ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ BSYರನ್ನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ?: ಕಾಂಗ್ರೆಸ್

ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ರಾಜಕೀಯದಿಂದ ದೂರ ತಳ್ಳಿದ್ದ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ ಎಂದು ಕಾಂಗ್ರೆಸ್ ಟೀಕಿಸಿದೆ.

Written by - Puttaraj K Alur | Last Updated : Jul 4, 2023, 03:54 PM IST
  • ಯಡಿಯೂರಪ್ಪರನ್ನು ಕಣ್ಣೀರು ಹಾಕಿಸಿ ಪದಚ್ಯುತಿಗೊಳಿಸಿ ನಂತರ ವಯಸ್ಸಿನ ಕಾರಣ ನೀಡಿದ ಬಿಜೆಪಿ
  • ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರಿಡಂ ಪಾರ್ಕಿನಲ್ಲಿ, ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು
  • ಅಧಿಕಾರ ನಡೆಸಲು ಮಾತ್ರ ಅವರಿಗೆ ವಯಸ್ಸಾಗಿತ್ತೇ, ಈಗ ಅವರಿಗೆ ಅದಿನೆಂಟರ ಹರೆಯವೇ ಬಿಜೆಪಿ?
ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ BSYರನ್ನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ?: ಕಾಂಗ್ರೆಸ್ title=
ಬಿಜೆಪಿ ವಿರುದ್ಧ ಕಾಂಗ್ರೆಸ್ ಆಕ್ರೋಶ!

ಬೆಂಗಳೂರು: ಬೇಕಾದಾಗ ಬಳಸಿ, ಬೇಡವಾದಾಗ ಬಿಸಾಡುವುದಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಟಿಶ್ಯು ಪೇಪರ್ ಎಂದುಕೊಂಡಿದೆಯೇ ಬಿಜೆಪಿ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಯಡಿಯೂರಪ್ಪರನ್ನು ಕಣ್ಣೀರು ಹಾಕಿಸಿ ಪದಚ್ಯುತಿಗೊಳಿಸಿ ನಂತರ ವಯಸ್ಸಿನ ಕಾರಣ ನೀಡಿದ ಬಿಜೆಪಿ ಈಗ ರಾಜಕೀಯ ಕಾರಣಕ್ಕಾಗಿ ಅವರನ್ನು ಫ್ರಿಡಂ ಪಾರ್ಕಿನಲ್ಲಿ, ಬಿಸಿಲು, ಮಳೆಯಲ್ಲಿ ಕೂರಿಸುತ್ತಿರುವುದು ನಾಚಿಕೆಗೇಡು. ಅಧಿಕಾರ ನಡೆಸಲು ಮಾತ್ರ ಅವರಿಗೆ ವಯಸ್ಸಾಗಿತ್ತೇ, ಈಗ ಅವರಿಗೆ ಅದಿನೆಂಟರ ಹರೆಯವೇ ಬಿಜೆಪಿ?’ ಎಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: Rain Alert: ರಾಜ್ಯದಲ್ಲಿ ಮುಂದಿನ 5 ದಿನ ವರುಣಾರ್ಭಟ: ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

‘ಒಬ್ಬ ವಿಪಕ್ಷ ನಾಯಕನನ್ನು ಆಯ್ಕೆ ಮಾಡಲಾಗದ ಬಿಜೆಪಿ ರಾಜಕೀಯದಿಂದ ದೂರ ತಳ್ಳಿದ್ದ BSYರನ್ನೇ ಮತ್ತೆ ಆಶ್ರಯಿಸಿದ್ದು ಬಿಜೆಪಿಯ ಶೋಚನೀಯ ಸ್ಥಿತಿಗೆ ಹಿಡಿದ ಕನ್ನಡಿ. ಅಗತ್ಯವಿದ್ದಾಗ ಕಾಲು ಹಿಡಿಯುವುದು, ಅಗತ್ಯವಿಲ್ಲದಾಗ ಕಾಲು ಎಳೆಯುವುದು ಬಿಜೆಪಿ ಸಂಸ್ಕೃತಿ!’ ಎಂದು ಕಾಂಗ್ರೆಸ್ ಕಿಡಿಕಾರಿದೆ.

ಬಿಜೆಪಿಯ ದೊಡ್ಡ ತಲೆಗಳಿಗೆ ‘ಬಿಟ್‍ಕಾಯಿನ್’ ಕಂಟಕ!

ಬಿಜೆಪಿ ಸರ್ಕಾರ ಬೃಹತ್ ಮೊತ್ತದ ಬಿಟ್ ಕಾಯಿನ್ ಹಗರಣದ ತನಿಖೆಯನ್ನು ಕೈಬಿಟ್ಟಿತ್ತು. ಈ ಹಗರಣದಲ್ಲಿ ಭಾಗಿಯಾಗಿರುವ ಬಿಜೆಪಿಯ ನಾಯಕರು, ಉನ್ನತ ಅಧಿಕಾರಿಗಳನ್ನು ರಕ್ಷಿಸಲು ಬಿಜೆಪಿ ಮಾಡಿದ್ದ ಸಾಹಸಕ್ಕೆ ಯಶಸ್ಸು ಸಿಗುವುದಿಲ್ಲ. ಸಾವಿರ ಸಾವಿರ ಕೋಟಿಯ ಈ ಹಗರಣವನ್ನು ಬೇರು ಸಮೇತ ಹೊರಗೆಳೆಯುವುದು ನಿಶ್ಚಿತ. ಬಿಜೆಪಿಯ ದೊಡ್ಡ ತಲೆಗಳಿಗೆ ಕಂಟಕವಾಗುವುದು ಕೂಡ ಖಚಿತ’ವೆಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ಸರ್ಕಾರಿ ಶಾಲೆಯ ಸೂರು ಅಭದ್ರ: ಮಳೆಯಾದ್ರೇ ಪಾಠ ಬೋಧನೆ ಬಂದ್

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News