ಸರ್.ಎಂ. ವಿಶ್ವೇಶ್ವರಯ್ಯರಿಂದಲೇ ಬೆಂಗಳೂರಿಗೆ ಕಾವೇರಿ ನೀರು ಬಂದಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್

ನಗರದ ಕೆ. ಆರ್. ವೃತ್ತದ ಬಳಿ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯಅವರ 163ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಪುತ್ಥಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ ಮಾಡಿದರು.

Written by - Manjunath Hosahalli | Last Updated : Sep 15, 2023, 12:28 PM IST
  • ಬೆಂಗಳೂರಿಗೆ ಕಾವೇರಿ ನೀರು ಸರ್ ಎಂ ವಿಶ್ವೇಶ್ವರಯ್ಯನವರ ಕೊಡುಗೆ
  • ರಾಜ್ಯಕ್ಕೆ ಸರ್ ಎಂವಿ ಕೊಡುಗೆ ಅಪಾರ: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಸರ್.ಎಂ. ವಿಶ್ವೇಶ್ವರಯ್ಯರಿಂದಲೇ ಬೆಂಗಳೂರಿಗೆ ಕಾವೇರಿ ನೀರು ಬಂದಿದ್ದು: ಡಿಸಿಎಂ ಡಿ.ಕೆ. ಶಿವಕುಮಾರ್ title=

ಬೆಂಗಳೂರು: ದೇಶದ ಶ್ರೇಷ್ಠ ಇಂಜಿನಿಯರ್ ಸರ್‌.ಎಂ. ವಿಶ್ವೇಶ್ವರಯ್ಯ ಅವರು ಸದಾ ಸ್ಮರಣೀಯರು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.
 
ನಗರದ ಕೆ. ಆರ್. ವೃತ್ತದ ಬಳಿ ಸರ್. ಮೋಕ್ಷಗುಂಡಂ ವಿಶ್ವೇಶ್ವರಯ್ಯಅವರ 163ನೇ ಜನ್ಮದಿನದ ಹಿನ್ನೆಲೆಯಲ್ಲಿ ಅವರ ಪುತ್ಥಳಿಗೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರೊಂದಿಗೆ ಡಿ.ಕೆ. ಶಿವಕುಮಾರ್ ಮಾಲಾರ್ಪಣೆ ಮಾಡಿದರು.

ಇದನ್ನೂ ಓದಿ- ನಿತ್ಯವೂ ನೆರೆರಾಜ್ಯಕ್ಕೆ 5,000 ಕ್ಯೂಸೆಕ್‌ ಕಾವೇರಿ ನೀರು: ಆದೇಶ ಪಾಲನೆಗಷ್ಟೇ ಕರ್ನಾಟಕ, ಅನುಭವಿಸಲಿಕ್ಕೆ ತಮಿಳುನಾಡು- ಎಚ್‌ಡಿ‌ಕೆ

ನಂತರ ಮಾತನಾಡಿದ ಡಿಸಿಎಂ  ಡಿ.ಕೆ. ಶಿವಕುಮಾರ್, ವಿಶೇಷವಾಗಿ ಬೆಂಗಳೂರಿನ ಜನ ಸರ್‌.ಎಂ.ವಿ ಅವರನ್ನು ನೆನಪಿಸಿಕೊಳ್ಳಬೇಕು. ಅವರ ದೂರದೃಷ್ಟಿಯಿಂದಾಗಿ ನಗರದ ಜನತೆಗೆ ಕಾವೇರಿ ನೀರು ದೊರೆತಿದೆ. ಜೊತೆಗೆ ಅವರ ದೂರಗಾಮಿ ವಿದ್ಯುತ್‌ ಯೋಜನೆಗಳ ಫಲವನ್ನು ನಾವು ಅನುಭವಿಸುತ್ತಿದ್ದೇವೆ. ಕರ್ನಾಟಕ ಹಾಗೂ ದೇಶಕ್ಕೆ ಅವರು ನೀಡಿದ ಕೊಡುಗೆ ಅನನ್ಯ ಎಂದರು. 

ಕರ್ನಾಟಕ ಇಂಜಿನಿಯರ್‌ ಗಳ ಒಕ್ಕೂಟದ ಅಧ್ಯಕ್ಷರಾದ ವೆಂಕಟಶಿವರೆಡ್ಡಿ ಮಾತನಾಡಿ, ಕರ್ನಾಟಕದ ಇಂಜಿನಿಯರ್‌ ಗಳು ಸರ್.ಎಂ.ವಿ ಅವರನ್ನು ಪ್ರೇರಣೆಯಾಗಿಟ್ಟುಕೊಂಡು ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗುತ್ತಿದ್ದೇವೆ. ಮುಂಬರುವ ದಿನಗಳಲ್ಲಿ ಅಂಬೇಡ್ಕರ್‌, ಗಾಂಧಿ ಜಯಂತಿ ಮಾದರಿಯಲ್ಲಿ ಸರ್ಕಾರವೇ ವಿಶ್ವೇಶ್ವರಯ್ಯ ಜಯಂತಿ ಆಚರಣೆ ಮಾಡಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.

ಇದನ್ನೂ ಓದಿ- ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಿ ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ: ಸಿಎಂ ಪತ್ರ

ಕಾರ್ಯಕ್ರಮದಲ್ಲಿ ಕರ್ನಾಟಕ ಇಂಜಿನಿಯರ್‌ ಗಳ ಒಕ್ಕೂಟದ ಪ್ರಧಾನ ಕಾರ್ಯದರ್ಶಿಗಳಾದ ಕೆ.ಟಿ ನಾಗರಾಜ್‌, ಒಕ್ಕೂಟದ ಉಪಾಧ್ಯಕ್ಷರಾದ ಡಿ.ಕೆ ದೇವರಾಜ್‌, ಕೆ.ಇ.ಬಿ ಇಂಜಿನೀಯರ್ಸ್‌ ಅಸೋಸಿಯೇಷನ್‌ ಪ್ರಧಾನ ಕಾರ್ಯದರ್ಶಿ ಕೆ.ಎಲ್‌ ಸುಧಾಕರ್‌ ರೆಡ್ಡಿ, ಉಪಾಧ್ಯಕ್ಷ ಶಿವಾನಂದ ಹೂಗಾರ, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್‌ ಗಳ ಅಧ್ಯಕ್ಷ ಕೃಷ್ಣಮೂರ್ತಿ, ತಾಂತ್ರಿಕ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು, ಮುಖ್ಯ ಇಂಜಿನಿಯರಗಳು ಹಾಗೂ ಸರ್ಕಾರದ ತಾಂತ್ರಿಕ ಇಲಾಖೆ, ಮಂಡಳಿ, ನಿಗಮಗಳ ಎಲ್ಲ ಇಂಜಿನೀಯರುಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.

Trending News