ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಸಿಬಿಐ ಭಾನುವಾರ ಸುಮಾರು ಒಂಬತ್ತು ಗಂಟೆಗಳ ಕಾಲ ವಿಚಾರಣೆ ನಡೆಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ-Election 2023: ಪ್ರಚಾರಕ್ಕೆ ತೆರಳಿದ್ದ BJP ಅಭ್ಯರ್ಥಿ ಅವಿನಾಶ್ ಜಾಧವ್ ಕಾರಿನ ಮೇಲೆ ಕಲ್ಲು ತೂರಾಟ!
ಬೆಳಿಗ್ಗೆ 11 ಗಂಟೆ ಸುಮಾರಿಗೆ ಏಜೆನ್ಸಿ ಪ್ರಧಾನ ಕಚೇರಿಗೆ ಆಗಮಿಸಿದ ಸಿಎಂ ಕೇಜ್ರಿವಾಲ್ ಅವರನ್ನು ಭ್ರಷ್ಟಾಚಾರ ನಿಗ್ರಹ ದಳದ ಮೊದಲ ಮಹಡಿಯ ಕಚೇರಿಗೆ ಕರೆದೊಯ್ಯಲಾಯಿತು, ಅಲ್ಲಿ ಅವರನ್ನು ತನಿಖಾ ತಂಡವು ಪ್ರಶ್ನಿಸಿತುಎನ್ನಲಾಗಿದೆ. ಸುಮಾರು ಒಂಬತ್ತು ಗಂಟೆಗಳ ವಿಚಾರಣೆಯ ನಂತರ ರಾತ್ರಿ 8.30 ರ ಸುಮಾರಿಗೆ ಕಟ್ಟಡದಿಂದ ನಿರ್ಗಮಿಸಿದ ಕೇಜ್ರಿವಾಲ್ ಕಾಯುತ್ತಿದ್ದ ಮಾಧ್ಯಮ ಪ್ರತಿನಿಧಿಗಳತ್ತ ಕೈ ಬೀಸಿದರು.
#WATCH | CBI questioning conducted for 9.5 hours. Entire alleged liquor scam is fake, AAP is 'kattar imaandaar party'. They want to finish AAP but the country's people are with us...: Delhi CM Arvind Kejriwal speaks after nine hours of CBI questioning in excise policy case pic.twitter.com/ODnCGKv7R3
— ANI (@ANI) April 16, 2023
ಇದನ್ನೂ ಓದಿ-Karnataka Election 2023 : ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜೀನಾಮೆ
ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, "ಸಿಬಿಐ ವಿಚಾರಣೆಯನ್ನು 9.5 ಗಂಟೆಗಳ ಕಾಲ ನಡೆಸಲಾಗಿದೆ, ಸಂಪೂರ್ಣ ಆಪಾದಿತ ಮದ್ಯ ಹಗರಣ ನಕಲಿಯಾಗಿದೆ, ಅವರು ಎಎಪಿಯನ್ನು ಮುಗಿಸಲು ಬಯಸುತ್ತಾರೆ ಆದರೆ ದೇಶದ ಜನರು ನಮ್ಮೊಂದಿಗಿದ್ದಾರೆ" ಎಂದು ಹೇಳಿದರು. ಸಿಬಿಐ ಅಧಿಕಾರಿಗಳ ಆತಿಥ್ಯಕ್ಕೆ ಧನ್ಯವಾದ ಹೇಳಿದ ಕೇಜ್ರಿವಾಲ್, "ಅವರು ನನಗೆ ಸ್ನೇಹ ಮತ್ತು ಸೌಹಾರ್ದಯುತವಾಗಿ ಪ್ರಶ್ನೆಗಳನ್ನು ಕೇಳಿದರು. ಅವರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ ನಾನು ಉತ್ತರಿಸಿದ್ದೇನೆ" ಎಂದು ಹೇಳಿದರು.
ಕೇಜ್ರಿವಾಲ್ಗೆ ಸಿಬಿಐ ಸಮನ್ಸ್ನ ವಿರುದ್ಧ ಆಮ್ ಆದ್ಮಿ ಪಕ್ಷವು ಹಲವು ಪ್ರದೇಶಗಳಲ್ಲಿ ಪ್ರತಿಭಟನೆಗಳನ್ನು ನಡೆಸಿತು ಮತ್ತು ಹಲವಾರು ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.