"ದೇವೇಗೌಡರನ್ನ ಇವರೆಲ್ಲಾ ಉತ್ಸವ ಮೂರ್ತಿ ಮಾಡ್ಕೊಂಬಿಟ್ರು" : ರೇವಣ್ಣ ವಿರುದ್ಧ ರಾಮಸ್ವಾಮಿ ‌ವಾಗ್ದಾಳಿ

MLA  A.T Ramaswamy On HD Revanna : ಇವರೆಲ್ಲಾ ಪಾಪ ಅವರನ್ನ ಉತ್ಸವ ಮೂರ್ತಿ ಮಾಡ್ಕೊಂಬಿಟ್ರು. ಅಂತಹ ಮುತ್ಸದಿ ರಾಜಕಾರಣಿಯನ್ನ ಮೂಲೆಗುಂಪು ಮಾಡಿದ್ದು ನನಗೆ ನೋವಾಗಿದೆ ಎಂದು ಮಾಜಿ ಶಾಸಕ ಹೆಚ್‌.ಡಿ ರೇವಣ್ಣ ಕುಟುಂಬದ ವಿರುದ್ಧ ಶಾಸಕ ಎ.ಟಿ ರಾಮಸ್ವಾಮಿ ಕಿಡಿಕಾರಿದ್ದಾರೆ.

Written by - Chetana Devarmani | Last Updated : Feb 18, 2023, 12:35 PM IST
  • ಇವರೆಲ್ಲಾ ಪಾಪ ಅವರನ್ನ ಉತ್ಸವ ಮೂರ್ತಿ ಮಾಡ್ಕೊಂಬಿಟ್ರು
  • ಮುತ್ಸದಿ ರಾಜಕಾರಣಿಯನ್ನ ಮೂಲೆಗುಂಪು ಮಾಡಿದ್ದು ನೋವಾಗಿದೆ
  • ಮಾಜಿ ಶಾಸಕ ಹೆಚ್‌.ಡಿ ರೇವಣ್ಣ ಕುಟುಂಬದ ವಿರುದ್ಧ ಶಾಸಕ ಎ.ಟಿ ರಾಮಸ್ವಾಮಿ ಕಿಡಿ
"ದೇವೇಗೌಡರನ್ನ ಇವರೆಲ್ಲಾ ಉತ್ಸವ ಮೂರ್ತಿ ಮಾಡ್ಕೊಂಬಿಟ್ರು" : ರೇವಣ್ಣ ವಿರುದ್ಧ ರಾಮಸ್ವಾಮಿ ‌ವಾಗ್ದಾಳಿ title=

ಹಾಸನ : ರಾಮಸ್ವಾಮಿ ಕೆಟ್ಟವರು ಅವರಿಗೆ ಟಿಕೆಟ್ ಕೊಡಬೇಡಿ ಎಂದು ಜನರಿಂದ ಹೇಳಿಸಿದ್ರು. ಮೈಕ್ ಹಾಕಿಕೊಂಡು ಅವರ ಮನೆಯೊಳಗೆ ಹೋಗಿ ಮಾತಾಡೋಕೆ ಸಾಧ್ಯ ಇದೆನಾ? ಎಂದು ಪರೋಕ್ಷವಾಗಿ ಮಾಜಿ ಶಾಸಕ ಹೆಚ್‌.ಡಿ ರೇವಣ್ಣ ಕುಟುಂಬದ ವಿರುದ್ಧ ಶಾಸಕ ಎ.ಟಿ ರಾಮಸ್ವಾಮಿ ‌ವಾಗ್ದಾಳಿ ನಡೆಸಿದ್ದಾರೆ. ಇಡೀ‌ ರಾಜ್ಯಕ್ಕೆ ರಾಮಸ್ವಾಮಿ ಎಂತಹವರು ಎಂಬುದು ಗೊತ್ತಿದೆ. ನಾನು ಅವತ್ತು ಇಡೀ ರಾತ್ರಿ ನಿದ್ದೆ ಮಾಡಿಲ್ಲ. ಬೆಳಿಗ್ಗೆ ಕಾರ್ಯಕ್ರಮ‌ ಇದೆ. ದೇವೇಗೌಡರನ್ನ ಕರೆಸಿ ಜ.22 ರಂದು ಕಾರ್ಯಕ್ರಮ ಆಯೋಜಿಸಿದ್ದ ಕಾರ್ಯಕ್ರಮ ರದ್ದಾಗಿದೆ ಅಂತಾ ಹೇಳಿ ಮೆಸೇಜ್ ಹಾಕ್ತಾರೆ. ದೇವೇಗೌಡರು ಕಾರ್ಯಕ್ರಮಕ್ಕೆ ಬರುವುದಾಗಿ ಒಪ್ಪಿದ್ದರು. ಆದರೆ ಅವರನ್ನ ಬಾರದಂತೆ ತಡೆದಿದ್ದಾರೆ ಎಂದು ಆರಪಿಸಿದ್ದಾರೆ. 

ನಾನು ದೇವೇಗೌಡರನ್ನ ಕಾರ್ಯಕ್ರಮಕ್ಕೆ‌ ಕರೆಯೋದಕ್ಕೆ ಹೋದಾಗ ರಾಜಕೀಯ ಮಾತಾಡೋಕೆ ಶುರು ಮಾಡಿದರು. ಆರೋಗ್ಯ ಕಾಪಾಡಿಕೊಳ್ಳಿ ಇನ್ನೊಂದು ದಿನ ಮಾತಾಡೋಣ ಎಂದೆ. ನನ್ನ ಕೈ ಹಿಡಿದುಕೊಂಡ್ರು ನಿಮಗೆ ಏನು ಕಿರುಕುಳ‌ ಕೊಡ್ತಿದ್ದಾರೆ, ಏನು ಅನ್ಯಾಯ ಆಗ್ತಿದೆ ನನಗೆ ಗೊತ್ತು. ನಾನು ಬದುಕಿರೋ ವರೆಗೆ ಅನ್ಯಾಯ ಆಗೋದಕ್ಕೆ ಬಿಡೊಲ್ಲ ಅಂದಿದ್ರು ಎಂದು ಹೇಳಿದ್ದಾರೆ. 

ಇದನ್ನೂ ಓದಿ : ಸೈಕಲ್ ಕಳ್ಳತನವಾಗಿದೆ ಎಂದು ದೂರು ಕೊಡಲು ಹೋದ ವ್ಯಕ್ತಿ ನೋಡಿ ನಕ್ಕರಂತೆ ಪೊಲೀಸರು!

ನಾನು‌ ಕರೆದ ಕಾರ್ಯಕ್ರಮಕ್ಕೆ ದೇವೇಗೌಡರ ಟೂರ್ ಪ್ಲಾನ್ ಆಗಿತ್ತು. ಬರೋದನ್ನ ತಡೆದರು. ಇವರೆಲ್ಲಾ ಪಾಪ ಅವರನ್ನ ಉತ್ಸವ ಮೂರ್ತಿ ಮಾಡ್ಕೊಂಬಿಟ್ರು. ಅಂತಹ ಮುತ್ಸದಿ ರಾಜಕಾರಣಿಯನ್ನ ಮೂಲೆಗುಂಪು ಮಾಡಿದ್ದು ನನಗೆ ನೋವಾಗಿದೆ. ಅವರ‌ ಮಾತಿಗೆ ಕಿಮ್ಮತ್ತು ಕೊಡ್ತಿದ್ದಾರಾ ಇವರು? ಎಂದು ಪ್ರಶ್ನಿಸಿದ್ದಾರೆ.

ಅವರನ್ನ ಜಿಲ್ಲೆಯಿಂದ ಹೊರ ದಬ್ಬಿದ್ರು. ಹಾಸನದ ಚನ್ನಪಟ್ಟಣದಲ್ಲಿ‌ ಲೋಕಸಭಾ ಚುನಾವಣೆ ಬಗ್ಗೆ ಪೂರ್ವಭಾವಿ ಸಭೆ ಆಯ್ತು. ಎಲ್ಲರೂ ಪ್ರಜ್ವಲ್ ರೇವಣ್ಣ ಅಂತಾ ಹೇಳಿದ್ರು, ನಾನು ಹೇಳಲಿಲ್ಲ. ನನ್ನ ಮೇಲೆ ಹಗೆತನ ಅಲ್ಲಿಂದಲೇ‌ ಶುರುವಾಯ್ತು. ದೇವೇಗೌಡರು ನಿವೃತ್ತಿ ಆಗ್ತೀನಿ ಅಂದಿದ್ರೆ ನಾನು ಹೆಸರು ಹೇಳ್ತಿದ್ದೆ. ಅವರು ನಿಂತ್ಕೊಳ್ತಿನಿ ಅಂತಿರುವಾಗ ಜಿಲ್ಲೆಯಿಂದ ಹೊರದಬ್ಬಿ, ಮನೆಯಿಂದ ಹೊರದಬ್ಬಿದ್ರು. ಇವರು ಹೋಗ್ಬೇಕಾಗಿತ್ತು, ಕಾದಾಡಬೇಕಾಗಿತ್ತು. ಇದರಿಂದ ಪಕ್ಷಕ್ಕೂ ನಷ್ಟ ಆಯ್ತೋ ಇಲ್ವೋ ಎಂದಿದ್ದಾರೆ.

ಇದನ್ನೂ ಓದಿ : ಬಜೆಟ್‌ನಲ್ಲಿ ರೈತರಿಗೆ ಭರ್ಜರಿ ಗಿಫ್ಟ್! ‘ಕಿಸಾನ್ ಕ್ರೆಡಿಟ್ ಕಾರ್ಡ್’ ಇದ್ದರೇ ಸಾಕು ಭರಪೂರ ಲಾಭ

ಬೆಳಗಾವಿ ಅಧಿವೇಶನದಲ್ಲಿ ನಮ್ಮ‌ ಶಾಸಕರ ಬಳಿ ಅವರಿಗೆ ಟಿಕೆಟ್ ‌ಕೊಡಲ್ಲ ಎಂದು ಹೇಳಿದ್ದರು. ಇವೆಲ್ಲ ಪೂರ್ವ ನಿರ್ಧಾರಿತ ತೀರ್ಮಾನಗಳು. ಪ್ರಜ್ವಲ್ ರೇವಣ್ಣ ವಿರುದ್ಧ ಆಸ್ತಿ ಘೋಷಣೆ ವಿಚಾರವಾಗಿ ಕೋರ್ಟ್ ಕೇಸ್‌ ನಡೆಯುತ್ತಿದೆ. ತೀವ್ರತರವಾದ ವಿಚಾರಣೆ ನಡೆಯುತ್ತಿದೆ. ಶಿಕ್ಷೆ ಆಗುತ್ತದೆ ಎಂಬ ಸಂದರ್ಭಕ್ಕೆ ಬಂದಿತ್ತು. ಕೇಸ್‌ನ್ನು ರಾಜಿ ಮಾಡ್ಕೊಳ್ಳಿಕ್ಕಾಗಿ ಸ್ವಾರ್ಥಕ್ಕಾಗಿ, ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದು, ಅವರಿಗೆ ಬಿಜೆಪಿಯಲ್ಲಿ ಕಾಂಗ್ರೆಸ್ ನಲ್ಲಿ ಟಿಕೆಟ್ ಕೊಡಲ್ಲ ಅಂದ್ರು ಎಂದಿದ್ದಾರೆ. 

ಇವರ ಸ್ವಾರ್ಥಕ್ಕಾಗಿ ನಮ್ಮ ಜನರು, ರೈತರನ್ನು ಬಲಿ ಕೊಡಲಿಕ್ಕೆ ಹೊರಟಿದ್ದಾರೆ. ಸಾರ್ವಜನಿಕ ಜೀವನದಲ್ಲಿ ಇಂತಹ ಅನ್ಯಾಯಗಳಾದಾಗ ಬೆಂಕಿ ಉಂಡೆಗಳಾಗಬೇಕು ಎಂದು ರೇವಣ್ಣ ಕುಟುಂಬದ ವಿರುದ್ಧ ರಾಮಸ್ವಾಮಿ ಕೆಂಡಾಮಂಡಲರಾದ‌ರು. ಅನ್ಯಾಯದ ವಿರುದ್ಧ ಹೋರಾಟ ಮಾಡಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದದ್ದಾರೆ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News