BJP ಮತ್ತು JDS ಬೆಂಬಲಿಗರೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು : ಸಿಎಂ

BJP ಮತ್ತು JDS ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Written by - Prashobh Devanahalli | Edited by - Krishna N K | Last Updated : Feb 14, 2024, 09:10 PM IST
  • BJP ಮತ್ತು JDS ನ ಬೆಂಬಲಿಗರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು
  • ಆದರೆ ಎರಡೂ ಪಕ್ಷದ ನಾಯಕರು ಈ ಯೋಜನೆಗಳನ್ನು ವಿರೋಧಿಸುತ್ತಿದ್ದಾರೆ
  • ಜೆಡಿಎಸ್‌ ಬಿಜೆಪಿ ವಿರುದ್ಧ ಗುಡುಗಿದ ಮುಖ್ಯಮಂತ್ರಿ ಸಿದ್ದರಾಮಯ್ಯ
BJP ಮತ್ತು JDS ಬೆಂಬಲಿಗರೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳು : ಸಿಎಂ title=

ಬೆಂಗಳೂರು : BJP ಮತ್ತು JDS ನ ಬೆಂಬಲಿಗರು ಮತ್ತು ಮತದಾರರು ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ಆದರೆ ಎರಡೂ ಪಕ್ಷದ ನಾಯಕರು ವಿರೋಧಿಸುತ್ತಿದ್ದಾರೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು. 

ಏಟ್ರಿಯಾ ಹೋಟೆಲಿನಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ, ಜೆಡಿಎಸ್ ನಾಯಕರು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿರುವ ನಾಡಿನ ಜನತೆಯನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ಸತ್ಯ ಶಾಶ್ವತ. ಹಳ್ಳಿ ಹಳ್ಳಿಗೆ ಗ್ಯಾರಂಟಿ ಯೋಜನೆ ಪರಿಣಾಮಕಾರಿಯಾಗಿ ತಲುಪುತ್ತಿದೆ. ಈ ಬಗ್ಗೆ ಸದನದಲ್ಲಿ ಬಹಳ ಹೆಮ್ಮೆಯಿಂದ ಮಾತನಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. 

ಇದನ್ನೂ ಓದಿ:ಲೋಕಸಭೆ ಚುನಾವಣೆ ಅಭ್ಯರ್ಥಿ ಆಯ್ಕೆ ಬಗ್ಗೆ ಮತ್ತೊಂದು ಸಮೀಕ್ಷೆ ಮಾಡುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಶಾಸಕರು ಸದನದಲ್ಲಿ ಪರಿಣಾಮಕಾರಿಯಾಗಿ, ಕಡ್ಡಾಯವಾಗಿ ಭಾಗವಹಿಸುವ ಮೂಲಕ ಸದನದ ಸಮಯವನ್ನು ಅರ್ಥಪೂರ್ಣಗೊಳಿಸಿ. ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಸತ್ಯವನ್ನು ಹುದುಗಿಸಿಡಲು ಯತ್ನಿಸುತ್ತದೆ. ಏಕೆಂದರೆ ಲೋಕಸಭಾ ಚುನಾವಣೆಗೆ ಜನರ ಬಳಿಗೆ ಹೋಗಿ ಮುಖ ತೋರಿಸಲು ಬಿಜೆಪಿಗೆ ಅಭಿವೃದ್ಧಿ ವಿಚಾರಗಳೇ ಇಲ್ಲ. ಕಳೆದ ಹತ್ತು ವರ್ಷಗಳಲ್ಲಿ ಅಭಿವೃದ್ಧಿಯನ್ನು ಮರೆತು ಈಗ ಚುನಾವಣೆ ವೇಳೆ ಅಯೋಧ್ಯೆ ವಿಚಾರ ಒಂದನ್ನೇ ಮುಂದಿಟ್ಟುಕೊಂಡು ಹೊರಟಿದ್ದಾರೆ. ಈ ಸತ್ಯ ನಾಡಿನ‌ ಜನತೆಗೆ ಮನವರಿಕೆಯಾಗಿದೆ. ಆದರೆ ಸದನದ ಕಡತಕ್ಕೆ ಹೋಗಲಿ ಎಂದು ಬಿಜೆಪಿಯವರು ಸುಳ್ಳು ಆರೋಪಗಳನ್ನು ಮಾಡುತ್ತಾರೆ‌. ಇದಕ್ಕೆ ಸತ್ಯದ ಮೂಲಕ, ಅಧಿಕೃತ ಅಂಕಿ ಅಂಶಗಳ ಮೂಲಕ ಸ್ಪಷ್ಟ ಉತ್ತರ ಕೊಡಿ ಎಂದು ಶಾಸಕರಿಗೆ ಕರೆ ನೀಡಿದರು. 

ಬಿಜೆಪಿ - ಜೆಡಿಎಸ್ ಗ್ಯಾರಂಟಿ ಯೋಜನೆಗಳ 5 ಕೋಟಿ ಫಲಾನುಭವಿಗಳನ್ನು ನಿರಂತರವಾಗಿ ಅವಮಾನಿಸುತ್ತಿದ್ದಾರೆ. ನಾವು ಈ ಜನರ ಪರವಾಗಿ ನಿಂತಿದ್ದೇವೆ. ಕಾಂಗ್ರೆಸ್ಸಿನ ಗ್ಯಾರಂಟಿ ಯೋಜನೆಗಳು ಈ ಜನರ ಹಕ್ಕು. ಇದನ್ನು ನಾವು ಗಟ್ಟಿ ಧ್ವನಿಯಲ್ಲಿ ಹೇಳಬೇಕು ಎಂದು ಕರೆ ನೀಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಸಭೆಗೆ ರಾಜ್ಯದಿಂದ  ಅಭ್ಯರ್ಥಿಗಳಾಗಿರುವ ನಾಸಿರ್ ಹುಸೇನ್, ಜಿ.ಸಿ.ಚಂದ್ರಶೇಖರ್ ಮತ್ತು ಅಜಯ್ ಮಾಕನ್ ಅವರಿಗೆ ಅಭಿನಂದಿಸಲಾಯಿತು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News