ತಿಮ್ಮಪ್ಪನಿಗೆ ನಂದಿನಿ ತುಪ್ಪ ಕೊಡದ ಬಿಜೆಪಿ ಹಿಂದೂ ವಿರೋಧಿ ಅಲ್ಲವೇ?: ಕಾಂಗ್ರೆಸ್

Nandini ghee for tirupati laddu: ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪು ಪೂರೈಕ್ ಬಂದ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Written by - Puttaraj K Alur | Last Updated : Aug 1, 2023, 04:55 PM IST
  • ನಂದಿನಿ ತುಪ್ಪವನ್ನು ತಿರುಪತಿಗೆ ಸರಬರಾಜು ಮಾಡುವುದನ್ನು ನಿಲ್ಲಿಸಿ ಒಂದೂವರೆ ವರ್ಷವಾಗಿದೆ
  • ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಕ್ರಮ ಕೈಗೊಳ್ಳಲಾಗಿತ್ತು
  • ಬಿಜೆಪಿಗೆ ತಿರುಪತಿ ತಿಮ್ಮಪ್ಪನ ಮೇಲೆ ಗೌರವ, ಭಕ್ತಿ ಇರಲಿಲ್ಲವೇಕೆ?
ತಿಮ್ಮಪ್ಪನಿಗೆ ನಂದಿನಿ ತುಪ್ಪ ಕೊಡದ ಬಿಜೆಪಿ ಹಿಂದೂ ವಿರೋಧಿ ಅಲ್ಲವೇ?: ಕಾಂಗ್ರೆಸ್ title=
ಬಿಜೆಪಿ ನಾಯಕವ ವಿರುದ್ಧ ಕಾಂಗ್ರೆಸ್ ಆಕ್ರೋಶ!

ಬೆಂಗಳೂರು: ತಿರುಪತಿ ತಿರುಮಲಕ್ಕೆ ನಂದಿನಿ ತುಪ್ಪ ಸ್ಥಗಿತಗೊಳಿಸಿರುವ ವಿಚಾರವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. ಈ ವಿಚಾರವಾಗಿ ಮಂಗಳವಾರವೂ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ನಂದಿನಿ ತುಪ್ಪವನ್ನು ತಿರುಪತಿಗೆ ಸರಬರಾಜು ಮಾಡುವುದನ್ನು ನಿಲ್ಲಿಸಿ ಒಂದೂವರೆ ವರ್ಷವಾಗಿದೆ, ಬಿಜೆಪಿ ಸರ್ಕಾರದ ಅವಧಿಯಲ್ಲೇ ಈ ಕ್ರಮ ಕೈಗೊಳ್ಳಲಾಗಿತ್ತು. ಬಿಜೆಪಿಗೆ ತಿರುಪತಿ ತಿಮ್ಮಪ್ಪನ ಮೇಲೆ ಗೌರವ, ಭಕ್ತಿ ಇರಲಿಲ್ಲವೇಕೆ?, ತಿಮ್ಮಪ್ಪನಿಗೆ ತುಪ್ಪ ಕೊಡದ ಬಿಜೆಪಿ ಹಿಂದೂ ವಿರೋಧಿ ಅಲ್ಲವೇ?, 2020 -2021ರಲ್ಲಿ ತುಪ್ಪ ಸರಬರಾಜನ್ನು ಸ್ಥಗಿತಗೊಳಿಸಿದ್ದೇಕೆ ಎಂಬುದಕ್ಕೆ ಬಿಜೆಪಿ ಉತ್ತರಿಸುವುದೇ? ಹಿಂದೂ ವಿರೋಧಿ ಬಿಜೆಪಿ ನಾಯಕರು ಉತ್ತರಿಸುವರೆ?’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಇದನ್ನೂ ಓದಿ: ಕ್ಯಾನ್ಸರ್‌ನಂತಹ ಅಪಾಯಕಾರಿ ರೋಗ ತಡೆಗೆ ಹೀಗೆ ಮಾಡಿ

‘ತಿರುಪತಿಗೆ ನಂದಿನಿ ತುಪ್ಪದ ಸರಬರಾಜನ್ನು 2020 - 2021ರಲ್ಲೇ ನಿಲ್ಲಿಸಿದ್ದು ಯಾವ ಸರ್ಕಾರ ಬಿಜೆಪಿ? ಆಗ ಯಾವ ಅಜೆಂಡಾವಾಗಿತ್ತು ಸಿಟಿ ರವಿಯವರೇ? ಬಿಜೆಪಿ ಸರ್ಕಾರದ ಅವಧಿಯಲ್ಲಿ ಸರಬರಾಜು ನಿಲ್ಲಿಸಿದ್ದು ಏಕೆ? ಈ ಬಗ್ಗೆ ಬಿಜೆಪಿಗರು ಮೌನವಾಗಿರುವುದೇಕೆ? ಮಾರುಕಟ್ಟೆಯಲ್ಲಿ ನಂದಿನಿ ತುಪ್ಪಕ್ಕೆ ಬಹುಬೇಡಿಕೆ ಇರುವಾಗ ಕಡಿಮೆ ಮೊತ್ತಕ್ಕೆ ಸರಬರಾಜು ಮಾಡಿ ಕೆಎಂಎಫ್ ಹಾಗೂ ರೈತರಿಗೆ ನಷ್ಟ ಆಗಲು ಬಯಸುತ್ತಿದೆಯೇ ಬಿಜೆಪಿ?’ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಕಾಂಗ್ರೆಸ್ ಸರ್ಕಾರದ ವಿರುದ್ಧ ಕಟೀಲ್ ವಾಗ್ದಾಳಿ!

ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪು ಪೂರೈಕ್ ಬಂದ್ ವಿಚಾರವಾಗಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ‘ದೇವಸ್ಥಾನ ಹಾಗೂ ಹಿಂದೂಗಳ ಶ್ರದ್ಧೆ-ಭಕ್ತಿಯ ವಿಚಾರದಲ್ಲಿ ಅಸಡ್ಡೆ ತೋರುವ ಕಾಂಗ್ರೆಸ್ ನೀತಿಯಿಂದಾಗಿ ತಿರುಪತಿ ಲಡ್ಡುವಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತಗೊಂಡಿದೆ. ತಿರುಪತಿಯೊಂದಿಗಿನ 50 ವರ್ಷಗಳ ಪರಂಪರೆಗೆ ಎಳ್ಳು ನೀರು ಬಿಡಲಾಗಿದ್ದು, ಹಿಂದೂಗಳೆಡಗಿನ ಸಿಎಂ ಸಿದ್ದರಾಮಯ್ಯನವರ ತಾತ್ಸಾರ ನೀತಿ ರುಜುವಾತಾಗಿದೆ’ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ವ್ಯಕ್ತಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಕಿರುಕುಳ ಆರೋಪ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News