ಭೀಕರ ಅಪಘಾತ: ಪ್ರಪಾತಕ್ಕೆ ಬಸ್ ಉರುಳಿ 40ಕ್ಕೂ ಹೆಚ್ಚು ಪ್ರಯಾಣಿಕರ ಸಾವು

 ಬೆಳಿಗ್ಗೆ 11.30 ರಿಂದ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು 70 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎನ್ನಲಾಗಿದೆ. 

Last Updated : Sep 11, 2018, 04:58 PM IST
ಭೀಕರ ಅಪಘಾತ: ಪ್ರಪಾತಕ್ಕೆ ಬಸ್ ಉರುಳಿ 40ಕ್ಕೂ ಹೆಚ್ಚು ಪ್ರಯಾಣಿಕರ ಸಾವು title=

ಹೈದರಾಬಾದ್: ತೆಲಂಗಾಣ ರಾಜ್ಯ ಸಾರಿಗೆ ಸಂಸ್ಥೆಯ ಬಸೊಂದು ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ 46 ಪ್ರಯಾಣಿಕರು ಮೃತಪಟ್ಟಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಧಾರುಣ ಘಟನೆ ಮಂಗಳವಾರ ಬೆಳಿಗ್ಗೆ ನಡೆದಿದೆ. 

ತೆಲಂಗಾಣದ ಕೊಂಡಾಗಟ್ಟುವಿನಿಂದ ಜಗತೀಯಾಲ್​ ಕಡೆಗೆ ಹೊರಟಿದ್ದ ಸರ್ಕಾರಿ ಬಸ್ ಬ್ರೇಕ್ ಫೇಲ್ ಆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಬೆಳಿಗ್ಗೆ 11.30 ರಿಂದ 12 ಗಂಟೆ ಸಮಯದಲ್ಲಿ ಈ ಘಟನೆ ಸಂಭವಿಸಿದ್ದು, ಸುಮಾರು 70 ಪ್ರಯಾಣಿಕರು ಬಸ್ಸಿನಲ್ಲಿದ್ದರು ಎನ್ನಲಾಗಿದೆ. 

ಘಟನೆ ಬಗ್ಗೆ ತಿಳಿದ ಮುಖ್ಯಮಂತ್ರಿ ಚಂದ್ರಶೇಖರ್​​ ರಾವ್​ ತೀವ್ರ ಶೋಕ ವ್ಯಕ್ತಪಡಿಸಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಅಲ್ಲದೆ, ಕರೀಂ ನಗರ ಜಿಲ್ಲಾ ಉಸ್ತುವಾರಿ ಸಚಿವ ಎಟಾಲಾ ರಾಜೇಂದರ್‌ ಅವರಿಗೆ ರಕ್ಷಣಾ ಕಾರ್ಯಾಚರಣೆ ಉಸ್ತುವಾರಿ ನೋಡಿಕೊಳ್ಳುವಂತೆ ಮುಖ್ಯಮಂತ್ರಿ ಸೂಚಿಸಿದ್ದಾರೆ. 

Trending News