ಬಿಜೆಪಿ ವಿರುದ್ಧದ 'ದಂಗೆ' ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿಎಂ ಕುಮಾರಸ್ವಾಮಿ

ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚಿಗೆ ನೀಡಿದ ದಂಗೆ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

Last Updated : Sep 22, 2018, 03:33 PM IST
ಬಿಜೆಪಿ ವಿರುದ್ಧದ 'ದಂಗೆ' ಹೇಳಿಕೆಯನ್ನು ಸಮರ್ಥಿಸಿಕೊಂಡ ಸಿಎಂ ಕುಮಾರಸ್ವಾಮಿ  title=

ಚಿಕ್ಕಮಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಇತ್ತೀಚಿಗೆ ನೀಡಿದ ದಂಗೆ ಹೇಳಿಕೆಯನ್ನು ಮತ್ತೊಮ್ಮೆ ಸಮರ್ಥಿಸಿಕೊಂಡಿದ್ದಾರೆ.

ಶೃಂಗೇರಿಗೆ ತೆರೆಳುತ್ತಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ" ನಾನು ಯಾವುದೇ ರೀತಿಯ ಪ್ರಚೋದನಕಾರಿ ಹೇಳಿಕೆಯನ್ನು ಯಾವ ಪಕ್ಷದ ವಿರುದ್ದವಾಗಿ ಮಾಡಿಲ್ಲ.ಅವರು ರಾಜ್ಯಪಾಲರಿಗೆ ದೂರನ್ನು ನೀಡಿದ್ದಾರೆ.ಈ ಕುರಿತಾಗಿ ನಾನು ಆ ಹೇಳಿಕೆ ನೀಡಲು ಕಾರಣವಾದ ಸಂಗತಿಗಳ ಬಗ್ಗೆ ತಿಳಿಸುತ್ತೇನೆ ಅಲ್ಲದೆ ಅದು ಸಂವಿಧಾನದ ವಿರುದ್ದ ಹೌದು ಅಲ್ಲವೋ ಎನ್ನುವುದನ್ನು ನಾನು ಮನವರಿಕೆ ಮಾಡಿಕೊಡುತ್ತೇನೆ ಎಂದು ತಿಳಿಸಿದರು.

ಕುಮಾರಸ್ವಾಮಿ ಹೇಳುವಂತೆ ಆಪರೇಷನ್ ಕಮಲದ ಮೂಲಕ ಸರ್ಕಾರವನ್ನು ಅಸ್ಥಿರಗೊಳಿಸಲು ಸರ್ಕಾರ ಪ್ರಯತ್ನಿಸುತ್ತಿದ್ದು, ಆದ್ದರಿಂದ ತಾವು ಈ ರೀತಿ ಹೇಳಿಕೆ ನೀಡಿರುವುದಾಗಿ ಎಂದು ಸಮರ್ಥಿಸಿಕೊಂಡಿದ್ದಾರೆ. 

Trending News