ಒಂದು ಮತದ ಅಂತರದಿಂದ ಸೋತಿದ್ದ ಅಭ್ಯರ್ಥಿಗೆ ಈ ಬಾರಿ 59 ಸಾವಿರ ಅಂತರದ ಗೆಲುವು

Karnataka Assembky Election Result : ಹಾಲಿ ಬಿಜೆಪಿ ಶಾಸಕ ಎನ್.ಮಹೇಶ್ ವಿರುದ್ಧ ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ  59,519 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಿರಂತರ ಸೋಲಿಗೆ  ಫುಲ್ ಸ್ಟಾಪ್ ಇಟ್ಟು ರಾಜಕೀಯದಲ್ಲಿ ಮತ್ತೇ ಮೇಲೆದಿದ್ದಾರೆ.

Written by - Ranjitha R K | Last Updated : May 13, 2023, 05:55 PM IST
  • ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ 59,519 ಮತಗಳ ಅಂತರದಿಂದ ಗೆಲುವು
  • ಹಾಲಿ ಬಿಜೆಪಿ ಶಾಸಕ ಎನ್.ಮಹೇಶ್ ವಿರುದ್ಧ ಭರ್ಜರಿ ಜಯ
  • ಎ.ಆರ್.ಕೆಗೆ ಈ ಗೆಲುವು ಹೊಸ ಹುರುಪು ನೀಡಿದೆ.
ಒಂದು ಮತದ  ಅಂತರದಿಂದ ಸೋತಿದ್ದ ಅಭ್ಯರ್ಥಿಗೆ ಈ ಬಾರಿ 59 ಸಾವಿರ ಅಂತರದ ಗೆಲುವು  title=

ಚಾಮರಾಜನಗರ:‌ ಧ್ರುವನಾರಾಯಣ ವಿರುದ್ಧ 1 ಮತದ ಅಂತರದಿಂದ ಸೋತ ಬಳಿಕ ನಿರಂತರವಾಗಿ ಸೋಲು ಅನುಭವಿಸಿದ್ದ ಎ.ಆರ್‌.ಕೃಷ್ಣಮೂರ್ತಿಗೆ ಕೊಳ್ಳೇಗಾಲದ ಮತದಾರರು ಭರ್ಜರಿ ಗೆಲುವನ್ನೇ ಕೊಟ್ಟಿದ್ದಾರೆ.

ಹೌದು, ಹಾಲಿ ಬಿಜೆಪಿ ಶಾಸಕ ಎನ್.ಮಹೇಶ್ ವಿರುದ್ಧ ಎ.ಆರ್.ಕೃಷ್ಣಮೂರ್ತಿ ಬರೋಬ್ಬರಿ  59,519 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಈ ಮೂಲಕ ನಿರಂತರ ಸೋಲಿಗೆ  ಫುಲ್ ಸ್ಟಾಪ್ ಇಟ್ಟು ರಾಜಕೀಯದಲ್ಲಿ ಮತ್ತೇ ಮೇಲೆದಿದ್ದಾರೆ.

ಇದನ್ನೂ ಓದಿ : Koppal Assembly Election Result 2023: ಕೊಪ್ಪಳದಲ್ಲಿ 3 ‘ಕೈ’ವಶ, 1 ‘ಕಮಲ’ ತೆಕ್ಕೆಗೆ!

ನಿರಂತರ ಸೋಲಿನಿಂದ ಕಂಗೆಟ್ಟಿದ್ದ ಎ.ಆರ್.ಕೆಗೆ ಈ ಗೆಲುವು ಹೊಸ ಹುರುಪು ನೀಡಿದೆ. ಕೇವಲ 1 ಮತದ ಸೋಲಿನ ನೋವನ್ನು ಈ ಭರ್ಜರಿ ಗೆಲುವು ಮರೆಸಿದೆ. 

ಮಹೇಶ್ ಗೆ ಹೀನಾಯ ಸೋಲು: 
ಜಿಲ್ಲೆಯಲ್ಲಿ ಅಧಿಕ ಮತಗಳ ಅಂತರದಿಂದ  ಮಹೇಶ್ ಸೋಲನುಭವಿಸಿದ್ದಾರೆ. ಭರ್ತಿ 59 ಸಾವಿರ ಮತಗಳ ಅಂತರದಿಂದ ಹೀನಾಯ ಸೋಲು ಅನುಭವಿಸಿದ್ದಾರೆ. ಬಿಎಸ್ಪಿ ಇಂದ ಬಿಜೆಪಿ ಸೇರಿದ್ದ ಬಳಿಕ ತಾಲೂಕಿನಲ್ಲಿ ಭುಗಿಲೆದ್ದಿದ್ದ ಅಸಮಾಧಾನ ಈ ಬಾರಿ ಚುನಾವಣೆಯಲ್ಲಿ  ಸ್ಪೋಟಗೊಂಡಿದೆ. 

ಇದನ್ನೂ ಓದಿ : Karnataka Assembly election result : ಸೋಲಿನ ಹೊಣೆ ಹೊರುತ್ತೇನೆ: ನಳಿನ್‍ಕುಮಾರ್ ಕಟೀಲ್

ಎ.ಆರ್.ಕೃಷ್ಣಮೂರ್ತಿಗೆ ಅನುಕಂಪ, ಬಿಎಸ್ಪಿ ಬೆಂಬಲ, ಕಾಂಗ್ರೆಸ್ ಗೆ ಹಲವರ ಸೇರ್ಪಡೆ ಕೈ ಗೆಲುವಿಗೆ ಸಹಕಾರವಾಗಿದ್ದು, ವ್ಯಾಪಾಕ ಆಡಳಿತ ವಿರೋಧಿ ನೀತಿ  ಮಹೇಶ್ ಅವರಿಗೆ  ಮುಳುವಾಗಿದೆ.

ಫೈಟ್ ಕೊಡದ ಪೊಲೀಸ್ ಇನ್ಸ್ಪೆಕ್ಟರ್: 
ಪೊಲೀಸ್ ಹುದ್ದೆಗೆ ರಾಜೀನಾಮೆ ಕೊಟ್ಟು ರಾಜಕೀಯಕ್ಕೆ ಧುಮುಕಿ ಜೆಡಿಎಸ್ ನಿಂದ ಕಣಕ್ಕಿಳಿದಿದ್ದ ಬಿ‌.ಪುಟ್ಟಸ್ವಾಮಿ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಯಾವುದೇ ಸವಾಲು ಒಡ್ಡಿಲ್ಲ. ಕೇವಲ 3925 ಮತಗಳಿಗಷ್ಟೇ ತೃಪ್ತಿಪಟ್ಟುಕೊಂಡಿದ್ದಾರೆ.

ಇದನ್ನೂ ಓದಿ : Karnataka Election Results 2023: ನಾಲ್ಕು ಕ್ಷೇತ್ರಗಳಲ್ಲಿ ಬಿಜೆಪಿ, 2 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆ ಜಯ, ಇಲ್ಲಿದೆ ಬೀದರ್ ಜಿಲ್ಲೆಯ ಫೈನಲ್ ರಿಸಲ್ಟ್

 ಅಂತರ ಮುಖ್ಯವಲ್ಲ- ಗೆಲುವು ಮುಖ್ಯ:
1 ಮತದ ಅಂತರದಿಂದ ಸೋತ ನನಗೆ ಅಂತರ ಮುಖ್ಯವಲ್ಲ, ಗೆಲುವು ಮುಖ್ಯ ಎಂದು ಕೊಳ್ಳೇಗಾಲದ ವಿಜೇತ ಕಾಂಗ್ರೆಸ್ ಅಭ್ಯರ್ಥಿ ಎ.ಆರ್.ಕೃಷ್ಣಮೂರ್ತಿ ಹೇಳಿದ್ದಾರೆ. 1 ಮತದ ಅಂತರದಿಂದ ಸೋತಿದ್ದೆ ಆದರೀಗ 50 ಸಾವಿರಕ್ಕೂ ಅಧಿಕ ಮತಗಳ‌ ಅಂತರದಿಂದ ಗೆದ್ದಿದ್ದೇನೆ,   ಸಿದ್ದರಾಮಯ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳು, ನನ್ನ ಮೇಲಿದ್ದ ಜನರ ವಿಶ್ವಾಸ, ಪಕ್ಷದ ಸಂಘಟನೆಯಿಂದ ಈ ಬಾರಿ ಗೆದ್ದಿದ್ದೇನೆ  ಎಂದಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News