ಭೂ ಮಾಫಿಯಾ ನಿಯಂತ್ರಣ ಸಾಧ್ಯವಿಲ್ಲ ಎಂಬ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆಗೆ HDK ತರಾಟೆ

ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,' ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ- ಎಚ್.ಡಿ. ಕುಮಾರಸ್ವಾಮಿ

Written by - Yashaswini V | Last Updated : Mar 12, 2021, 02:54 PM IST
  • 'ಇಂದು ಭೂಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು?
  • ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು?
  • ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಜಾರಿ ಮಾಡಲು ಹೊರಟರೆ ಯಾವ ಮಾಫಿಯಾ ಏನು ಮಾಡಲು ಸಾಧ್ಯ?
  • ಕಂದಾಯ ಸಚಿವ ಆರ್. ಅಶೋಕ್ ಗೆ ಖಡಕ್ ಪ್ರಶ್ನೆ ಕೇಳಿದ ಎಚ್.ಡಿ. ಕುಮಾರಸ್ವಾಮಿ
ಭೂ ಮಾಫಿಯಾ ನಿಯಂತ್ರಣ ಸಾಧ್ಯವಿಲ್ಲ ಎಂಬ ಕಂದಾಯ ಸಚಿವ ಆರ್. ಅಶೋಕ್ ಹೇಳಿಕೆಗೆ HDK ತರಾಟೆ title=
H.D. Kumaraswamy slams R. Ashok on Land Mafia issue

ಬೆಂಗಳೂರು: ಕಂದಾಯ ಸಚಿವರ ಉತ್ತರವೊಂದನ್ನು ಗಮನಿಸಿದೆ. 'ಭೂ ಮಾಫಿಯಾ ವಿರುದ್ಧ ವಿರೋಧ ಪಕ್ಷದಲ್ಲಿದ್ದಾಗ ಮಾತನಾಡಿದ ನಮಗೇ ಈಗ ಕೈಕಟ್ಟಿಹಾಕಿದಂತಾಗಿದೆ. ಅದನ್ನು ನಿಯಂತ್ರಿಸುವುದು ಅಸಾಧ್ಯ,' ಎಂದು ಸಚಿವರು ಹೇಳಿದ್ದಾರೆ. ವ್ಯವಸ್ಥೆ  ಹದಗೆಟ್ಟಿರುವುದರ ಬಗ್ಗೆ ಮಾತನಾಡಿರುವ ಸಚಿವರು, ಅದರ ಹಿಂದಿನ ಕಾರಣವನ್ನೂ ಪ್ರಸ್ತಾಪಿಸಿದಿದ್ದರೆ ಚನ್ನಾಗಿರುತ್ತಿತ್ತು' ಎಂದು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ (Former H.D. Kumaraswamy) ತರಾಟೆಗೆ ತೆಗೆದುಕೊಂಡಿದ್ದಾರೆ.

'ಇಂದು ಭೂಮಾಫಿಯಾದಲ್ಲಿ ಬೃಹದಾಕಾರವಾಗಿ ಬೆಳೆದು ನಿಂತಿರುವವರು ಯಾರು? ಪಕ್ಷಗಳ ಹಿಂಬಾಲಕರು, ಬಾಲಬಡುಕರೇ ಅಲ್ಲವೇ? ಅವರಿಗೆ ಪ್ರೋತ್ಸಾಹ ಕೊಡುವಾಗ ಕೊಟ್ಟು ಈಗ 'ನಿಯಂತ್ರಿಸಲಾಗುತ್ತಿಲ್ಲ,' ಎಂದು ಹೇಳಿಕೊಳ್ಳುವುದು ಹೊಣೆಗೇಡಿತನ. ಇಂಥ ಮಾತುಗಳು ಭೂಮಾಫಿಯಾಕ್ಕೆ ಪ್ರೇರಕ. ಭೂಮಿ ನುಂಗುವ ದಂಧೆ ಬೆಳೆಯಲು ಎರಡೂ ರಾಷ್ಟ್ರೀಯ ಪಕ್ಷಗಳ ಪಾಲು ಸಮಾನ' ಎಂದು ಎಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ.

ಇದನ್ನೂ ಓದಿ - Health Workers: ರಾಜ್ಯದ 'ಆರೋಗ್ಯ ಕಾರ್ಯಕರ್ತ'ರಿಗೆ ಗುಡ್ ನ್ಯೂಸ್..!

'ಅಕ್ರಮದಲ್ಲಿ ತೊಡಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ ಅವರು ಮತ್ತೆ ಅದೇ ಸ್ಥಾನದಲ್ಲಿ ಬಂದು ಕೂರುತ್ತಾರೆ,' ಎಂದೂ ಸಚಿವರು ಹೇಳಿದ್ದಾರೆ. ಅಧಿಕಾರಿಗಳು ಈ ಮಟ್ಟಿನ ಭಂಡತನ ತೋರಲು ರಾಜಕಾರಣಿಗಳು ಹುಟ್ಟುಹಾಕಿದ ವಿಷಮ ವ್ಯವಸ್ಥೆಯೇ ಕಾರಣ. ಸರ್ಕಾರ ಅಸಹಾಯಕತೆ ಪ್ರದರ್ಶಿಸಿ, ದುರ್ವ್ಯವಸ್ಥೆ ಪ್ರೋತ್ಸಾಹಿಸದೇ ಶುದ್ಧೀಕರಣ ನಡೆಸಬೇಕು' ಎಂದು ಆಗ್ರಹಿಸಿದ್ದಾರೆ

ಇದನ್ನೂ ಓದಿ - Basavaraj Bommai: 'ಜಲಸಂಪನ್ಮೂಲ ಖಾತೆ' ಟವಲ್‌ ಹಾಕಿದ ಬಸವರಾಜ ಬೊಮ್ಮಾಯಿ..!

'ಒಂದು ಅವ್ಯವಸ್ಥೆ ವಿರುದ್ಧ ಸರ್ಕಾರ ಕಠಿಣ ನೀತಿ ರೂಪಿಸಿ ಅದನ್ನು ಜಾರಿ ಮಾಡಲು ಹೊರಟು ನಿಂತರೆ ಯಾವ ಮಾಫಿಯಾ (Land Mafia) ಏನು ಮಾಡಲು ಸಾಧ್ಯ? ಅದಕ್ಕೆ ಇಚ್ಛಾಶಕ್ತಿ ಬೇಕಷ್ಟೆ. ಸ್ವಹಿತಾಸಕ್ತಿ ಹೊಂದಿರುವವರು ಮಾತ್ರ ವ್ಯವಸ್ಥೆ ಸರಿಪಡಿಸಲಾಗದ ಮಾತಾಡುತ್ತಾರೆ. ಸರ್ಕಾರದ ಭೂಮಿ ಉಳಿಸಿಕೊಳ್ಳಲಾಗದೆ ಅಸಹಾಯಕತೆ ತೋರುವವರು ಅಧಿಕಾರದಲ್ಲಿದ್ದು ಉಪಯೋಗವೇನು? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News