ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ

     

Last Updated : Jun 30, 2018, 01:14 PM IST
ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರ title=

ಬೆಂಗಳೂರು: ಬಾದಾಮಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆ ಭಾಗದ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳಿಗೆ ಚಾಲನೆ ನೀಡುವಂತೆ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಗೆ ಪತ್ರ ಬರೆದಿದ್ದಾರೆ. 

ಇತ್ತೀಚೆಗಷ್ಟೇ ಬಾದಾಮಿಯ ಗುಳೇದಗುಡ್ಡದಲ್ಲಿ ಜವಳಿ ಪಾರ್ಕ್, ಪವರ್ ಲೂಮ್ ಪಾರ್ಕ್ ಹಾಗೂ ಜವಳಿ ಪಾರ್ಕ್ ನಿರ್ಮಿಸುವಂತೆ ಹಾಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಇದೀಗ ಸಿಎಂ ಕುಮಾರಸ್ವಾಮಿಗೆ ಎರಡನೇ ಪತ್ರ ಬರೆದು ಕೆರೆಗಳನ್ನು ತುಂಬಿಸುವಂತೆ ಮನವಿ ಮಾಡಿದ್ದಾರೆ.

ಬಾದಾಮಿ ವ್ಯಾಪ್ತಿಯಲ್ಲಿ ನೀರಿನ ಅಭಾವದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದು, ಕೂಡಲೇ ಪಾರ್ವತಿ ಕೆರೆ, ಗಂಜಿಕೆರೆ ಹಾಗೂ ಹಿರೇಕರೆಗಳಿಗೆ ನೀರು ತುಂಬಿಸಿ ನೆರವಾಗುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪತ್ರದ ಜತೆಗೆ ಕೆರೆ ತುಂಬಿಸುವ ಯೋಜನೆಗಳಿಗೆ 12 ಕೋಟಿ ವೆಚ್ಚವಾಗಲಿದೆ ಎನ್ನುವ ಅಂದಾಜು ಪಟ್ಟಿಯನ್ನು ಲಗತ್ತಿಸಿರುವ ಸಿದ್ದರಾಮಯ್ಯ ಸ್ಥಳೀಯರ ಅಭಿಪ್ರಾಯ, ಮನವಿಗಳನ್ನೂ ಉಲ್ಲೇಖಿಸಿ ಕೆರೆ ತುಂಬಿಸಿ ಎಂದು ಮನವಿ ಮಾಡಿದ್ದಾರೆ. 

Trending News