ಕರ್ನಾಟಕದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಅಸಾದುದ್ದೀನ್ ಓವೈಸಿ ಪಕ್ಷ

    

Last Updated : Apr 15, 2018, 05:10 PM IST
ಕರ್ನಾಟಕದ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ ಅಸಾದುದ್ದೀನ್ ಓವೈಸಿ ಪಕ್ಷ  title=

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಬಾರದೆನ್ನುವ ತಿರ್ಮಾನಕ್ಕೆ  ಅಸಾದುದ್ದೀನ್ ಒವೈಸಿ ನೇತೃತ್ವದ ಎಐಐಎಂಐಎಂ ಪಕ್ಷ  ನಿರ್ಧರಿಸಿದೆ ಎಂದು ತಿಳಿದುಬಂದಿದೆ. 

ಸುದ್ದಿಮೂಲಗಳ ವರದಿಯ ಅನ್ವಯ ಕರ್ನಾಟಕದ ಚುನಾವಣೆಯಲ್ಲಿ ಸ್ಪರ್ಧಿಸುವುದರಿಂದ  ಕಾಂಗ್ರೆಸ್ ಪಕ್ಷದ  ಮತಗಳ  ಮೇಲೆ ನಕಾರಾತ್ಮಕ ಪರಿಣಾಮ ಬೀರಬಹುದು ಎಂದು ಪಕ್ಷದ ಭಾವಿಸಿದೆ.

ಈ ವರ್ಷ ಜನವರಿಯಲ್ಲಿ, ಎಐಐಎಂಐಎಂ ಉತ್ತರ ಕರ್ನಾಟಕದ ಕೆಲವು ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಯೋಜನೆಯನ್ನು ರೂಪಿಸಿತ್ತು, ಆದರೆ ಈಗ ಅದು ಈ ನಿರ್ಧಾರದಿಂದ ಹಿಂದೆ ಸರಿಯುತ್ತಿದೆ ಎನ್ನಲಾಗುತ್ತಿದೆ.

ಈ ಹಿಂದೆ ಅಸಾದುದ್ದೀನ್ ಓವೈಸಿಯವರು ಬಿಜೆಪಿ ಮತ್ತು  ಕಾಂಗ್ರೆಸ್ ಹೊರತಾದ ತೃತೀಯ ರಂಗದ ಕುರಿತಾಗಿ ಪ್ರಸ್ತಾವನೆಯ ಕುರಿತಾಗಿ ಮಾತನಾಡಿದ್ದರು. 

ಕರ್ನಾಟಕದಲ್ಲಿ ಮೇ 12 ರಂದು ಒಂದೇ ಹಂತದಲ್ಲಿ 224 ಕ್ಷೇತ್ರಗಳಿಗೆ ಚುನಾವಣೆಗೆ ನಡೆಯಲಿದೆ.

 

Trending News