ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ನನ್ನ ಅಭ್ಯಂತರವೇನೂ ಇಲ್ಲ- ಮಾಜಿ ಪ್ರಧಾನಿ ದೇವೇಗೌಡ

  

Last Updated : Jul 15, 2018, 02:19 PM IST
ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ನನ್ನ ಅಭ್ಯಂತರವೇನೂ ಇಲ್ಲ- ಮಾಜಿ ಪ್ರಧಾನಿ ದೇವೇಗೌಡ title=
Photo courtesy: PTI

ಹುಬ್ಬಳ್ಳಿ: ರಾಷ್ಟ್ರ ರಾಜಕಾರಣದಲ್ಲಿ ರಾಹುಲ್ ಗಾಂಧಿಯವರ ನಾಯಕತ್ವಕ್ಕೆ ತಮ್ಮದು ಯಾವುದೇ ಅಭ್ಯಂತರವಿಲ್ಲ ಎಂದು ಎಂದು ಮಾಜಿ ಪ್ರಧಾನಿ ದೇವೇಗೌಡ ಅಭಿಪ್ರಾಯಪಟ್ಟಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು "ನಮ್ಮ ರಾಜ್ಯದ 28 ಲೋಕಸಭಾ ಕ್ಷೇತ್ರದಲ್ಲಿ ಎಷ್ಟು ಸೀಟು ನಮಗೆ ಬರುತ್ತವೆ ಎಂಬುದು ಖಚಿತವಾಗಿಲ್ಲ ಜೊತೆಗೆ ರಾಹುಲ್ ಗಾಂಧಿ ಅವರ ನಾಯಕತ್ವಕ್ಕೆ ನನ್ನ ಅಭ್ಯಂತರವೇನೂ ಇಲ್ಲ" ಎಂದು ತಿಳಿಸಿದರು 

ಇದೇ ಸಂದರ್ಭದಲ್ಲಿ ಉತ್ತರ ಕರ್ನಾಟಕಕ್ಕೇ ಬಜೆಟ್ ನಲ್ಲಿ ಆದ ಅನ್ಯಾಯದ ಕೂಗಿ ಪ್ರತಿಕ್ರಿಯಿಸಿರುವ ದೇವೇಗೌಡ "ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿಲ್ಲ ನನ್ನ ಕಾಲದಲ್ಲಿ ಅನೇಕ ಅಭಿವೃದ್ಧಿ ಕೆಲಸಗಳು ಆಗಿದೆ, ಇನ್ನು ಭಾಷಾವಾರು ಪ್ರಾಂತದ ನಂತರ ಉತ್ತರ ಕರ್ನಾಟಕಕ್ಕೆ ಎಷ್ಟು ಹಣ ಬಿಡುಗಡೆಯಾಗಿದೆ ಅದರ ಬಗ್ಗೆ ಲೆಕ್ಕ ತರಿಸುತ್ತೆನೆ ಮತ್ತು 1965 ರಿಂದ ಉತ್ತರ ಕರ್ನಾಟಕಕ್ಕೆ ಬಿಡುಗಡೆಯಾದ ಹಣದ ಬಗ್ಗೆ ಶ್ವೇತ ಪತ್ರ ಹೊರಡಿಸಿಲು ಮುಖ್ಯಮಂತ್ರಿಗಳಿಗೆ ಹೇಳುತ್ತೇನೆ ಇದನ್ನು ಅವರು ತೆಗೆದುಕೊಂಡ ವಿಧಾನಸಭೆಯಲ್ಲಿ ಚರ್ಚೆ ಮಾಡಿ ರಾಜ್ಯದ ಜನರ ಮುಂದೆ ಇಡಲಿ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ  ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವನಿಟ್ಟಿನಲ್ಲಿ ಪಕ್ಷದ ಮುಖಂಡರು ಹಾಗು ಕಾರ್ಯಕರ್ತರು ಹೆಚ್ಚಿನ ಶ್ರಮವಹಿಸಬೇಕು ಎಂದು ಸಲಹೆ ನೀಡಿದರು. 

Trending News