ಬೆಂಗಳೂರು: ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗಕೆ ಹೊಸ ಹೊಳಹು ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ (Mahatma Gandhi) ಹಾಗೂ ಸರಳ ವ್ಯಕ್ತಿತ್ವ, ದೃಢ ನಿರ್ಧಾರದ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ (Lal Bahadur Shastri) ಅವರ ಜನ್ಮ ದಿನದ ಶುಭಾಶಯಗಳು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸತ್ಯ ಮತ್ತು ಅಹಿಂಸಾತ್ಮಕ ಹೋರಾಟದ ಮೂಲಕ ಜಗಕೆ ಹೊಸ ಹೊಳಹು ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧಿ ಹಾಗೂ ಸರಳ ವ್ಯಕ್ತಿತ್ವ, ದೃಢ ನಿರ್ಧಾರದ ಮಾಜಿ ಪ್ರಧಾನಿ ಲಾಲ್ ಬಹಾದುರ್ ಶಾಸ್ತ್ರಿ ಅವರ ಜನ್ಮ ದಿನದ ಶುಭಾಶಯಗಳು.
1/3— H D Kumaraswamy (@hd_kumaraswamy) October 2, 2020
ಮಹಾತ್ಮ ಗಾಂಧೀಜಿ, ಲಾಲಬಹದ್ದೂರ್ ಶಾಸ್ತ್ರಿ ಅವರನ್ನು ನೆನೆದ ರಾಷ್ಟ್ರಪತಿ, ಪ್ರಧಾನಿ
ಟ್ವೀಟ್ ಮೂಲಕ ಶುಭಾಶಯ ಕೋರಿರುವ ಎಚ್.ಡಿ. ಕುಮಾರಸ್ವಾಮಿ (HD Kumaraswamy) , 'ಜನಮಾನಸದಲ್ಲಿ ಚಿರಸ್ಥಾಯಿಯಾಗಿರುವ ಈ ಮಹಾ ಪುರುಷರ ಬದುಕಿನ ತತ್ವ, ಆದರ್ಶಗಳು ಹಾಗೂ ಮಾದರಿ ಬದುಕು ಸರ್ವಕಾಲಕ್ಕೂ ಅನುಕರಣೀಯ. ಅವರ ಹುಟ್ಟುಹಬ್ಬದ ದಿನವಾದ ಇಂದು ಅವರನ್ನು ವಿನಮ್ರವಾಗಿ ಸ್ಮರಿಸಿಕೊಳ್ಳುತ್ತೇನೆ' ಎಂದಿದ್ದಾರೆ.
ನಿಮ್ಮ ಜೀವನವನ್ನು ಬದಲಾಯಿಸಬಹುದಾದ ಮಹಾತ್ಮರ 'ಮಂತ್ರಗಳು'
'ಈ ಮಹಾಚೇತನಗಳ ಸಾಮಾಜಿಕ ಬದ್ಧತೆ, ಜೀವನ ಮತ್ತು ಮಾದರಿ ವ್ಯಕ್ತಿತ್ವ ನಮ್ಮೆಲ್ಲರಿಗೂ ಸ್ಫೂರ್ತಿಯ ಸೆಲೆ. ಅವರ ಸತ್ಯದ ಹಾದಿ ಮತ್ತು ಪ್ರಾಮಾಣಿಕತೆ ನಮ್ಮೆಲ್ಲರಿಗೂ ದೀವಿಗೆ' ಎಂದು ಹೇಳಿದ್ದಾರೆ.