Lokasabhe Election 2024 : ಕುಟುಂಬದ ಒಬ್ಬ ಮಹಿಳೆಗೆ ಒಂದು ಲಕ್ಷ ರೂಪಾಯಿ ! ಕಾಂಗ್ರೆಸ್ ನ ನಾರಿ ನ್ಯಾಯ ಗ್ಯಾರೆಂಟಿ

Congress Nari Nyay Guarantee: ರಾಜ್ಯ ವಿಧಾನಸಭೆ ಚುನಾವಣೆಯ ವೇಳೆ ಗ್ಯಾರಂಟಿ ಯೋಜನಗೆಳ ಮೂಲಕ ಕಾಂಗ್ರೆಸ್ ಜನರನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿತ್ತು. ಇದೀಗ ಲೋಕ ಸಭೆ ಚುನಾವಣೆಗೂ ಮೊದಲು ದೇಶದ ಮಹಿಳೆಯರಿಗಾಗಿ 'ನಾರಿ ನ್ಯಾಯ  ಗ್ಯಾರೆಂಟಿ' ಯನ್ನು ಘೋಷಿಸಿದೆ.

Written by - Ranjitha R K | Last Updated : Mar 13, 2024, 02:31 PM IST
  • ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಘೋಷಣೆ
  • ಮಹಿಳೆಯರಿಗಾಗಿ 'ನಾರಿ ನ್ಯಾಯ ಗ್ಯಾರೆಂಟಿ'
  • ಈ ಮೂಲಕ ಮಹಿಳೆಯರಿಗಾಗಿ 5 ಪ್ರಮುಖ ಘೋಷಣೆ
Lokasabhe Election 2024 : ಕುಟುಂಬದ ಒಬ್ಬ ಮಹಿಳೆಗೆ  ಒಂದು ಲಕ್ಷ ರೂಪಾಯಿ ! ಕಾಂಗ್ರೆಸ್ ನ ನಾರಿ ನ್ಯಾಯ ಗ್ಯಾರೆಂಟಿ  title=

Congress Nari Nyay Guarantee: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷ ಮಹಿಳೆಯರಿಗಾಗಿ ದೊಡ್ಡ ಮಟ್ಟದ ಘೋಷಣೆಗಳನ್ನು ಮಾಡಿದೆ. ಕಾಂಗ್ರೆಸ್ 'ನಾರಿ ನ್ಯಾಯ  ಗ್ಯಾರೆಂಟಿ' ಯನ್ನು ಘೋಷಿಸಿದೆ. ಈ ಮೂಲಕ ಕಾಂಗ್ರೆಸ್ ದೇಶದ ಮಹಿಳೆಯರಿಗಾಗಿ 5 ಪ್ರಮುಖ ಘೋಷಣೆಗಳನ್ನು ಮಾಡಿದೆ. 

ಮಹಿಳೆಯರಿಗೆ ಕಾಂಗ್ರೆಸ್ ನ 5 ಗ್ಯಾರೆಂಟಿ :  
ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 'ನಾರಿ ನ್ಯಾಯ  ಗ್ಯಾರೆಂಟಿ ಯೋಜನೆ'ಯನ್ನು ಘೋಷಿಸಿದ್ದಾರೆ. ಇದರ ಅನ್ವಯ ಮೊದಲ ಘೋಷಣೆ ಮಹಾಲಕ್ಷ್ಮಿ  ಗ್ಯಾರೆಂಟಿಯಾಗಿದೆ. 

ಮೊದಲ ಘೋಷಣೆ ಮಹಾಲಕ್ಷ್ಮಿ  ಗ್ಯಾರೆಂಟಿ : ಇದರ ಅಡಿಯಲ್ಲಿ ಪ್ರತಿ ಬಡ ಕುಟುಂಬದ ಪ್ರತಿಯೊಬ್ಬ ಮಹಿಳೆಗೆ ವಾರ್ಷಿಕವಾಗಿ 1 ಲಕ್ಷ ರೂ.ಯನ್ನು ನೀಡುವುದಾಗಿ ಘೋಷಿಸಿದ್ದಾರೆ.

ಇದನ್ನೂ ಓದಿ : Semiconductor: ಸೆಮಿಕಂಡಕ್ಟರ್ ಎಂದರೇನು ಇದನ್ನು ಎಲ್ಲಿ ಬಳಸಲಾಗುತ್ತದೆ? ಇದು ನಿಮಗೆ ತಿಳಿದಿದೆಯೇ

ಎರಡನೇ  ಘೋಷಣೆ  ಸಂಪೂರ್ಣ ಹಕ್ಕು : ಇದರ ಪ್ರಕಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಅರ್ಧಕ್ಕಿಂತ ಹೆಚ್ಚು ಹೊಸ ನೇಮಕಾತಿಗಳಲ್ಲಿ ಮಹಿಳೆಯರಿಗೆ ಅಧಿಕಾರ ನೀಡಲಾಗುವುದು. 

 'ಮೂರನೇ ಘೋಷಣೆ  ಶಕ್ತಿಯ ಸಮ್ಮಾನ : ಇದರ ಅಡಿಯಲ್ಲಿ ಅಂಗನವಾಡಿ, ಆಶಾ ಮತ್ತು ಮಧ್ಯಾಹ್ನದ ಊಟದ ಕಾರ್ಯಕರ್ತೆಯರ ಮಾಸಿಕ ಆದಾಯಕ್ಕೆ ಕೇಂದ್ರ ಸರ್ಕಾರದ ಕೊಡುಗೆಯನ್ನು ದ್ವಿಗುಣಗೊಳಿಸಲಾಗುವುದು. 

ನಾಲ್ಕನೇ ಘೋಷಣೆ 'ಅಧಿಕಾರ ಮೈತ್ರಿ' : ಇದರ ಅಡಿಯಲ್ಲಿ ಮಹಿಳೆಯರಲ್ಲಿ ಜಾಗೃತಿ ಮೂಡಿಸಲು ಪ್ರತಿ ಪಂಚಾಯಿತಿಗೆ ಒಬ್ಬ ಕಾನೂನು ಅಧಿಕಾರಿಯನ್ನು ನೇಮಿಸಲಾಗುವುದು. 

ಇದನ್ನೂ ಓದಿ :  Hariyana : ಹರಿಯಾಣ ನೂತನ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಪ್ರಮಾಣವಚನ ಸ್ವೀಕಾರ

ಐದನೇ ಘೋಷಣೆ 'ಸಾವಿತ್ರಿಬಾಯಿ ಫುಲೆ ಹಾಸ್ಟೆಲ್' : ಭಾರತ ಸರ್ಕಾರವು ಜಿಲ್ಲಾ ಕೇಂದ್ರದಲ್ಲಿ ಉದ್ಯೋಗಿ ಮಹಿಳೆಯರಿಗಾಗಿ ಕನಿಷ್ಠ ಒಂದು ಹಾಸ್ಟೆಲ್ ಅನ್ನು ನಿರ್ಮಿಸುತ್ತದೆ. ದೇಶಾದ್ಯಂತ ಈ ಹಾಸ್ಟೆಲ್‌ಗಳ ಸಂಖ್ಯೆಯನ್ನು ದ್ವಿಗುಣಗೊಳಿಸಲಾಗುವುದು.

ಇದುವರೆಗೆ ಕಾಂಗ್ರೆಸ್ ನ 82 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ : 
ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಇದುವರೆಗೆ 82 ಅಭ್ಯರ್ಥಿಗಳನ್ನು ಘೋಷಿಸಿದೆ. ಲೋಕಸಭೆ ಚುನಾವಣೆಗೆ ಪಕ್ಷವು 43 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡಿದೆ.ಇದಕ್ಕೂ ಮುನ್ನ ಶುಕ್ರವಾರ ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಕಾಂಗ್ರೆಸ್ ನ ಮೊದಲ ಪಟ್ಟಿಯಲ್ಲಿ ಪಕ್ಷದ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಹೆಸರೂ ಸೇರಿತ್ತು. ರಾಹುಲ್ ಗಾಂಧಿ  ಪ್ರಸ್ತುತ ಸಂಸದರಾಗಿರುವ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಎರಡನೇ ಪಟ್ಟಿಯಲ್ಲಿ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಮತ್ತು ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರ ಪುತ್ರ ನಕುಲ್ ನಾಥ್ ಅವರ ಹೆಸರುಗಳು ಸೇರಿವೆ. ವೈಭವ್ ಗೆಹ್ಲೋಟ್ ಅವರನ್ನು ರಾಜಸ್ಥಾನದ ಜಲೋರ್ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ವೈಭವ್ ಕಳೆದ ಲೋಕಸಭಾ ಚುನಾವಣೆಯಲ್ಲಿ ಜೋಧಪುರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದರು.  ನಕುಲ್ ನಾಥ್ ಅವರನ್ನು ಮತ್ತೊಮ್ಮೆ ಮಧ್ಯಪ್ರದೇಶದ ಛಿಂದ್ವಾರಾ ಕ್ಷೇತ್ರದಿಂದ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News