- ಊಟದ ಬಳಿಕ ಮಾಡುವ ಈ ತಪ್ಪುಗಳು ದೇಹಕ್ಕೆ ಅಪಾಯಕಾರಿ ಎಂದು ಸಾಬೀತುಪಡಿಸಬಹುದು, ಎಚ್ಚರ!

ಸೂರ್ಯಕಾಂತಿ ಬೀಜಗಳು:
ನೀವು ಸೂರ್ಯಕಾಂತಿ ಬೀಜಗಳಿಂದ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಬಹುದು. ಆಯುರ್ವೇದದಲ್ಲಿ ಇದನ್ನು ಬಹಳ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರ ಬೀಜಗಳು ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಪಾಲಿಸ್ಯಾಚುರೇಟೆಡ್ ಕೊಬ್ಬಿನಾಮ್ಲಗಳಂತಹ ಅನೇಕ ಗುಣಗಳನ್ನು ಹೊಂದಿವೆ, ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವ ಮೂಲಕ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ.

ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News