ಸಿದ್ದು- ಪ್ರಸಾದ್ ಭೇಟಿ ವಿಶೇಷವಲ್ಲ ಅದೊಂದು ವಿಚಿತ್ರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್

ರಾಜಕೀಯದಲ್ಲಿ ಒಂದೊಂದು ನಿಮಿಷಕ್ಕೆ ಒಂದೊಂದು ತಿರುವು ಇರಲಿದೆ.  ಈಗಾಗಲೇ ರಾಜಕೀಯ ನಿವೃತ್ತಿ ಘೋಷಿಸಿರುವ ಶ್ರೀನಿವಾಸ್ ಪ್ರಸಾದ್ ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ‌ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್. ಮಹೇಶ್ ವ್ಯಂಗ್ಯವಾಡಿದ್ದಾರೆ. 

Written by - Yashaswini V | Last Updated : Apr 15, 2024, 02:03 PM IST
  • ಸಿದ್ದರಾಮಯ್ಯ- ಪ್ರಸಾದ್ ಭೇಟಿ ಮಾಡಿರುವುದು ವಿಚಿತ್ರ.
  • ಈಗಾಗಲೇ, ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ
  • ಅವರ ಬೆಂಬಲವನ್ನು ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ‌ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ
ಸಿದ್ದು- ಪ್ರಸಾದ್ ಭೇಟಿ ವಿಶೇಷವಲ್ಲ ಅದೊಂದು ವಿಚಿತ್ರ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಮಹೇಶ್  title=

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಂಸದ ಶ್ರೀನಿವಾಸಪ್ರಸಾದ್ ಭೇಟಿ ಮಾಡಿರುವುದು ವಿಶೇಷವಲ್ಲ, ಅದೊಂದು ವಿಚಿತ್ರ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್ ವ್ಯಂಗ್ಯವಾಡಿದ್ದಾರೆ. 

ಚಾಮರಾಜನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಎನ್.ಮಹೇಶ್, ಸಿಎಂ ಸಿದ್ದರಾಮಯ್ಯ (CM Siddaramaiah)-  ಸಂಸದ ಶ್ರೀನಿವಾಸಪ್ರಸಾದ್ (Srinivas Prasad)  ಭೇಟಿ ಮಾಡಿರುವುದು ವಿಚಿತ್ರ. ಈಗಾಗಲೇ, ಪ್ರಸಾದ್ ಅವರು ರಾಜಕೀಯ ನಿವೃತ್ತಿ ಘೋಷಿಸಿ ಬಿಜೆಪಿಗೆ ಬೆಂಬಲ ಕೊಟ್ಟಿದ್ದಾರೆ ಎಂದರು. 

ಇದನ್ನೂ ಓದಿ- ತಮ್ಮ ಹೇಳಿಕೆ ಬಗ್ಗೆ ವಿಷಾದ : ರಾಜ್ಯದ ಮಹಿಳೆಯರ ಕ್ಷಮೆ ಕೋರಿದ ಹೆಚ್.ಡಿ ಕುಮಾರಸ್ವಾಮಿ

ಸಂಸದ ಶ್ರೀನಿವಾಸ್ ಪ್ರಸಾದ್, ತಮ್ಮ ಅಂತರಾಳದ ಮಾತುಗಳನ್ನು ಬಿಜೆಪಿ ವರಿಷ್ಠ ಬಿ‌ಎಸ್ ಯಡಿಯೂರಪ್ಪ (BS Yediyurapp) ಹಾಗೂ ಬಿಜೆಪಿ ಅಭ್ಯರ್ಥಿ ಬಾಲರಾಜು ಅವರಿಗೆ ತಿಳಿಸಿದ್ದಾರೆ‌ ಇದರ ನಡುವೆ ಈ ಎಲ್ಲಾ ವಿಚಿತ್ರಗಳು ನಡೆಯುತ್ತಿದೆ ಎಂದು ಸಿಎಂ ಭೇಟಿಗೆ ವ್ಯಂಗ್ಯ ಮಾಡಿದರು.

ಇದನ್ನೂ ಓದಿ- "ಬಡವರಿಗೆ ಮನೆ ಕಟ್ಟಿಕೊಡಲು ವಿಫಲವಾದ ಬಿಜೆಪಿಯ ವಿ.ಸೋಮಣ್ಣ ಲೋಕಸಭೆಯಲ್ಲಿ ಏನು ಮಾಡುತ್ತಾರೆ"

ಚಾಮರಾಜನಗರ ಲೋಕಸಭಾ ಕ್ಷೇತ್ರ (Chamarajanagar Lok Sabha Constituency)ದಲ್ಲಿ ಕಾಂಗ್ರೆಸ್ 7 ಸ್ಥಾನಗಳನ್ನು ಹೊಂದಿದ್ದು ಹುಷಾರಾಗಿ ಕೆಲಸ ಮಾಡಿ, ಹೆಚ್ಚಿನ ರೀತಿಯಲ್ಲಿ ಸಂಘಟನೆ ಮಾಡಿ ಎಂದು ಆಶೀರ್ವಾದ ಮಾಡಿ ಕಳುಹಿಸಿದ್ದಾರೆ. ಶ್ರೀನಿವಾಸಪ್ರಸಾದ್ ಅಳಿಯ ಡಾ.ಮೋಹನ್ ಕೂಡ ಬಿಜೆಪಿಗೆ ಬೆಂಬಲ ಕೊಡಲಿದ್ದಾರೆ ಎಂದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News