ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯ

 ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ. ಅವರಿಗೆ ಜನರ ಪ್ರೋತ್ಸಾಹ ದೊರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ 

Written by - Manjunath N | Last Updated : May 2, 2024, 12:12 AM IST
  • 2014 ರಲ್ಲಿ ಕೊಟ್ಟ ಭರವಸೆಗಳನ್ನು ಹತ್ತು ವರ್ಷ ಕಳೆದರೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಈಡೇರಿಸಲು ಆಗಲಿಲ್ಲ.
  • ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದರು ಎಂದು ಈ ಚುನಾವಣೆಯಲ್ಲಿ ಜನರಿಗೆ ಅರ್ಥವಾಗಿದೆ.
  • ಈಗ ಅವರ ನಿಜಬಣ್ಣ ಬಯಲಾಗಿದೆ.
ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ-ಸಿಎಂ ಸಿದ್ದರಾಮಯ್ಯ  title=

ಜೇವರಗಿ: ಬಿಜೆಪಿ ಧರ್ಮ ಹಾಗೂ ಜಾತಿಗಳ ನಡುವೆ ದ್ವೇಷವನ್ನು ಬೆಳೆಸುತ್ತದೆ. ಅವರಿಗೆ ಜನರ ಪ್ರೋತ್ಸಾಹ ದೊರೆಯಬಾರದು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯ ಪಟ್ಟಿದ್ದಾರೆ 

ಅವರು ಜೇವರ್ಗಿಯಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮವಾದ ಪ್ರಜಾಧ್ವನಿಯಲ್ಲಿ ಭಾಗವಹಿಸಿ, ನೆರೆದಿದ್ದ ಸಹಸ್ರಾರು ಜನರನ್ನು ಉದ್ದೇಶಿಸಿ ಮಾತನಾಡಿದರು.

2014 ರಲ್ಲಿ ಕೊಟ್ಟ ಭರವಸೆಗಳನ್ನು ಹತ್ತು ವರ್ಷ ಕಳೆದರೂ ಪ್ರಧಾನಿ ನರೇಂದ್ರ ಮೋದಿ ಅವರಿಂದ ಈಡೇರಿಸಲು ಆಗಲಿಲ್ಲ. ಸುಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದರು ಎಂದು ಈ ಚುನಾವಣೆಯಲ್ಲಿ ಜನರಿಗೆ ಅರ್ಥವಾಗಿದೆ. ಈಗ ಅವರ ನಿಜಬಣ್ಣ ಬಯಲಾಗಿದೆ.

2019 ರ ಚುನಾವಣೆಯಲ್ಲಿ ಸಂವಿಧಾನದ ಆರ್ಟಿಕಲ್‌ 370 ರದ್ದತಿ, ಪುಲ್ವಾಮಾ ದಾಳಿಯಂತಹ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಅಧಿಕಾರಕ್ಕೆ ಬಂದರು. ಆದರೆ 2024 ರಲ್ಲಿ ಮತ್ತೆ ಜನರ ದಾರಿ ತಪ್ಪಿಸಲು ಸಾಧ್ಯವಿಲ್ಲ.

ಎಸ್‌.ಸಿ.ಎಸ್‌.ಪಿ. / ಟಿ.ಎಸ್.ಪಿ ಕಾಯ್ದೆಯಲ್ಲಿರುವ ಹಣವನ್ನು ಕಾಂಗ್ರೆಸ್ ಸರ್ಕಾರ ಬೇರೆ ಉದ್ದೇಶಗಳಿಗೆ ಖರ್ಚು ಮಾಡಿದೆ ಎಂದು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಿದ್ದ ಹಣವನ್ನು ಆ ಸಮುದಾಯಗಳಿಗೆ ತಲುಪಿಸಲು ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಪಕ್ಷದವರು ಸುಳ್ಳು ಜಾಹೀರಾತು ನೀಡಿದ್ದಾರೆ. ಈ ಜಾಹೀರಾತು ನೀಡುವ ನೈತಿಕ ಹಕ್ಕು ನಿಮಗೆ ಏನಿದೆ ನರೇಂದ್ರ ಮೋದಿ ಅವರೇ? ಕೇಂದ್ರದಲ್ಲಿ ನೀವು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳಿಗೆ ಜನಸಂಖ್ಯೆಗೆ ಆಧಾರವಾಗಿ ಹಣ ಖರ್ಚು ಮಾಡುವ ಕಾಯ್ದೆ ಮಾಡಿದ್ದೀರಾ? ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ : ಸಮುದ್ರದ ಮಧ್ಯೆ ತಮಿಳುನಾಡು ಮೀನುಗಾರರ ಮೇಲೆ ಶ್ರೀಲಂಕಾ ಕಡಲ್ಗಳ್ಳರ ದಾಳಿ

2013ರ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಎಸ್ ಸಿ ಎಸ್ ಪಿ / ಟಿಎಸ್ ಪಿ ಕಾಯ್ದೆ ಜಾರಿ ಮಾಡಿದೆವು. ಅಂದು 30 ಸಾವಿರ ಕೋಟಿ ರೂ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟೆವು. ನಂತರದ ಬಸವರಾಜ್ ಬೊಮ್ಮಾಯಿ ಸರ್ಕಾರದಲ್ಲಿ ಈ ಮೊತ್ತ 26 ಸಾವಿರ ಕೋಟಿಗೆ ಇಳಿಯಿತು. ಈಗಿನ ನಮ್ಮ ಸರ್ಕಾರದ ಅವಧಿಯಲ್ಲಿ ಎಸ್ ಸಿ ಎಸ್ ಟಿ ಜನರಿಗಾಗಿ 39 ಸಾವಿರ ಕೋಟಿ ಇಟ್ಟಿದ್ದೇವೆ. ದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿರುವ ಯಾವುದೇ ರಾಜ್ಯಗಳಲ್ಲಿ ಈ ಕಾಯ್ದೆಯಾಗಲಿ, ಇಂತಹ ಕಾರ್ಯಕ್ರಮವಾಗಲಿ ಜಾರಿಯಾಗಿದೆಯೇ? ದಲಿತರ ಬಗ್ಗೆ ಬದ್ಧತೆಯಾಗಲಿ, ಕಾಳಜಿಯಾಗಲಿ ಇಲ್ಲದ ಬಿಜೆಪಿಯವರಿಗೆ ನಮ್ಮ ಸರ್ಕಾರವನ್ನು ಪ್ರಶ್ನಿಸಲು ನೈತಿಕತೆ ಇಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಲ್ಯಾಣ ಕರ್ನಾಟಕ ಭಾಗದ ಮಲ್ಲಿಕಾರ್ಜುನ ಖರ್ಗೆಯವರು ಸಂಸದರಾಗಿದ್ದರೆ, ಈ ಬಗ್ಗೆ ಕೇಂದ್ರವನ್ನು ಖಂಡಿತವಾಗಿಯೂ ಪ್ರಶ್ನಿಸುತ್ತಿದ್ದರು. ಅವರ ಸೋಲಿನಿಂದ ಈ ಭಾಗದ ಜನರಿಗೆ ಅನ್ಯಾಯವಾಗಿದೆ. ಮಲ್ಲಿಕಾರ್ಜುನ್ ಖರ್ಗೆ ಹಾಗೂ ಧರ್ಮಸಿಂಗ್ ಅವರ ಹೋರಾಟವಿಲ್ಲದಿದ್ದರೆ ಈ ಭಾಗಕ್ಕೆ 371 ಜೆ ಸ್ಥಾನಮಾನ ದೊರೆಯಲು ಸಾಧ್ಯವಾಗುತ್ತಿರಲಿಲ್ಲ. ಬಿಜೆಪಿ ಸರ್ಕಾರದಲ್ಲಿ ಅದ್ವಾನಿಯವರು ವಿಶೇಷ ಸ್ಥಾನಮಾನವನ್ನು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಹೈದ್ರಾಬಾದ್ ಕರ್ನಾಟಕ ಪ್ರಾಂತ್ಯದ ಅಭಿವೃದ್ಧಿಗೆ ಮಲ್ಲಿಕಾರ್ಜುನ ಖರ್ಗೆಯವರು ನೀಡಿದ ಕೊಡುಗೆಯನ್ನು ಇಲ್ಲಿನ ಜನರು ಮರೆಯಬಾರದು ಎಂದು ಅವರು ತಿಳಿಸಿದರು.

ಈ ಭಾಗದ ಅಭಿವೃದ್ಧಿಗೆ ನಮ್ಮ ಸರ್ಕಾರವು 5,000 ಕೋಟಿ ರೂ.ಗಳನ್ನು ನೀಡಿದೆ. ಈ ಭಾಗದ ಸಂಸದರಿಂದ ಯಾವ ಅಭಿವೃದ್ಧಿಯೂ ಆಗಲಿಲ್ಲ. ಆದ್ದರಿಂದ ಈ ಬಾರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ, ಖರ್ಗೆಯವರ ಕೊಡುಗೆಗೆ ಜನರು ಗೌರವ ತೋರಬೇಕೆಂದು ಮನವಿ ಮಾಡುತ್ತೇನೆ ಎಂದು ಕೋರಿದರು.

ಇದನ್ನೂ ಓದಿ : ಅಯೋಧ್ಯೆಯ ರಾಮ ಮಂದಿರ ನಿರ್ಮಾಣದ ಬಳಿಕ ಮೊದಲ ಭೇಟಿ ನೀಡುತ್ತಿರುವ ರಾಷ್ಟ್ರಪತಿ ಮುರ್ಮು

ಹಿಂದುಳಿದವರನ್ನು, ದಲಿತರನ್ನು ಮುಸಲ್ಮಾನರ ವಿರೋಧ ಎತ್ತಿಕಟ್ಟುವ ಕೆಲಸವನ್ನು ಬಿಜೆಪಿಯವರು ಮಾಡುತ್ತಿದ್ದಾರೆ. ಬಿಜೆಪಿ ಸಾಮಾಜಿಕ ನ್ಯಾಯದ ಪರ ಇಲ್ಲ. 73 & 74ನೇ ತಿದ್ದುಪಡಿ ಮೂಲಕ ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದವರಿಗೆ ಮೀಸಲಾತಿ ನೀಡಿದ್ದನ್ನು ಬಿಜೆಪಿಯ ರಾಮ ಜೋಯಿಸ್ ಅವರು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ದಾವೆ ಹೂಡಿದ್ದರು. ಈ ಬಗ್ಗೆ ಸುಳ್ಳು ಹೇಳುವ ಮೋದಿಯವರ ಹೇಳಿಕೆಗಳು, ಪ್ರಧಾನಿಯ ಹುದ್ದೆಗೆ ಶೋಭೆ ತರುವಂಥದ್ದಲ್ಲ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷ ಎಂದಿಗೂ ಸರ್ವರಿಗೂ ಸಮಪಾಲು, ಸಮಬಾಳು ತತ್ವದಂತೆ ಕೆಲಸ ಮಾಡಿದೆ. ನಾವು ನುಡಿದಂತೆ ನಡೆಯುತ್ತೇವೆ. ಆದರೆ ಬಿಜೆಪಿಯವರು ಕೇವಲ ಕನಸುಗಳನ್ನು ಬಿತ್ತಿ ನನಸು ಮಾಡುವ ಪ್ರಯತ್ನವನ್ನು ಮಾಡುವುದಿಲ್ಲ ಎಂದು ಅವರು ದೂರಿದರು.

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Trending News