ರಾಜ್ಯದ ಎಲ್ಲಾ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರ: ಎಎಪಿ ಅಭ್ಯರ್ಥಿ ಬಿ‌ಕೆ ಶಿವಪ್ಪ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಏರ್ಪಡಿಸಿದ್ದ "ಪೊರಕೆಯೇ ಪರಿಹಾರ" ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಗ್ರಾಮವನ್ನು ಸ್ವಚ್ಛಗೊಳಿಸಿ ಜನ ಜಾಗೃತಿ ಮೂಡಿಸುವ ಸಲುವಾಗಿ ಪೊರಕೆ ಹಿಡಿದು ಕಸ ಗುಡಿಸುವ ಸಂದರ್ಭದಲ್ಲಿ  ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿ.ಕೆ ಶಿವಪ್ಪ ಮಾತನಾಡಿದರು.

Written by - Yashaswini V | Last Updated : Feb 27, 2023, 11:45 AM IST
  • ಈಗಾಗಲೇ ಕರ್ನಾಟಕದಲ್ಲಿ ಭ್ರಷ್ಟರು, ಕಳ್ಳರು, ರಿಯಲ್ ಎಸ್ಟೇಟ್ ಮಾಫಿಯಾಗಳು, ಜೈಲಿಗೆ ಹೋಗಿ ಬಂದಿರುವಂತವರು ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ.
  • ಅದಕ್ಕೆ ಪ್ರಾಮಾಣಿಕತೆ ಹೊಂದಿರುವ ವ್ಯಕ್ತಿಗಳು ರಾಜಕೀಯ ಮಾಡಲು ಬರಬೇಕು
  • ಇಷ್ಟು ದಿನ ರಾಜಕೀಯ ವ್ಯವಸ್ಥೆಯಲ್ಲಿ ದುರಾಡಳಿತ ನಡೆದಿರುವುದು ಸಾಕು ಎಂಬ ಮಾಹಿತಿಯನ್ನು ನೀಡುತ್ತಾ ಈ ಪೊರಕೆ ಅಭಿಯಾನವನ್ನು ಮಾಡುತ್ತಿದ್ದೇವೆ - ಎಎಪಿ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ
ರಾಜ್ಯದ ಎಲ್ಲಾ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರ: ಎಎಪಿ ಅಭ್ಯರ್ಥಿ ಬಿ‌ಕೆ ಶಿವಪ್ಪ title=
Aam Aadmi Party

ದೇವನಹಳ್ಳಿ: ಕರ್ನಾಟಕದಲ್ಲಿ ಮಿತಿ ಮೀರಿರುವ ಭ್ರಷ್ಟಾಚಾರವನ್ನು ಹೊಗಲಾಡಿಸಬೇಕಾದರೆ ಒಂದೇ ಪರಿಹಾರ ಅದು ಪೊರಕೆಯೇ ಪರಿಹಾರ. ಒಂದು ಸಾರಿ ಜನರು ಅಮ್ ಆದ್ಮಿ ಪಕ್ಷದ ಪರವಾಗಿ ನಿಂತು, ಪಕ್ಷವನ್ನು ಬೆಂಬಲಿಸಿ ಪೊರಕೆಗೆ ಮತ ನೀಡಿ ಗೆಲ್ಲಿಸಿದರೆ ರಾಜ್ಯದಲ್ಲಿರುವ ಎಲ್ಲಾ ರೀತಿಯ ಭ್ರಷ್ಟಾಚಾರಕ್ಕೂ ಮುಕ್ತಿ ಸಿಗುವುದಲ್ಲದೆ ಕರ್ನಾಟಕವು ಅಭಿವೃದ್ಧಿ ಹೊಂದುವುದರಲ್ಲಿ ಯಾವುದೇ ಸಂಶಯವಿಲ್ಲ. ರಾಜ್ಯದ ಎಲ್ಲಾ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರ ಆದ್ದರಿಂದ ಎಲ್ಲಾ ಕಡೆ ಪೊರಕೆ ಗುರುತಿಗೆ ಮತವನ್ನು ನೀಡಿ ಕರ್ನಾಟಕವನ್ನು ಉಳಿಸಿ ಎಂದು ಆಮ್ ಆದ್ಮಿ ಪಕ್ಷದ ಕರ್ನಾಟಕ ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿ.ಕೆ ಶಿವಪ್ಪ ತಿಳಿಸಿದರು.

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿ ಬೂದಿಗೆರೆ ಗ್ರಾಮದಲ್ಲಿ ಆಮ್ ಆದ್ಮಿ ಪಕ್ಷದ ವತಿಯಿಂದ ಏರ್ಪಡಿಸಿದ್ದ "ಪೊರಕೆಯೇ ಪರಿಹಾರ" ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ  ಗ್ರಾಮವನ್ನು ಸ್ವಚ್ಛಗೊಳಿಸಿ ಜನ ಜಾಗೃತಿ ಮೂಡಿಸುವ ಸಲುವಾಗಿ ಪೊರಕೆ ಹಿಡಿದು ಕಸ ಗುಡಿಸುವ ಸಂದರ್ಭದಲ್ಲಿ  ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಅಮ್ ಆದ್ಮಿ ಪಕ್ಷದ ಅಭ್ಯರ್ಥಿ ಬಿ.ಕೆ ಶಿವಪ್ಪ ಮಾತನಾಡಿದರು.

ಇದನ್ನೂ ಓದಿ- ಇಂದು ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ಅಬ್ಬರ

ಇಡೀ ರಾಜ್ಯಾದ್ಯಂತ ಇರುವ ಜ್ವಲಂತ ಸಮಸ್ಯೆಗಳಿಗೆ ಪೊರಕೆಯೇ ಪರಿಹಾರ ಎಂದು ಇಡೀ ರಾಜ್ಯಾದ್ಯಂತ ಒಂದು ಜನಾಂದೋಲನವನ್ನು ನಡೆಸುತ್ತಿದ್ದೇವೆ. ಕಾರಣ ಸ್ವತಂತ್ರ ಬಂದು 75 ವರ್ಷಗಳು ಕಳೆದರೂ ನಮ್ಮ ಜನರ ಬದುಕು ಉತ್ತಮವಾಗಿಲ್ಲ. ಯಾರೂ ನೆಮ್ಮದಿಯ ಜೀವನ ನಡೆಸುತ್ತಿಲ್ಲ. ಸಂತೋಷವಾಗಿಲ್ಲ ಹಾಗಾಗಿ ಇಷ್ಟು ವರ್ಷಗಳ ಕಾಲ ಭ್ರಷ್ಟ ಆಡಳಿತ ನಡೆಸಿದ ಕಾಂಗ್ರೆಸ್, ಬಿಜೆಪಿ, ಜನತಾದಳ ಈ‌ ಮೂರು ಪಕ್ಷಗಳ ದುರಾಡಳಿತದಿಂದ ಜನತೆ ನೋವಿನಲ್ಲಿಯೇ ಬದುಕುತ್ತಿದ್ದಾರೆ. ಅದರಿಂದ ಹೊರ ಬರಲು ಸಾಧ್ಯವಾಗುತ್ತಿಲ್ಲ. ಅದಕ್ಕೆ ನೊಂದವರು ಕಷ್ಟದಲ್ಲಿ ಇರುವವರಿಗೆ ನಮ್ಮ ಆಮ್ ಆದ್ಮಿ ಪಾರ್ಟಿ ನೆರವಾಗಲು ದೆಹಲಿ ಮಾದರಿಯಲ್ಲಿ ಪ್ರತಿಯೊಬ್ಬರಿಗೂ 200 ಯೂನಿಟ್ ವರೆಗೆ ಉಚಿತ ವಿದ್ಯುತ್, ಉಚಿತವಾದ ಶಿಕ್ಷಣ, ಉಚಿತವಾದ ಆರೋಗ್ಯ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಉತ್ತಮವಾದ ರಸ್ತೆ, ಚರಂಡಿ ಬೀದಿ ದೀಪ ಇನ್ನೂ ಅನೇಕ ಸೌಲಭ್ಯಗಳನ್ನು ಕರ್ನಾಟಕದ ಜನರಿಗೂ ನೀಡಲು ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬರಬೇಕಾಗಿದೆ. ಇದಕ್ಕಾಗಿ ದಕ್ಷ ಆಡಳಿತ ಕೊಡುವಂತಹ ಪ್ರಾಮಾಣಿಕವಾಗಿ ನಡೆದುಕೊಳ್ಳುವಂತಹ ಕೆಲಸ ಮಾಡುವುದಕ್ಕೆ ನಮ್ಮ ಆಮ್ ಆದ್ಮಿ ಪಕ್ಷದವರು ರಾಜ್ಯದ 224 ಕ್ಷೇತ್ರದಲ್ಲೂ ನಮ್ಮ ಪ್ರತಿಯೊಬ್ಬ ಆಕಾಂಕ್ಷಿಗಳು ಪ್ರತಿಯೊಂದು ಮನೆ ಮನೆಗೂ, ಊರು, ಗ್ರಾಮಗಳ ಬೀದಿ ಬೀದಿಗಳಲ್ಲಿ ಪೊರಕೆಗಳನ್ನು ಹಿಡಿದು ಸ್ವಚ್ಚವನ್ನು ಮಾಡುವುದರ ಮೂಲಕ ನಮ್ಮ ಮನೆಗಳನ್ನು ಸ್ವಚ್ಛ ಮಾಡುವ ರೀತಿಯಲ್ಲಿ ರಾಜಕೀಯವನ್ನು ಸ್ವಚ್ಚ ಮಾಡಬೇಕಾಗಿದೆ ಎಂದರು. 

ಇದನ್ನೂ ಓದಿ- ಹಾಸನ ಕ್ಷೇತ್ರದ ಟಿಕೆಟ್ ಕುರಿತು ದೇವೇಗೌಡರೇ ನಿರ್ಧಾರ ತೆಗೆದುಕೊಳ್ಳುತ್ತಾರೆ

ಈಗಾಗಲೇ ಕರ್ನಾಟಕದಲ್ಲಿ ಭ್ರಷ್ಟರು, ಕಳ್ಳರು, ರಿಯಲ್ ಎಸ್ಟೇಟ್ ಮಾಫಿಯಾಗಳು, ಜೈಲಿಗೆ ಹೋಗಿ ಬಂದಿರುವಂತವರು ಇಲ್ಲಿ ರಾಜಕೀಯ ಮಾಡುತ್ತಿದ್ದಾರೆ. ಅದಕ್ಕೆ ಪ್ರಾಮಾಣಿಕತೆ ಹೊಂದಿರುವ ವ್ಯಕ್ತಿಗಳು ರಾಜಕೀಯ ಮಾಡಲು ಬರಬೇಕು ಎಂದು ತಿಳಿಸಿ ಇಷ್ಟು ದಿನ ರಾಜಕೀಯ ವ್ಯವಸ್ಥೆಯಲ್ಲಿ ದುರಾಡಳಿತ ನಡೆದಿರುವುದು ಸಾಕು ಎಂಬ ಮಾಹಿತಿಯನ್ನು ನೀಡುತ್ತಾ ಈ ಪೊರಕೆ ಅಭಿಯಾನವನ್ನು ಮಾಡುತ್ತಿದ್ದೇವೆ ಎಂದ ಅವರು ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಎಲ್ಲಾ ಗ್ರಾಮಗಳಲ್ಲೂ ಈ ರೀತಿಯ ಸ್ವಚ್ಛಗೊಳಿಸುವ ಪೊರಕೆಯೇ ಪರಿಹಾರ ಅಭಿಯಾನವನ್ನು ಮಾಡುವೆವು ಎಂದು ತಿಳಿಸಿದರು.

ಈ ಸಂಧರ್ಭದಲ್ಲಿ ರುದ್ರಾಕ್ಷಿ ರುದ್ರಮುನಿ ಸಿದ್ದಲಿಂಗಯ್ಯ ಶಿವಾಚಾರ್ಯ ಸ್ವಾಮೀಜಿ ಮಹಿಳಾ ಘಟಕದ ಸುಹಾಸಿನಿ, ರತ್ನಮ್ಮ, ಪಲ್ಲವಿ, ಮಂಜುಳಾ ದೇವನಹಳ್ಳಿ ಟೌನ್ ಘಟಕದ ಅಧ್ಯಕ್ಷ ಲೋಕೇಶ್ ಕುಮಾರ್ ವಿಜಯಪುರ ಹೋಬಳಿ ಘಟಕದ ಅಧ್ಯಕ್ಷ ದೇವರಾಜ್ ಕುಂದಾಣ ಹೋಬಳಿ ಗೋವಿಂದಸ್ವಾಮಿ, ಚನ್ನರಾಯಪಟ್ಟಣ ಹೋಬಳಿ ದೇವರಾಜ್ ಬೂದಿಗೆರೆ ಮುಖಂಡರಾದ ಮುನಿರಾಜು, ಪಾಪಣ್ಣ, ನಾರಾಯಣ ಸ್ವಾಮಿ, ವೆಂಕಟೇಶ್ ನಾಗರಾಜ್ ಮತ್ತಿತರ ಮುಖಂಡರು ಹಾಜರಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News