ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್

BJP-JDS Alliance: ಜೆಡಿಎಸ್ ನಲ್ಲಿನ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಹೊಸಿಲಿನ ಹೊರಗೆ ಕಾಲಿಟ್ಟಿದ್ದಾರೆ, ಜೆಡಿಎಸ್ ಪಕ್ಷ ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ! ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯವೆಂದು ಕಾಂಗ್ರೆಸ್ ಕುಟುಕಿದೆ.

Written by - Puttaraj K Alur | Last Updated : Sep 23, 2023, 03:50 PM IST
  • ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಈಗ ಅಧಿಕೃತವಾಗಿ ಹಾರ ಬದಲಿಸಿಕೊಂಡಿವೆ
  • ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ!
  • ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯವೆಂದು ಟೀಕಿಸಿದ ಕಾಂಗ್ರೆಸ್
ಕದ್ದುಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್-ಬಿಜೆಪಿ ಹಾರ ಬದಲಿಸಿಕೊಂಡಿವೆ: ಕಾಂಗ್ರೆಸ್  title=
BJP-JDS Alliance

ಬೆಂಗಳೂರು: ಕದ್ದು ಮುಚ್ಚಿ ಲವ್ವಿಡವ್ವಿ ಮಾಡುತ್ತಿದ್ದ ಜೆಡಿಎಸ್ ಹಾಗೂ ಬಿಜೆಪಿ ಈಗ ಅಧಿಕೃತವಾಗಿ ಹಾರ ಬದಲಿಸಿಕೊಂಡಿವೆ ಅಷ್ಟೇ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಮುಂಬರುವ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಮತ್ತು ಬಿಜೆಪಿ ವಿರುದ್ಧ ಕಾಂಗ್ರೆಸ್ ಕಿಡಿಕಾರಿದೆ.

‘ಜೆಡಿಎಸ್ ನವರ ಕಣ್ಣೀರಿನಂತೆ ಅವರ ಜಾತ್ಯತೀತತೆಯ ಮುಖವಾಡವೂ ನಕಲಿ. ಬಿಜೆಪಿ ಅಧಿಕಾರದಲ್ಲಿ ಇದ್ದಾಗಲೂ ಜೆಡಿಎಸ್ ಬಿಜೆಪಿಯ ‘ಬಿ’ ಟೀಮ್ ಆಗಿಯೇ ವರ್ತಿಸುತ್ತಿತ್ತು, ವಿರೋಧ ಪಕ್ಷವಾಗಿದ್ದರೂ ಬಿಜೆಪಿಯ ದುರಾಡಳಿತವನ್ನು ಪ್ರಶ್ನಿಸುವ, ವಿರೋಧಿಸುವ ಕೆಲಸ ಮಾಡಿರಲೇ ಇಲ್ಲ’ವೆಂದು ಕಾಂಗ್ರೆಸ್ ಟೀಕಿಸಿದೆ.

ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಉರುಳು ಸೇವೆ ನಡೆಸಿ ಆಕ್ರೋಶ ಹೊರಹಾಕಿದ ಕನ್ನಡಪರ ಸಂಘಟನೆಗಳು

ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್, ‘ಈ ಮೈತ್ರಿ ಯಾರ "ಸಂತೋಷ"ಕ್ಕೆ ಬಿಜೆಪಿ?’ ಎಂದು ಪ್ರಶ್ನಿಸಿದೆ. ಬಿಜೆಪಿಯ ಅಗೋಚರ ಸರ್ವಾಧಿಕಾರಿ ಬಿ.ಎಲ್.ಸಂತೋಷ್ ಅವರ ಮೇಲೆ ಹಿಗ್ಗಾಮುಗ್ಗಾ ಮಾತಿನ ದಾಳಿ ಮಾಡಿದ್ದ ಕುಮಾರಸ್ವಾಮಿಯವರನ್ನು ಬಿಜೆಪಿ ಕ್ಷಮಿಸಿಬಿಟ್ಟಿತೇ? ಅಥವಾ ಆಗ ಆಡಿದ್ದು ಕೇವಲ ನಾಟಕವೇ? ಫ್ಯಾಮಿಲಿ ಪಾಲಿಟಿಕ್ಸ್ ಬಗ್ಗೆ ಪುಂಖಾನುಪುಂಖವಾಗಿ ಮಾತಾಡುವ ಬಿಜೆಪಿ ಈಗ ಅದೇ ಫ್ಯಾಮಿಲಿ ಪಾರ್ಟಿಯ ಮೊರೆ ಹೋಗಿದ್ದು ಯಾವ ನೈತಿಕತೆಯಲ್ಲಿ?’ ಎಂದು ಪ್ರಶ್ನಿಸಿದೆ.

‘ಬಿಜೆಪಿ ಸಂವಿಧಾನದ ಪೀಠಿಕೆಯಿಂದ ಜಾತ್ಯಾತೀತತೆಯನ್ನು ಕಿತ್ತು ಹಾಕಿದೆ. ಜೆಡಿಎಸ್ ತನ್ನ ಹೆಸರಿನಲ್ಲಿದ್ದ ಜಾತ್ಯಾತೀತತೆಯನ್ನು ಅನಧಿಕೃತವಾಗಿ ಕಿತ್ತು ಹಾಕಿದೆ. ಜೆಡಿಎಸ್ ನಲ್ಲಿನ ಅಲ್ಪಸಂಖ್ಯಾತ ಮುಖಂಡರು ಪಕ್ಷದ ಹೊಸಿಲಿನ ಹೊರಗೆ ಕಾಲಿಟ್ಟಿದ್ದಾರೆ, ಜೆಡಿಎಸ್ ಪಕ್ಷವನ್ನು ಮುಗಿಸಲೆಂದೇ ಮೈತ್ರಿ ಮಾಡಿಕೊಂಡಿರುವ ಬಿಜೆಪಿಯ ಕನಸು ನನಸಾಗುವ ಕಾಲ ಬಂದಿದೆ! ಕರ್ನಾಟಕದ ಪಾಲಿಗೆ ಇನ್ನು ಜಾತ್ಯಾತೀತ ತತ್ವದ ಜೆಡಿಎಸ್ ಮುಗಿದ ಅಧ್ಯಾಯ!’ವೆಂದು ಕಾಂಗ್ರೆಸ್ ಕುಟುಕಿದೆ.

ಇದನ್ನೂ ಓದಿ: ಗಂಗಾವತಿ ನಗರಸಭೆ ವ್ಯಾಪ್ತಿಗೆ ಹಳ್ಳಿಗಳನ್ನು ಸೇರಿಸಲು ಮುಂದಾದ ಜಿಲ್ಲಾಡಳಿತ, ಗ್ರಾಮಸ್ಥರ ಆಕ್ರೋಶ 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News