ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು: ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ!

Basangouda Patil Yatnal: ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯುಟಿ ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಬಸವನಗೌಡ ಪಾಟೀಲ್‌ ಯತ್ನಾಳ್ ಅವರ ಆರೋಗ್ಯವನ್ನು ವಿಚಾರಿಸಿದರು.  

Written by - Puttaraj K Alur | Last Updated : Jul 19, 2023, 10:47 PM IST
  • ವಿಧಾನಸೌಧದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌
  • ಫೋರ್ಟಿಸ್ ಆಸ್ಪತ್ರೆಯಲ್ಲಿ ವಿಜಯಪುರ ಶಾಸಕ ಯತ್ನಾಳ್‍ಗೆ ವೈದ್ಯರಿಂದ ಚಿಕಿತ್ಸೆ
  • ಯತ್ನಾಳ್ ಆರೋಗ್ಯ ವಿಚಾರಿಸಿದ ಬಿ.ಎಸ್.ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ
ಕುಸಿದು ಬಿದ್ದು ಆಸ್ಪತ್ರೆಗೆ ದಾಖಲು: ಯತ್ನಾಳ್ ಆರೋಗ್ಯ ವಿಚಾರಿಸಿದ ಯಡಿಯೂರಪ್ಪ, ಸಿದ್ದರಾಮಯ್ಯ! title=
ಯತ್ನಾಳ್ ಆರೋಗ್ಯ ವಿಚಾರಿಸಿದ ಸಿಎಂ & ಮಾಜಿ ಸಿಎಂ

ಬೆಂಗಳೂರು: ವಿಧಾನಸೌಧದಲ್ಲಿ ಬುಧವಾರ ಪ್ರತಿಭಟನೆಯ ಸಂದರ್ಭದಲ್ಲಿ ಅಸ್ವಸ್ಥಗೊಂಡು ಕುಸಿದುಬಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಿಎಂ ಸಿದ್ದರಾಮಯ್ಯ ಮತ್ತು ಸ್ಪೀಕರ್ ಯುಟಿ ಖಾದರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಯತ್ನಾಳ್ ಅವರ ಆರೋಗ್ಯವನ್ನು ವಿಚಾರಿಸಿದರು.  

ಈ ಬಗ್ಗೆ ಟ್ವೀಟ್ ಮಾಡಿರುವ ಬಿ.ಎಸ್.ಯಡಿಯೂರಪ್ಪನವರು, ‘ವಿಧಾನಸೌಧದಲ್ಲಿ ಇಂದು ನಡೆದ ಗದ್ದಲದ ನಡುವೆ ಅಸ್ವಸ್ಥಗೊಂಡು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಪಕ್ಷದ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಶೀಘ್ರದಲ್ಲಿ ಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳುವಂತೆ ಹಾರೈಸಲಾಯಿತು’ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಗೃಹಲಕ್ಷ್ಮಿಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ : ಸ್ತೀ ಸ್ವಾವಲಂಬನೆಯತ್ತ ದಿಟ್ಟ ಹೆಜ್ಜೆ

ಇನ್ನು ಇದೇ ವಿಚಾರವಾಗಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಸದನದಲ್ಲಿ ಪ್ರತಿಭಟನೆ ವೇಳೆ ಅಸ್ವಸ್ಥಗೊಂಡಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರನ್ನು ಫೋರ್ಟಿಸ್ ಆಸ್ಪತ್ರೆಯಲ್ಲಿ ಭೇಟಿ ಮಾಡಿದ ಸ್ಪೀಕರ್ ಯುಟಿ ಖಾದರ್ ಅವರು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆರೋಗ್ಯ ವಿಚಾರಿಸಿದರು’ ಎಂದು ವಿಡಿಯೋ ಹಂಚಿಕೊಂಡಿದೆ.

ಯತ್ನಾಳ್‍ಗೆ ಏನಾಯ್ತು..?

ವಿಧಾನಸಭಾ ಸ್ಪೀಕರ್ ಪೀಠಕ್ಕೆ ‌ಅಗೌರವ ತೋರಿಸಿದ ಹಿನ್ನೆಲೆ ಸ್ವೀಕರ್‌ ಯುಟಿ ಖಾದರ್‌ ಅವರು ಬಿಜೆಪಿಯ 10 ಮಂದಿ ಶಾಸಕರನ್ನು ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ಆದೇಶ ಹೊರಿಸಿದರು. ಈ ವೇಳೆ ಸ್ವೀಕರ್‌ ಆದೇಶದ ಮೇರೆಗೆ ಮಾರ್ಷಲ್‍ಗಳು ಬಿಜೆಪಿ ಶಾಸಕರನ್ನು ಹೊರ ಹಾಕಲು ಯತ್ನಿಸಿದರು. ಈ ವೇಳೆ ಬಿಜೆಪಿ ಶಾಸಕರಿಗೂ ಮಾರ್ಷಲ್‍ಗಳಿಗೂ ಜಟಾಪಟಿ ಏರ್ಪಟ್ಟಿದೆ. ಈ ವೇಳೆ ಅಸ್ವಸ್ಥರಾಗಿ ಕುಸಿದುಬಿದ್ದ ಯತ್ನಾಳ್‌ ಅವರನ್ನು ವಿಧಾನಸೌಧದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಆಸ್ಪತ್ರೆಗೆ ದಾಖಲಿಸಲಾಗಿಯ್ತು.

ಇದನ್ನೂ ಓದಿ: ಕುಟುಂಬ ರಾಜಕಾರಣ, ಸ್ವಜನ ಪಕ್ಷಪಾತದ ಕವಚವಾಗಿ INDIA: ಬಿಜೆಪಿ ಆರೋಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News