ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲುಗಲ್ಲು: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು

  ಚಂದ್ರಯಾನ - 3 ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲುಗಲ್ಲನ್ನು ಇಸ್ರೋ ನೆಟ್ಟಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸ ರಾಜು ಹರ್ಷ ವ್ಯಕ್ತಪಡಿಸಿದರು. 

Written by - Manjunath Hosahalli | Edited by - Manjunath N | Last Updated : Jul 14, 2023, 07:32 PM IST
  • ಚಂದ್ರಯಾನ - 1 ಮತ್ತು 2 ರ ಯಶಸ್ವಿ ಕಾರ್ಯಾಚರಣೆ ಗಳಿಂದ ಇಸ್ರೋ ಸಂಸ್ಥೆ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಕನಸನ್ನು ಕಾಣಲು ಅನುವು ಮಾಡಿಕೊಟ್ಟಿದೆ.
  • ಇಂದಿನ ಈ ಯಶಸ್ವಿ ಕಾರ್ಯಾಚರಣೆ ವಿಶ್ವದ ಚಂದ್ರನ ಅನ್ವೇಷಣೆಯ ಕ್ಷೇತ್ರದಲ್ಲಿ ವಿಶೇಷ ಮೈಲುಗಲ್ಲನ್ನು ಸಾಧಿಸಿದೆ.
  • ಮುಂದಿನ ದಿನಗಳಲ್ಲಿ ಚಂದ್ರನ ಮಣ್ಣಿನ ಮಾದರಿಗಳನ್ನು ಸಮರ್ಥವಾಗಿ ಮರಳಿ ತರುವ ಮೂಲಕ, ಚಂದ್ರನ ಮೇಲ್ಮೈ ನ ನಮ್ಮ ತಿಳುವಳಿಕೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ಅನುವು ಮಾಡಿ ಕೊಡಲಿದೆ
 ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲುಗಲ್ಲು: ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಭೋಸರಾಜು title=
file photo

ಬೆಂಗಳೂರು:  ಚಂದ್ರಯಾನ - 3 ರ ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲುಗಲ್ಲನ್ನು ಇಸ್ರೋ ನೆಟ್ಟಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವರಾದ ಎನ್ ಎಸ್ ಭೋಸ ರಾಜು ಹರ್ಷ ವ್ಯಕ್ತಪಡಿಸಿದರು. 

ಇದನ್ನೂ ಓದಿ: ಮೊಟ್ಟೆ ವಿಚಾರ ಕ್ಯಾಬಿನೆಟ್ ನಲ್ಲಿ ಪ್ರಸ್ತಾಪ ಮಾಡುತ್ತೇನೆ- ಲಕ್ಷ್ಮಿ

ಇಂದು ಚಂದ್ರಯಾನ - 3 ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ - 1 ಮತ್ತು 2 ರ ಯಶಸ್ವಿ ಕಾರ್ಯಾಚರಣೆ ಗಳಿಂದ ಇಸ್ರೋ ಸಂಸ್ಥೆ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಕನಸನ್ನು ಕಾಣಲು ಅನುವು ಮಾಡಿಕೊಟ್ಟಿದೆ. ಇಂದಿನ ಈ ಯಶಸ್ವಿ ಕಾರ್ಯಾಚರಣೆ ವಿಶ್ವದ ಚಂದ್ರನ ಅನ್ವೇಷಣೆಯ ಕ್ಷೇತ್ರದಲ್ಲಿ ವಿಶೇಷ ಮೈಲುಗಲ್ಲನ್ನು ಸಾಧಿಸಿದೆ. ಮುಂದಿನ ದಿನಗಳಲ್ಲಿ ಚಂದ್ರನ ಮಣ್ಣಿನ ಮಾದರಿಗಳನ್ನು ಸಮರ್ಥವಾಗಿ ಮರಳಿ ತರುವ ಮೂಲಕ, ಚಂದ್ರನ ಮೇಲ್ಮೈ ನ ನಮ್ಮ ತಿಳುವಳಿಕೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ಅನುವು ಮಾಡಿ ಕೊಡಲಿದೆ ಎಂದರು. 

ಇದನ್ನೂ ಓದಿ: ಸದನದಲ್ಲಿ ಪ್ರಮುಖ ವಿಷಯಗಳ ಕುರಿತು ಗಂಭೀರ ಚರ್ಚೆ ಇಲ್ಲ

ಚಂದ್ರಯಾನ - 3 ರ ಯಶಸ್ಸನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಇಸ್ರೋ ವಿಜ್ಞಾನಿಗಳು ಕೈಗೊಂಡ ತಾಂತ್ರಿಕ ಪ್ರಗತಿ ಮತ್ತು ಅಂತರರಾಷ್ಟ್ರೀಯ ಸಹಯೋಗಗಳು ಶ್ಲಾಘನೀಯ. ಇಂತಹ ಬದ್ಧತೆ ಮತ್ತು ನಿರಂತರ ಸಾಧನೆ ಭಾರತ ದೇಶವನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದುಕೊಳ್ಳಲು ಅನುವು ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

Trending News