ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹತ್ಯೆಗೆ ಸಂಚು..! ಎಸಿಬಿ ನ್ಯಾಯಾಧೀಶರಿಗೆ ಪತ್ರ

Chandrababu Naidu Letter To ACB Court : ಆಂಧ್ರಪ್ರದೇಶ ಕೌಶಲ್ಯಾಭಿವೃದ್ಧಿ ಹಗರಣದಲ್ಲಿ ಬಂಧಿತರಾಗಿರುವ ಟಿಡಿಪಿ ಮುಖ್ಯಸ್ಥ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ಅವರ ಸುರಕ್ಷತೆ ವಿಚಾರ ಮತ್ತೊಮ್ಮೆ ಚರ್ಚೆಗೆ ಕಾರಣವಾಗಿದೆ. ಚಂದ್ರಬಾಬು ಹತ್ಯೆಗೆ ಸಂಚು ರೂಪಿಸುತ್ತಿದ್ದಾರೆ ಎಂದು ಪತ್ರ ಬರೆದಿರುವ ಬಗ್ಗೆ ಕುಟುಂಬಸ್ಥರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸಂಪೂರ್ಣ ವಿವರ ಈ ಕೆಳಗಿನಂತಿದೆ.

Written by - Krishna N K | Last Updated : Oct 27, 2023, 05:32 PM IST
  • ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡುಗೆ ಜೀವ ಬೆದರಿಕೆ
  • ಎಸಿಬಿ ನ್ಯಾಯಾಧೀಶರಿಗೆ ಪತ್ರ ಬರೆದ ಚಂದ್ರಬಾಬು ನಾಯ್ಡು
  • ಕುಟುಂಬಸ್ಥರ ಆತಂಕಕ್ಕೆ ಕಾರಣವಾಯ್ತು ಬಾಬು ಜೀವ ಬೆದರಿಕೆ ಪತ್ರ
ಆಂಧ್ರ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಹತ್ಯೆಗೆ ಸಂಚು..! ಎಸಿಬಿ ನ್ಯಾಯಾಧೀಶರಿಗೆ ಪತ್ರ title=

Chandrababu Naidu : ಆರೋಗ್ಯ ಮತ್ತು ಸುರಕ್ಷತೆ ಕುರಿತು ಎಸಿಬಿ ನ್ಯಾಯಾಧೀಶರಿಗೆ ಚಂದ್ರಬಾಬು ನಾಯ್ಡು ಅವರು ಬರೆದಿರುವ ಮೂರು ಪುಟಗಳ ಪತ್ರ ಇದೀಗ ಸಂಚಲನ ಮೂಡಿಸಿದೆ. ಚಂದ್ರಬಾಬು ಅವರು ಎಸಿಬಿ ನ್ಯಾಯಾಧೀಶರಿಗೆ ಕಳುಹಿಸಿರುವ ಪತ್ರದಲ್ಲಿ ಅವರಿಗೆ ಜೀವ ಬೆದರಿಕೆ ಇದ್ದು, ಕೆಲವರು ತಮ್ಮನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ. ಇದು ಅವರ ಕುಟುಂಬಸ್ಥರ ಆತಂಕಕ್ಕೆ ಕಾರಣವಾಗಿದೆ.

ಎಪಿ ಸ್ಕಿಲ್ ಪ್ರಕರಣದಲ್ಲಿ ರಾಜಮಂಡ್ರಿ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿರುವ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ತಮಗೆ ಜೀವ ಬೆದರಿಕೆ ಇದೆ ಎಂದು ಎಸಿಬಿ ನ್ಯಾಯಾಧೀಶರಿಗೆ 3 ಪುಟಗಳ ಪತ್ರ ಬರೆದಿದ್ದಾರೆ. ತಮ್ಮನ್ನು ಜೈಲಿನಲ್ಲಿ ಕೊಲ್ಲಲು ಮಾವೋವಾದಿಗಳು ಸಂಚು ರೂಪಿಸಿದ್ದರು ಎಂದು ಚಂದ್ರಬಾಬು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಮಾವೋವಾದಿಗಳು ತಮ್ಮನ್ನು ಕೊಲ್ಲುವುದಾಗಿ ಜಿಲ್ಲಾ ಎಸ್ಪಿಗೂ ಪತ್ರ ಬರೆದಿದ್ದಾರೆ ಎಂದು ಚಂದ್ರಬಾಬು ಹೇಳಿದ್ದಾರೆ. 

ಇದನ್ನೂ ಓದಿ: ತಿರುಪತಿ ಭಕ್ತರ ಗಮನಕ್ಕೆ..! ಈ ದಿನದಂದು ದೇವಸ್ಥಾನದ ಬಾಗಿಲು ಮುಚ್ಚಲಾಗುತ್ತದೆ

ಅಲ್ಲದೆ ತಾವು ಜೈಲಿಗೆ ಬಂದಾಗ ಅವರ ವೀಡಿಯೋ, ಫೋಟೊ ತೆಗೆದು ದೃಶ್ಯಾವಳಿಗಳನ್ನು ಬಿಡುಗಡೆ ಮಾಡಿ ತಮ್ಮ ಗೌರವ, ಪ್ರತಿಷ್ಠೆಗೆ ಧಕ್ಕೆ ತಂದಿದ್ದಾರೆ ಎಂದು ಮಾಜಿ ಸಿಎಂ ಆರೋಪಿಸಿದ್ದಾರೆ. ಜೈಲಿನಲ್ಲಿ ಹಲವು ವಿಚಿತ್ರ ಘಟನೆಗಳು ನಡೆಯುತ್ತಿದ್ದು, ಕೆಲವರು ಗಾಂಜಾ ಪ್ಯಾಕೆಟ್‌ಗಳನ್ನು ಜೈಲಿನೊಳಗೆ ಎಸೆದಿದ್ದಾರೆ ಎನ್ನಲಾಗಿದೆ. ಅಲ್ಲದೆ, ಜೈಲಿನಲ್ಲಿ ಒಟ್ಟು 750 ಗಂಭೀರ ಅಪರಾಧಿಗಳಿದ್ದು, ಕೆಲ ಕೈದಿಗಳು ತಮ್ಮ ಸುರಕ್ಷತೆಗೆ ಧಕ್ಕೆ ತಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ..

ಅಕ್ಟೋಬರ್ 6 ರಂದು ಜೈಲಿನ ಮುಖ್ಯ ಗೇಟ್ ಮೇಲೆ ಡ್ರೋನ್ ಹಾರಿತ್ತು. ಮುಲಾಕಾತ್ ಅಂಗವಾಗಿ ಭೇಟಿಯಾದವರ ಫೋಟೋ ತೆಗೆಯಲು ಡ್ರೋನ್ ಬಳಸಲಾಗುತ್ತಿದೆ. ಪತ್ರದಲ್ಲಿ ಚಂದ್ರಬಾಬು ಅವರು ಮತ್ತು ತಮ್ಮ ಕುಟುಂಬ ಸದಸ್ಯರು ಜೈಲಿನ ಹೊರಗೆ ಅಪಾಯದಲ್ಲಿದ್ದಾರೆ ಎಂದು ಉಲ್ಲೇಖಿಸಿದ್ದಾರೆ. ಮೊದಲಿನಿಂದಲೂ ಜೈಲಿನಲ್ಲಿ ತಮ್ಮ ಪತಿ ಚಂದ್ರಬಾಬು ನಾಯ್ಡು ಅವರ ಪ್ರಾಣಕ್ಕೆ ಅಪಾಯವಿದೆ ಎಂದು ನಾರಾ ಭುವನೇಶ್ವರಿ ಹೇಳಿದ್ದರು. ತನ್ನ ಪತಿಯ ಸುರಕ್ಷತೆಗಾಗಿ ಪ್ರಾರ್ಥಿಸುತ್ತಿದ್ದೇನೆ ಎಂದಿದ್ದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News