Sameer Wankhede ಬಳಿಕ Devendra Fadnavis ಮೇಲೆ ಹರಿಹಾಯ್ದ Nawab Malikರಿಂದ ಗಂಭೀರ ಆರೋಪ

NCB ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ಆರೋಪಗಳು ಮತ್ತು ಪ್ರತ್ಯಾರೋಪಗಳು ಇನ್ನೂ ಮುಂದುವರೆದಿವೆ. 

Written by - Nitin Tabib | Last Updated : Nov 1, 2021, 12:49 PM IST
  • ಸಮೀರ್ ವಾಂಖೆಡೆ ಬಳಿಕ ದೇವೇಂದ್ರ ಫಡ್ನವಿಸ್ ವಿರುದ್ಧ ನವಾಬ್ ಮಲಿಕ್ ಗಂಭೀರ ಆರೋಪ.
  • ದೇವೇಂದ್ರ ಫಡ್ನವಿಸ್ ರಾಜ್ಯದ ಮಾದಕ ದ್ರವ್ಯ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಮಲಿಕ್ ಆರೋಪಿಸಿದ್ದಾರೆ.
Sameer Wankhede ಬಳಿಕ Devendra Fadnavis ಮೇಲೆ ಹರಿಹಾಯ್ದ Nawab Malikರಿಂದ ಗಂಭೀರ ಆರೋಪ  title=
Nawab Malik (File Photo)

NCB ವಲಯ ನಿರ್ದೇಶಕ ಸಮೀರ್ ವಾಂಖೆಡೆ (Sameer Wankhede) ವಿರುದ್ಧ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (NCP) ನಾಯಕ ಮತ್ತು ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ (Nawab Malik) ಅವರ ಆರೋಪಗಳು ಮತ್ತು ಪ್ರತ್ಯಾರೋಪಗಳು ಇನ್ನೂ ಮುಂದುವರೆದಿವೆ. ಏತನ್ಮಧ್ಯೆ, ಇದೀಗ ನವಾಬ್ ಮಲಿಕ್ ತನ್ನ ಸಂಪೂರ್ಣ ಗುರಿಯನ್ನು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ನಾಯಕ ದೇವೇಂದ್ರ ಫಡ್ನವಿಸ್ ಕಡೆಗೆ ತಿರುಗಿಸಿದ್ದಾರೆ. ದೇವೇಂದ್ರ ಫಡ್ನವೀಸ್ (Devendra Fadnavis) ರಾಜ್ಯದ ಮಾದಕ ದ್ರವ್ಯ ಕಳ್ಳಸಾಗಣೆದಾರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎಂದು ಮಲಿಕ್ ಆರೋಪಿಸಿದ್ದಾರೆ. ಇದಲ್ಲದೆ ಮಲಿಕ್ ಅವರು ಎಸ್‌ಸಿ ಆಯೋಗದ (SC Commission) ಅಧ್ಯಕ್ಷ ಅರುಣ್ ಹಾಲ್ದರ್ (Arun Haldar) ಅವರನ್ನು ಗುರಿಯಾಗಿಸಿಕೊಂಡು ವಾಂಖೆಡೆ ಮನೆಗೆ ಏಕೆ ಹೋಗಿದ್ದರು ಎಂದು ಪ್ರಶ್ನಿಸಿದ್ದಾರೆ.

ಜೈದೀಪ್ ರಾಣಾ (Jaideep Rana) ಎಂಬ ವ್ಯಕ್ತಿ ಮಾದಕ ದ್ರವ್ಯ ಕಳ್ಳಸಾಗಣೆಗೆ ಸಂಬಂಧಿಸಿದ ಪ್ರಕರಣದಲ್ಲಿ ಪ್ರಸ್ತುತ ಜೈಲಿನಲ್ಲಿದ್ದಾನೆ ಎಂದು ನವಾಬ್ ಮಲಿಕ್ ಹೇಳಿದ್ದಾರೆ. ಈ ವ್ಯಕ್ತಿಗೆ ಮಾಜಿ ಸಿಎಂ ದೇವೇಂದ್ರ ಫಡ್ನವಿಸ್ ಜೊತೆ ಸಂಪರ್ಕವಿದೆ ಎಂದು ಮಲಿಕ್ ಆರೋಪಿಸಿದ್ದಾರೆ. ರಾಣಾ ಫಡ್ನವೀಸ್ ಅವರ ಪತ್ನಿ ಅಮೃತಾ ರಾನಡೆ ಅವರ ಪ್ರಸಿದ್ಧ ಹಾಡಿನ ಹಣಕಾಸು ಮುಖ್ಯಸ್ಥ ಜೈದೀಪ್ ಆಗಿದ್ದರು ಎಂದು ಮಲಿಕ್ ಹೇಳಿದ್ದಾರೆ. ಅಷ್ಟೇ ಅಲ್ಲ, ಫಡ್ನವೀಸ್ ಅವಧಿಯಲ್ಲಿ ಮಹಾರಾಷ್ಟ್ರದಲ್ಲಿ ಡ್ರಗ್ಸ್ ದಂಧೆ ಸಾಕಷ್ಟು ಬೆಳೆದಿದೆ ಎಂದೂ ಮಲಿಕ್ ಆರೋಪಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ನವಾಬ್ ಮಲಿಕ್(Nawab Malik), ''ನಿನ್ನೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗದ ಅಧ್ಯಕ್ಷರು ಮತ್ತು ಬಿಜೆಪಿಯ ಅರುಣ್ ಹಲ್ದಾರ್ ಅವರು ಸಮೀರ್ ವಾಂಖೆಡೆ ಮನೆಗೆ ತೆರಳಿ ಕ್ಲೀನ್ ಚಿಟ್ ನೀಡಿದ್ದಾರೆ. ಅವರು ಮೊದಲೇ ತನಿಖೆ ನಡೆಸಿ ವಿವರವಾದ ವರದಿಯನ್ನು ಸಲ್ಲಿಸಬೇಕು. ಅವರ ಬಗ್ಗೆ ನಾವು ರಾಷ್ಟ್ರಪತಿಗಳಿಗೆ ದೂರು ನೀಡುತ್ತೇವೆ" ಎಂದು ಹೇಳಿದ್ದಾರೆ. 

ಇದನ್ನೂ ಓದಿ-Maharashtra News: ಕುಟುಂಬಕ್ಕೆ ಸಂರಕ್ಷಣೆ ಕೋರಿದ Sameer Wankhede ಪತ್ನಿ ಹೇಳಿದ್ದೇನು?

ಅಕ್ಟೋಬರ್ 2 ರಂದು ಮುಂಬೈನಿಂದ ಗೋವಾಗೆ ತೆರಳುತ್ತಿದ್ದ ಕ್ರೂಸ್‌ನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದಾಗ ಸಮೀರ್ ವಾಂಖೆಡೆ ನೇತೃತ್ವದ ಎನ್‌ಸಿಬಿ ತಂಡ ದಾಳಿ ನಡೆಸಿತ್ತು. ಈ ಪ್ರಕರಣದಲ್ಲಿ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ನನ್ನು ಕೂಡ ಬಂಧಿಸಲಾಗಿತ್ತು. ಅಂದಿನಿಂದ ಮಹಾರಾಷ್ಟ್ರದ ಸಚಿವ ನವಾಬ್ ಮಲಿಕ್ ಸಮೀರ್ ವಾಂಖೆಡೆ ವಿರುದ್ಧ ಆರೋಪ ಮಾಡಲು ಆರಂಭಿಸಿದ್ದಾರೆ. 

ಇದನ್ನೂ ಓದಿ-Sameer Wankhede ಮದುವೆ ಮಾಡಿಸಿದ ಮೌಲಾನಾ ಗಂಭೀರ ಹೇಳಿಕೆ, 15 ವರ್ಷಗಳ ಹಿಂದೆ ನಡೆದಿದ್ದೇನು?

ನವಾಬ್ ಮಲಿಕ್ ಅವರು ವಾಂಖೆಡೆಯ ಜನನ ಪ್ರಮಾಣಪತ್ರವನ್ನು ಮೊದಲು ವಿತರಿಸಿ, ಅವರು ಹುಟ್ಟಿನಿಂದ ಮುಸ್ಲಿಂ ಆಗಿದ್ದಾರೆ ಎಂದು ಹೇಳಿ, ಉದ್ಯೋಗ ಪಡೆಯಲು ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿದ್ದಾರೆ ಎಂದು ಅವರು ಆರೋಪಿಸಿದ್ದರು. ಈ ಆರೋಪವನ್ನು ಸಾಬೀತುಪಡಿಸಲು, ನವಾಬ್ ಮಲಿಕ್ 'ನಿಕಾಹ್ನಾಮ್' ಮತ್ತು ವಾಂಖೆಡೆ ಅವರ ಮೊದಲ ಮದುವೆಯ ಚಿತ್ರವನ್ನು ಸಹ ಬಿಡುಗಡೆ ಮಾಡಿದ್ದರು. ಆದರೆ, ಸಮೀರ್ ವಾಂಖೆಡೆ ಈ ಆರೋಪಗಳನ್ನು ಅಲ್ಲಗಳೆದಿದ್ದಾರೆ. ತನ್ನ ತಂದೆ ದಲಿತ ಮತ್ತು ತಾಯಿ ಮುಸ್ಲಿಂ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ-Aryan Khan Drugs Case: ನಟಿಯ ಜೊತೆಗೆ ಡ್ರಗ್ಸ್ ಗೆ ಸಂಬಂಧಿಸಿದಂತೆ ಚಾಟ್ ನಡೆಸಿದ್ದಾರೆ Aryan Khan

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News