ಜುಲೈ 5ಕ್ಕೆ ರಾಜ್ಯ ಬಜೆಟ್ ಮಂಡನೆ: ಸಿಎಂ ಹೆಚ್.ಡಿ. ಕುಮಾರಸ್ವಾಮಿ

ರೈತರ ಸಾಲಮನ್ನಾದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ- ಕುಮಾರಸ್ವಾಮಿ

Last Updated : Jun 22, 2018, 09:58 AM IST
ಜುಲೈ 5ಕ್ಕೆ ರಾಜ್ಯ ಬಜೆಟ್ ಮಂಡನೆ: ಸಿಎಂ ಹೆಚ್.ಡಿ. ಕುಮಾರಸ್ವಾಮಿ title=

ಬೆಂಗಳೂರು: ಜುಲೈ 5 ರಂದು ರಾಜ್ಯ ಸರ್ಕಾರದ ಬಜೆಟ್ ಮಂಡನೆಯಾಗಲಿದೆ, ಬಜೆಟ್ ನಲ್ಲಿ ರೈತರು ಸಂತೋಷಗೊಳ್ಳುವ ಅಂಶ ಇರಲಿದೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗುರುವಾರ ಹೇಳಿದ್ದಾರೆ.

ಜೂನ್ 21(ಗುರುವಾರ) ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಹಮ್ಮಿಕೊಂಡಿದ್ದ ಕಲಾಕುಲದ ಅಭಿನಂದನೆ ಸಮಾರಂಭದಲ್ಲಿ ಗೌರವ ಸ್ವೀಕರಿಸಿದ ಬಳಿಕ ಮಾತನಾಡಿದ ಸಿಎಂ ಕುಮಾರಸ್ವಾಮಿ, ಜುಲೈ 5ರಂದು ಬಜೆಟ್ ಮಂಡನೆ ಮಾಡಲು ಯೋಜಿಸಲಾಗಿದೆ. ಸಾಲಮನ್ನಾ ವಿಚಾರದಲ್ಲಿ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ರೈತರು ಉಳಿದರೆ ರಾಜ್ಯ ಉಳಿಯುತ್ತದೆ. ಬಜೆಟ್ ನಲ್ಲಿ ರೈತರು ಸಂತೋಷಗೊಳ್ಳುವ ಅಂಶ ಇರಲಿದೆ ಎಂದರು.

ಪ್ರತಿಯೊಬ್ಬ ನಾಗರೀಕನಿಗೂ ಸೂರು ಕಲ್ಪಿಸಬೇಕೆಂಬ ಬಯಕೆ ಇದೆ. ಮುಂದಿನ ದಿನಗಳಲ್ಲಿ ಹಲವಾರು ಯೋಜನೆಗಳನ್ನು ತರುವ ಉದ್ದೇಶವಿದೆ ಎಂದು ಸಿಎಂ ತಿಳಿಸಿದರು.

Trending News