ನವದೆಹಲಿ: ಭಾರಿ ಮಳೆಯಿಂದಾಗಿ ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಗುಡುಗು ಸಿಡಿಲಿನಿಂದಾಗಿ ಮೃತಪಟ್ಟಿದ್ದಾರೆ. ಆದರೆ ಪ್ರಧಾನಿ ಮೋದಿ ಟ್ವೀಟ್ ಮೂಲಕ ಕೇವಲ ಗುಜರಾತಿನಲ್ಲಿ ಮೃತಪಟ್ಟಿರುವವರಿಗಾಗಿ ಸಂತಾಪ ಸಲ್ಲಿಸಿದ್ದರು. ಈ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ ಪ್ರಧಾನಿ ಮೋದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಧ್ಯಪ್ರದೇಶ, ರಾಜಸ್ತಾನ, ಗುಜರಾತ್ ಮತ್ತು ಮಹಾರಾಷ್ಟ್ರದಲ್ಲಿ ಸುರಿದ ಭಾರಿ ಮಳೆಯಿಂದಾಗಿ 34 ಜನರು ಮೃತಪಟ್ಟಿದ್ದರು. ಈ ಹಿನ್ನಲೆ ಪ್ರಧಾನ ಮಂತ್ರಿ ಕಚೇರಿ ಟ್ವೀಟ್ ಮಾಡಿ ಗುಜರಾತ್ ವಿವಿಧ ಭಾಗಗಳಲ್ಲಿ ಸುರಿದ ಅನಿಯಮಿತ ಮಳೆಯಲ್ಲಿ ಮೃತಪಟ್ಟವರಿಗೆ ಪ್ರಧಾನ ಮಂತ್ರಿಯ ರಾಷ್ಟ್ರೀಯ ಪರಿಹಾರ ನಿಧಿ ರಿಂದ 2 ಲಕ್ಷ ಮಾಜಿ ಗೌರವ ಧನ ಮತ್ತು ಗಾಯಗೊಂಡವರಿಗೆ 50 ಸಾವಿರ ರೂ.ನ್ನು ಅನುಮೋಧಿಸಲಾಗಿದೆ 'ಎಂದು ಪಿಎಂಒ ಟ್ವೀಟ್ ಮಾಡಿದೆ.
मोदी जी , आप देश के पीएम ना कि गुजरात के।
एमपी में भी बेमौसम बारिश व तूफ़ान के कारण आकाशीय बिजली गिरने से 10 से अधिक लोगों की मौत हुई है।लेकिन आपकी संवेदनाएँ सिर्फ़ गुजरात तक सीमित ?
भले यहाँ आपकी पार्टी की सरकार नहीं है लेकिन लोग यहाँ भी बस्ते है।— Office Of Kamal Nath (@OfficeOfKNath) April 17, 2019
ಇದಕ್ಕೆ ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಮಧ್ಯಪ್ರದೇಶದ ಮುಖ್ಯಮಂತ್ರಿ ಕಮಲ್ ನಾಥ್ " ಮೋದಿ ನೀವು ಭಾರತದ ಪ್ರಧಾನಮಂತ್ರಿಯೇ ಹೊರತು ಗುಜರಾತಿನ ಪ್ರಧಾನಮಂತ್ರಿಯಲ್ಲ.10 ಕ್ಕೂ ಅಧಿಕ ಜನರು ಮಧ್ಯಪ್ರದೇಶದಲ್ಲಿ ಮೃತಪಟ್ಟಿದ್ದಾರೆ.ಆದರೆ ನಿಮ್ಮ ಸಂತಾಪ ಕೇವಲ ಗುಜರಾತಿಗೆ ಸೀಮಿತವಾಗಿದೆ.ನಿಮ್ಮ ಪಕ್ಷ ಮಧ್ಯಪ್ರದೇಶದಲ್ಲಿ ಅಧಿಕಾರದಲ್ಲಿ ಇರದೇ ಇರಬಹುದು ಆದರೆ ಇಲ್ಲಿಯೂ ಜನರು ಬದುಕುತ್ತಿದ್ದಾರೆ ಎಂದು ಟ್ವೀಟ್ ಮಾಡಿದ್ದಾರೆ.
An ex- gratia of Rs 2 lakh each for the next of kin of those who lost their lives due to unseasonal rain & storms in MP, Rajasthan, Manipur & various parts of the country has been approved from the PM’s National Relief Fund. Rs 50,000 each for the injured has also been approved.
— PMO India (@PMOIndia) April 17, 2019
ಅಚ್ಚರಿ ಎಂದರೆ ಈ ಟ್ವೀಟ್ ನಂತರ ಪ್ರಧಾನಿ ಮೋದಿ ಟ್ವೀಟ್ ಮಾಡಿ ಉಳಿದ ರಾಜ್ಯಗಳಲ್ಲಿ ಆಗಿರುವ ಹಾನಿಗೆ ಕೇಂದ್ರ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.