ಹಿಜಾಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮುಸ್ಕಾನ್

Karnataka hijab row 2023: ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು‌ ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣವೆಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.

Written by - Puttaraj K Alur | Last Updated : Dec 23, 2023, 03:15 PM IST
  • ಹಿಜಾಬ್ ನಮ್ಮ ಸಂಸ್ಕೃತಿ, ನಮ್ಮ ಹಕ್ಕು. ಅದು ವಾಪಸ್ ಬರುತ್ತದೆ ಎಂಬ ನಂಬಿಕೆಯಿದೆ
  • ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ಇನ್ಮುಂದೆ ಅಣ್ಣ-ತಮ್ಮಂದಿರ ರೀತಿ ಬದುಕೋಣ
  • ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಧನ್ಯವಾದ ತಿಳಿಸಿದ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್
ಹಿಜಾಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮುಸ್ಕಾನ್ title=
ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮುಸ್ಕಾನ್

ಮಂಡ್ಯ: ಹಿಜಾಬ್ ನಿಷೇಧವನ್ನು ವಾಪಸ್ ಪಡೆಯುವಂತೆ ಸೂಚಿಸಿರುವೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಧನ್ಯವಾದ ತಿಳಿಸಿದ್ದಾರೆ. ಈ ಬಗ್ಗೆ ಶನಿವಾರ ಸುದ್ದಿಗಾರರ ಜೊತೆಗೆ ಮಾತನಾಡಿರುವ ಮುಸ್ಕಾನ್, ‘ಹಿಜಾಬ್ ನಮ್ಮ ಸಂಸ್ಕೃತಿ, ನಮ್ಮ ಹಕ್ಕು. ಅದು ವಾಪಸ್ ಬರುತ್ತದೆ ಎಂಬ ನಂಬಿಕೆಯಿದೆ’ ಎಂದು ಹೇಳಿದ್ದಾರೆ.

ಮಂಡ್ಯದ PES ಕಾಲೇಜಿನಲ್ಲಿ ʻಜೈ ಶ್ರೀರಾಮ್‌ʼ ಘೋಷಣೆಗೆ ಕೂಗುತ್ತಿದ್ದ ಯುವಕರ ಗುಂಪಿನ ವಿರುದ್ಧವಾಗಿ ‘ಅಲ್ಲಾಹು ಅಕ್ಬರ್’ ಘೋಷಣೆ ಕೂಗಿ ಮುಸ್ಕಾನ್ ಸುದ್ದಿಯಾಗಿದ್ದರು. ಹಿಜಾಬ್ ವಿವಾದದ ವೇಳೆ 'ಹಿಜಾಬ್ ಲೇಡಿ' ಎಂದೇ ಹೆಸರುವಾಸಿಯಾಗಿದ್ದ ಮುಸ್ಕಾನ್, ‘ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ಇನ್ಮುಂದೆ ಅಣ್ಣ-ತಮ್ಮಂದಿರ ರೀತಿ ಬದುಕೋಣ. ನಮ್ಮ ಹಕ್ಕನ್ನು ವಾಪಸ್‌ ಕೊಟ್ಟಿದ್ದಾರೆ. ನಮ್ಮ ಸಂಸ್ಕೃತಿಯನ್ನು ಬೆಂಬಲಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರಾದ ಜಮೀರ್ ಅಹ್ಮದ್, ಯು.ಟಿ.ಖಾದರ್ ಸೇರಿದಂತೆ ಎಲ್ಲರಿಗೂ ಧನ್ಯವಾದಗಳು’ ಎಂದು ತಿಳಿಸಿದ್ದಾರೆ.

ಇದನ್ನೂ ಓದಿಸಿಎಂ ಸಿದ್ದರಾಮಯ್ಯರಿಂದ ಅಲ್ಪಸಂಖ್ಯಾತರ ಓಲೈಕೆ-ರಾಜ್ಯ BJP ಆಕ್ರೋಶ

ನಾವು ಅಣ್ಣ-ತಮ್ಮಂದಿರ ರೀತಿ ಕಾಲೇಜಿಗೆ ಹೋಗಿ ಓದುತ್ತಾ ಇದ್ದೆವು. ಅದೇ ರೀತಿ ಮುಂದೆಯೂ ಹೋಗಬೇಕು. ಹಿಜಾಬ್ ಅನ್ನೋದು ನಮ್ಮ ಧರ್ಮ. ಅದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್‌ ವಿವಾದದಿಂದ ಅನೇಕ ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದರು. ನಾನು ಸಹ ಕಳೆದೊಂದು ವರ್ಷದಿಂದ ಕಾಲೇಜಿಗೆ ಹೋಗಿಲ್ಲ. ಈಗ ನಾನು ಮತ್ತೆ ಕಾಲೇಜಿಗೆ ಹೋಗುತ್ತೇನೆ. ಈಗ ಎಲ್ಲರೂ ಶಿಕ್ಷಣ ಪಡೆಯಬೇಕು. ಹೀಗಾಗಿ ಎಲ್ಲರೂ ಕಾಲೇಜಿಗೆ ಬಂದು ಪರೀಕ್ಷೆ ಬರೆಯಿರಿ ಎಂದು ಮುಸ್ಕಾನ್ ಸಹ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದ್ದಾರೆ.

ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು‌ ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣ. ನಾವು ಮೊದಲಿನಿಂದಲೂ ಹಿಜಾಬ್‌ ಧರಿಸುತ್ತಿದ್ದೆವು. ಎಲ್ಲಾ ಧರ್ಮ ಒಂದೇ, ಮನುಷ್ಯರ ರೀತಿ ಬದುಕೋಣ. ಧರ್ಮಗಳ ನಡುವೆ ಸಂಘರ್ಷ ಬೇಡವೆಂದು ಮುಸ್ಕಾನ್ ಮನವಿ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ರಾಜಕೀಯ ಲಾಭಕ್ಕಾಗಿ ಹಿಜಾಬ್ ಪ್ರಸ್ತಾಪ ಖಂಡನೀಯ: ಬಸವರಾಜ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News