Lokasabhe Election : ನಾಳೆ ಸಭೆ ಬಳಿಕ ಕಾಂಗ್ರೆಸ್ ಟಿಕೆಟ್ ಬಗ್ಗೆ ನಿರ್ಧಾರ : ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರಂತೆ ಬಿಜೆಪಿ ನಾಯಕರು

Lokasabhe Election congress Ticket :  ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾಳೆ ಚುನಾವಣಾ ಸಮಿತಿ ಸಭೆಯ ನಂತರ ಈ ಬಗ್ಗೆ ನಿರ್ಧಾರವಾಗಲಿದೆ ಎಂದು ಹೇಳಿದ್ದಾರೆ.      

Written by - Ranjitha R K | Last Updated : Mar 6, 2024, 11:59 AM IST
  • ನಾಳೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ
  • ಕಾಂಗ್ರೆಸ್ ಟಿಕೆಟ್ ವಿಚಾರದ‌ ಬಗ್ಗೆ ಎಐಸಿಸಿ‌ ಅಧ್ಯಕ್ಷರು ತೀರ್ಮಾನ
  • ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಎನ್ನುವ ಬಗ್ಗೆ ನಾಳೆ ಸುಳಿವು
 Lokasabhe Election : ನಾಳೆ ಸಭೆ ಬಳಿಕ ಕಾಂಗ್ರೆಸ್ ಟಿಕೆಟ್ ಬಗ್ಗೆ ನಿರ್ಧಾರ : ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರಂತೆ ಬಿಜೆಪಿ ನಾಯಕರು  title=

Lokasabhe Election 2024 : ನಾಳೆ ಕಾಂಗ್ರೆಸ್ ಪಕ್ಷದ ಚುನಾವಣಾ ಸಮಿತಿ ಸಭೆ ದೆಹಲಿಯಲ್ಲಿ ನಡೆಯಲಿದೆ. ಈ ಸಭೆಯ ನಂತರ ಕಾಂಗ್ರೆಸ್ ಟಿಕೆಟ್ ವಿಚಾರದ‌ ಬಗ್ಗೆ ಎಐಸಿಸಿ‌ ಅಧ್ಯಕ್ಷರು ತೀರ್ಮಾನ ಮಾಡುತ್ತಾರೆ. ಎಐಸಿಸಿ‌ ಅಧ್ಯಕ್ಷರ ನಿರ್ಧಾರದಂತೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ. ಅಂದರೆ ಕಾಂಗ್ರೆಸ್ ಅಭ್ಯರ್ಥಿಗಳು ಯಾರು ಎನ್ನುವ ಬಗ್ಗೆ ನಾಳೆ ಸುಳಿವು ಸಿಗುವ ಸಾಧ್ಯತೆ ಇದೆ. 

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ನಿಂದ ಯಾರು ಕಣಕ್ಕಿಳಿಯಲಿದ್ದಾರೆ ಎನ್ನುವ ಬಗ್ಗೆ ಮಾತನಾಡಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ನಾಳೆ ಚುನಾವಣಾ ಸಮಿತಿ ಸಭೆಯ ನಂತರ ಈ ಬಗ್ಗೆ ನಿರ್ಧಾರವಾಗಲಿದೆ ಎದ್ನು ಹೇಳಿದ್ದಾರೆ.    

ಇದನ್ನೂ ಓದಿ : ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆಯ ವರದಿಯೇ ಅಧಿಕೃತ: ಸಿಎಂ

ಬಿಜೆಪಿಯಿಂದ ಕೇವಲ ಇಬ್ಬರಲ್ಲ : 
ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಕೇವಲ ಇಬ್ಬರು‌ ಮೂವರಲ್ಲ ಬಿಜೆಪಿಯಿಂದ ಅನೇಕ‌ ಜನ ಕಾಂಗ್ರೆಸ್ ಗೆ ಆಗಮಿಸಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ. 

ಸದ್ಯದಲ್ಲಿಯೇ ಶೆಟ್ಟರ್ ಪಶ್ಚಾತಾಪ:
ಶೀಘ್ರವೇ ಫ್ಲಡ್ ಗೇಟ್ ಓಪನ್ ಆಗುತ್ತೆ ಎನ್ನುವ ಮಾಜಿ‌ ಸಿಎಂ‌ ಜಗದೀಶ ಶೆಟ್ಟರ್ ಹೇಳಿಕೆ ಬಗ್ಗೆ  ಪ್ರತಿಕ್ರಿಸಿದ ಡಿಕೆಶಿ, ಈ ತಿಂಗಳು ಕಳೆದ ಮೇಲೆ‌ ಶೆಟ್ಟರ್ ಅವರಿಂದ ಪಶ್ಚಾತಾಪದ ಹೇಳಿಕೆ ಹೊರಬರಲಿದೆ  ಎಂದು ಹೇಳಿದ್ದಾರೆ. 

ಇದನ್ನೂ ಓದಿ : ರಾಜೀನಾಮೆ ಯಾವಾಗ ಬೇಕು ? ಯಾರಿಗೆ ರಾಜೀನಾಮೆ ನೀಡಬೇಕು ? ರಾಜೀನಾಮೆ ಕೊಡೋಣ - ಡಿ.ಕೆ. ಶಿವಕುಮಾರ್

ಮಹಾದಾಯಿ ವಿಳಂಬ ಬಗ್ಗೆ ಜೋಶಿ ಚಕಾರ ಎತ್ತಲಿಲ್ಲ ಯಾಕೆ? :
ಮಹದಾಯಿ ಕಾಮಗಾರಿ ವಿಳಂಬದ ವಿಚಾರದಲ್ಲಿ‌ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ‌ ಉತ್ತರ ನೀಡಬೇಕು. ಇದೇ ವಿಚಾರದಲ್ಲಿ ಹುಬ್ಬಳ್ಳಿಯಲ್ಲಿ‌ ವಿಜಯೋತ್ಸವ ಮಾಡಿದ್ದರು. ಆದರೂ ಯಾಕೆ ಇನ್ನೂ ಮಹದಾಯಿ ತೊಡಕುಗಳ ನಿವಾರಣೆ ಮಾಡುತ್ತಿಲ್ಲ? ನಾನು ಸಚಿವನಾದ ನಂತರ ಇದಕ್ಕೆ ಟೆಂಡರ್ ಕರೆಯಲಾಗಿದೆ. ಅನುಮತಿ ಸಿಗುತ್ತಿದ್ದಂತೆ ಕೆಲಸ ಆರಂಭವಾಗಲಿದೆ. ಅನುಮತಿ ಕೊಡಿಸಿದರೆ ಅವರಿಗೂ ಒಂದು ಗೌರವ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಜೋಶಿ ಅವರಿಗೆ ಅಧಿಕಾರ ಇದೆ. ಅವರು ಅರ್ಧ ಗಂಟೆ ಇದಕ್ಕೆ ಸಂಬಂಧಿಸಿದ ಅಧಿಕಾರಿಗಳ ಜೊತೆ ಚರ್ಚೆ ಮಾಡಿ ಸಮಸ್ಯೆ ಬಗೆಹರಿಸಿದರೆ ಕೆಲಸ ಆರಂಭಿಸುತ್ತೇವೆ ಎಂದು ಹೇಳಿದ್ದಾರೆ.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News