ಬಿಜೆಪಿ ತೊರೆದು ಜೆಡಿಎಸ್ ಸೇರಲು ಮುಂದಾದ ಸಂಸದ ಕರಡಿ ಸಂಗಣ್ಣ

ಬಿಜೆಪಿ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್‌ನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

Written by - Zee Kannada News Desk | Last Updated : Apr 17, 2023, 12:44 AM IST
  • ವಿಧಾನಸಭೆ ಪ್ರವೇಶಿಸಲು ಉತ್ಸುಕರಾಗಿರುವ ಸಂಗಣ್ಣ ಕೊಪ್ಪಳದಿಂದ ಬಿಜೆಪಿ ಟಿಕೆಟ್ ಬಯಸಿದ್ದರು.
  • ಆದರೆ, ಅವರ ಮನವಿಯನ್ನು ಬಿಜೆಪಿ ತಿರಸ್ಕರಿಸಿದೆ.
  • ಈ ಸ್ಥಾನಕ್ಕೆ ಪಕ್ಷ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಬೇಕಿದೆ.
ಬಿಜೆಪಿ ತೊರೆದು ಜೆಡಿಎಸ್ ಸೇರಲು ಮುಂದಾದ ಸಂಸದ ಕರಡಿ ಸಂಗಣ್ಣ  title=
file photo

ಬೆಂಗಳೂರು: ಬಿಜೆಪಿ ಕೊಪ್ಪಳ ಲೋಕಸಭಾ ಸದಸ್ಯ ಕರಡಿ ಸಂಗಣ್ಣ ಸೋಮವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಜೆಡಿಎಸ್ ಸೇರುವ ಸಾಧ್ಯತೆ ಇದೆ ಎನ್ನಲಾಗಿದೆ.ಅವರು ಕೊಪ್ಪಳ ವಿಧಾನಸಭಾ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್‌ನಿಂದ ಸ್ಪರ್ಧಿಸಲು ಯೋಜಿಸುತ್ತಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಇದನ್ನೂ ಓದಿ: "ಬಿಜೆಪಿಗೆ ಹಿಂದುಳಿದ ವರ್ಗಗಳ ಬಗ್ಗೆ ಕಾಳಜಿ ಇದ್ದರೆ ಶೇ.50 ಮೀಸಲಾತಿ ಮಿತಿಯನ್ನು ತೆರವುಗೊಳಿಸಲಿ"

ವಿಧಾನಸಭೆ ಪ್ರವೇಶಿಸಲು ಉತ್ಸುಕರಾಗಿರುವ ಸಂಗಣ್ಣ ಕೊಪ್ಪಳದಿಂದ ಬಿಜೆಪಿ ಟಿಕೆಟ್ ಬಯಸಿದ್ದರು.ಆದರೆ, ಅವರ ಮನವಿಯನ್ನು ಬಿಜೆಪಿ ತಿರಸ್ಕರಿಸಿದೆ.ಈ ಸ್ಥಾನಕ್ಕೆ ಪಕ್ಷ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಬೇಕಿದೆ.73 ವರ್ಷದ ಕರಡಿ ಸಂಗಣ್ಣ 2014 ಮತ್ತು 2019ರಲ್ಲಿ ಸತತ ಎರಡು ಬಾರಿ ಕೊಪ್ಪಳ ಕ್ಷೇತ್ರದಿಂದ ಲೋಕಸಭೆಗೆ ಗೆದ್ದಿದ್ದಾರೆ.ಅವರು ಮೊದಲು ನಾಲ್ಕು ಅವಧಿಗೆ ವಿಧಾನಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬೆಳೆಸಿದ ಪಕ್ಷ ಬಿಟ್ಟು ದುಡುಕಿದ್ರಾ ಸವದಿ, ಶೆಟ್ಟರ್‌..? : ಇಬ್ಬರಿಗೂ ಬಿಜೆಪಿ ಕೊಟ್ಟ ಬಿಗ್‌ ಆಫರ್‌ ಇವು..!

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಪ್ರಲ್ಹಾದ್ ಜೋಶಿ, ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರನ್ನು ಪಕ್ಷ ಬಿಡದಂತೆ ಮನವೊಲಿಸಲು ಪ್ರಯತ್ನಿಸಿದರು. ಆದರೂ ಟಿಕೆಟ್ ಸಿಗದಿದ್ದರೆ ಲೋಕಸಭಾ ಸದಸ್ಯತ್ವ ಹಾಗೂ ಬಿಜೆಪಿಗೆ ರಾಜೀನಾಮೆ ನೀಡುವುದಾಗಿ ಸಂಗಣ್ಣ ಕರಡಿ ಸ್ಪಷ್ಟವಾಗಿ ಹೇಳಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News