ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಮುಂದುವರಿಕೆ

ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಮುಂದುವರಿಯುತ್ತಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಮುಂದುವರೆಸಬೇಕಾ, ಬೇಡವಾ ಅಂತ ನಾವು ನಿರ್ಧಾರ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

Written by - Manjunath N | Last Updated : May 26, 2023, 07:43 PM IST
  • ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ನೀಡಿದ್ದಾರೆ.
  • ಅವರ ರಾಜಿನಾಮೆ ಕೂಡಾ ಅಂಗೀಕಾರ ಆಗಿಲ್ಲ.
  • ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೂ ಯಾರನ್ನು ನೇಮಿಸಬೇಕು ಅಂತಾ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ
ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿಎಂ ಇಬ್ರಾಹಿಂ ಮುಂದುವರಿಕೆ title=
file photo

ಬೆಂಗಳೂರು: ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸಿಎಂ ಇಬ್ರಾಹಿಂ ಮುಂದುವರಿಯುತ್ತಾರೆ. ಚುನಾವಣೆ ಸೋಲಿನ ಹೊಣೆ ಹೊತ್ತು ಸಿಎಂ ಇಬ್ರಾಹಿಂ ರಾಜೀನಾಮೆ ಕೊಟ್ಟಿದ್ದಾರೆ. ಅವರನ್ನು ಮುಂದುವರೆಸಬೇಕಾ, ಬೇಡವಾ ಅಂತ ನಾವು ನಿರ್ಧಾರ ಮಾಡುತ್ತೇವೆ. ಅವರ ರಾಜೀನಾಮೆ ಅಂಗೀಕಾರ ಮಾಡಿಲ್ಲ. ಆದರೆ ಅವರೇ ರಾಜ್ಯಾಧ್ಯಕ್ಷರಾಗಿ ಮುಂದುವರಿಯುತ್ತಾರೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಇದನ್ನೂ ಓದಿ: ಶಾದಿ.ಕಾಮ್ ನಲ್ಲಿ ಪರಿಚಯ,  ಓಯೋದಲ್ಲಿ ಮಜಾ: ಕೊನೆಗೆ ಯುವತಿಗೆ ಕೈಕೊಟ್ಟು ಬೇರೆ ನಿಖಾ ಆದ ಐನಾತಿ!

ಯುವ ಜನತಾದಳ ಅಧ್ಯಕ್ಷ ಸ್ಥಾನಕ್ಕೆ ನಿಖಿಲ್ ಕುಮಾರಸ್ವಾಮಿ ಅವರು ನೀಡಿದ್ದಾರೆ. ಅವರ ರಾಜಿನಾಮೆ ಕೂಡಾ ಅಂಗೀಕಾರ ಆಗಿಲ್ಲ. ಯುವ ಘಟಕದ ಅಧ್ಯಕ್ಷ ಸ್ಥಾನಕ್ಕೂ ಯಾರನ್ನು ನೇಮಿಸಬೇಕು ಅಂತಾ ಚರ್ಚೆ ಮಾಡಿ ತೀರ್ಮಾನ ಮಾಡ್ತೀವಿ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದಾಗ ಮಧ್ಯಪ್ರವೇಶ ಮಾಡಿದ ಸಿಎಂ ಇಬ್ರಾಹಿಂ ಅವರು; ನಿಖಿಲ್ ಅವರೂ ಕೂಡ ಮುಂದುವರಿಯುತ್ತಾರೆ ಎಂದು ತಿಳಿಸಿದರು.

ಇದನ್ನೂ ಓದಿ: ಹೊಸನಗರದಲ್ಲಿ ಕುಡಿಯುವ ನೀರಿಗೂ ಹಾಹಾಕಾರ.. ಸಗಣಿ ನೀರನ್ನ ಮೈಮೇಲೆ ಎರಚಿಕೊಂಡು ಪ್ರತಿಭಟನೆ

ಈ ಐದು ಗ್ಯಾರಂಟಿ ಗಳನ್ನು ಕಾಂಗ್ರೆಸ್ ಜಾರಿಗೆ ತರಲು ಕಷ್ಟ. ಅಡ್ಡದಾರಿಯಲ್ಲಿ ಅಧಿಕಾರಕ್ಕೆ ಅವರಿಂದ ಜನರ ಆಶೋತ್ತರಗಳನ್ನು ಈಡೇರಿಸಲು ಸಾಧ್ಯ ಇಲ್ಲ. ಸಿದ್ದರಾಮಯ್ಯ ಅವರು ಚುನಾವಣೆಗೆ ಮುನ್ನ  ಭಾಷಣದಲ್ಲಿ ಎಲ್ಲರಿಗೂ ಫ್ರೀ ಅಂತಾ ಹೇಳ್ತಾ ಇದ್ದರು. ಬಸ್ ಪಾಸ್ ಎಲ್ಲಾ ಕಡೆ ಫ್ರೀ ಅಂತ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಮೊದಲ ಸಂಪುಟ ಸಭೆಯಲ್ಲಿಯೇ ಐದು ಗ್ಯಾರಂಟಿಗಳನ್ಹು ಜಾರಿ ಮಾಡುತ್ತೇವೆ ಎಂದು ಅವರು ಹೇಳಿದ್ದರು. ಆದರೆ, ಅವರು ಮಾತು ತಪ್ಪಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ಈ ವಿಚಾರದಲ್ಲಿ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಜನ ಏನು ತೀರ್ಮಾನ ತೆಗೆದುಕೊಳ್ತಾರೋ ಗೊತ್ತಿಲ್ಲ. ನಾವಂತೂ ಹೋರಾಟ ಮಾಡಲು ಸಿದ್ದ.‌ ಜನರಿಗೆ ತಮಗೆ ಅನ್ಯಾಯ ಆಗಿದೆ ಎಂದರೆ ನಮ್ಮ ಜತೆ ಕೈಜೋಡಿಸಲಿ ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News