PSI recruitment scam: ತಾವೇ ಮುಖ್ಯ ಆರೋಪಿಯಂತೆ ಬೊಮ್ಮಾಯಿ ಆತಂಕ ಪಡುತ್ತಿರುವುದೇಕೆ?

PSI recruitment scam: ಬೊಮ್ಮಾಯಿಯವರೇ, ಹಗರಣವೊಂದರ ಪ್ರಾಮಾಣಿಕ ತನಿಖೆಯಾಗಬೇಕು ಎಂದು ಬಯಸುವುದು ದ್ವೇಷ ರಾಜಕಾರಣ ಆಗುವುದು ಹೇಗೆ? ಹೇಳಿ. ತಾವೇ ಮುಖ್ಯ ಆರೋಪಿ ಎಂಬಂತೆ ಆತಂಕ ಪಡುತ್ತಿರುವುದೇಕೆ? ಎಂದು ಪ್ರಶ್ನಿಸಿದೆ.

Written by - Puttaraj K Alur | Last Updated : Jul 23, 2023, 03:58 PM IST
  • ಪಿಎಸ್‍ಐ ನೇಮಕಾತಿ ಹಗರಣ ನ್ಯಾಯಾಂಗ ತನಿಖೆಗೆ ವಹಿಸಿದ್ದು ದ್ವೇಷದ ರಾಜಕಾರಣ
  • ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆಗೆ ತಿರುಗೇಟು ನೀಡಿದ ಕಾಂಗ್ರೆಸ್
  • ಹಗರಣಗಳನ್ನು ತನಿಖೆಗೆ ವಹಿಸಿದರೆ ಬಿಜೆಪಿಗರಿಗೇಕೆ ಆಕ್ರೋಶ ಉಂಟಾಗುತ್ತದೆ?
PSI recruitment scam: ತಾವೇ ಮುಖ್ಯ ಆರೋಪಿಯಂತೆ ಬೊಮ್ಮಾಯಿ ಆತಂಕ ಪಡುತ್ತಿರುವುದೇಕೆ? title=
ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು!

ಬೆಂಗಳೂರು: ಪಿಎಸ್‍ಐ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಿದ್ದು ದ್ವೇಷದ ರಾಜಕಾರಣವೆಂದು ಹೇಳಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ.

ಈ ಬಗ್ಗೆ ಭಾನುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಹಗರಣಗಳನ್ನು ತನಿಖೆಗೆ ವಹಿಸಿದರೆ ಬಿಜೆಪಿಗರಿಗೇಕೆ ಆಕ್ರೋಶ ಉಂಟಾಗುತ್ತದೆ? ಸತ್ಯ ಹರಿಶ್ಚಂದ್ರನ ವಂಶದವರು ಎಂದುಕೊಳ್ಳುವ ಬಿಜೆಪಿಗರಿಗೆ ನ್ಯಾಯಾಂಗ ತನಿಖೆಗೆ ವಹಿಸಿದರೆ ಆತಂಕವೇಕೆ? ಬೊಮ್ಮಾಯಿಯವರೇ, ಹಗರಣವೊಂದರ ಪ್ರಾಮಾಣಿಕ ತನಿಖೆಯಾಗಬೇಕು ಎಂದು ಬಯಸುವುದು ದ್ವೇಷ ರಾಜಕಾರಣ ಆಗುವುದು ಹೇಗೆ? ಹೇಳಿ. ತಾವೇ ಮುಖ್ಯ ಆರೋಪಿ ಎಂಬಂತೆ ಆತಂಕ ಪಡುತ್ತಿರುವುದೇಕೆ?’ ಎಂದು ಪ್ರಶ್ನಿಸಿದೆ.

ಇದನ್ನೂ ಓದಿ: 90ರ ಇಳಿ ವಯಸ್ಸಲ್ಲೂ ಜಿಮ್ ಮಾಡುವ ಅರಿಂಗ್ಟನ್‌ ಗಿನ್ನೆಸ್‌ ದಾಖಲು

ಧರ್ಮ ರಕ್ಷಕರಾದ ಬಿಜೆಪಿಗರು ಮಾಡಿದ್ದೇನು?

‘ಶಕ್ತಿ’ ಯೋಜನೆಯಿಂದ ಪ್ರವಾಸೋದ್ಯಮಕ್ಕೆ ಶಕ್ತಿ ಸಿಕ್ಕಿದೆ, ದೇವಾಲಯಗಳ ಆದಾಯಕ್ಕೆ ಬೆಂಬಲ ಸಿಕ್ಕಿದೆ, ಜನರ ಭಕ್ತಿಗೆ ಪುಷ್ಠಿ ಸಿಕ್ಕಿದೆ. ಆರ್ಥಿಕತೆಯ ಚಲನಶೀಲತೆಯ ಬಗ್ಗೆ ಅರಿವಿಲ್ಲದ ಬಿಜೆಪಿಗರ “ಪಾಕಿಸ್ತಾನ, ಶ್ರೀಲಂಕಾ“ ಎಂಬ ಅಪಪ್ರಚಾರಕ್ಕೆ ಉತ್ತರವೂ ಸಿಕ್ಕಿದೆ!’ ಎಂದು ಕಾಂಗ್ರೆಸ್ ಟೀಕಿಸಿದೆ.

‘ಎಷ್ಟೋ ದಿನಗಳಿಂದ ತಮ್ಮ ನೆಚ್ಚಿನ ದೇವಾಲಯಗಳ ಭೇಟಿಗೆ ಕಾತರಿಸುತ್ತಿದ್ದ ಜನ ‘ಶಕ್ತಿ’ ಯೋಜನೆಯ ಲಾಭ ಪಡೆದು ದೇವರ ದರ್ಶನ ಪಡೆಯುತ್ತಿದ್ದಾರೆ. ಧರ್ಮಸ್ಥಳದ ಡಾ.ವೀರೇಂದ್ರ ಹೆಗ್ಗಡೆಯವರೇ ಹೇಳುವಂತೆ ನಮ್ಮ ಸರ್ಕಾರಕ್ಕೆ ಜನತೆ ಹರಿಸುತ್ತಿದ್ದಾರೆ. ಜನರ ಧಾರ್ಮಿಕ ನಂಬಿಕೆಗಳಿಗೆ ಉತ್ತೇಜಿಸಿದ ಸಾರ್ಥಕತೆ ನಮಗಿದೆ, ಆದರೆ ಸೋಕಾಲ್ಡ್ ಧರ್ಮ ರಕ್ಷಕರಾದ ಬಿಜೆಪಿಗರು ಮಾಡಿದ್ದೇನು ಎನ್ನುವುದನ್ನು ಉತ್ತರಿಸಬಲ್ಲರೇ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕಾಂತರಾಜು ವರದಿ ಜಾರಿಯಿಂದ ಅಸಮಾನತೆ ತೊಡೆದು ಹಾಕಲು ಸಾಧ್ಯ: ಸಚಿವ ತಂಗಡಗಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News