ಚಿಕ್ಕಮಗಳೂರು: ಟ್ಯಾಂಕರ್ ಪಲ್ಟಿ; ಓರ್ವ ಸಜೀವ ದಹನ, 15 ಮನೆಗೆ ಬೆಂಕಿ

ಪೆಟ್ರೋಲ್ ಟ್ಯಾಂಕರೊಂದು ಮೊಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದಾನೆ.

Last Updated : Jun 19, 2018, 06:05 PM IST
ಚಿಕ್ಕಮಗಳೂರು: ಟ್ಯಾಂಕರ್ ಪಲ್ಟಿ; ಓರ್ವ ಸಜೀವ ದಹನ, 15 ಮನೆಗೆ ಬೆಂಕಿ title=

ಚಿಕ್ಕಮಗಳೂರು: ಪೆಟ್ರೋಲ್ ಟ್ಯಾಂಕರೊಂದು ಮೊಗುಚಿ ಬಿದ್ದ ಪರಿಣಾಮ ಓರ್ವ ವ್ಯಕ್ತಿ ಸಜೀವ ದಹನವಾಗಿದ್ದು, ಸಮೀಪದ 15 ಮನೆಗಳಿಗೆ ಬೆಂಕಿ ಹೊತ್ತಿಕೊಂಡ ಘಟನೆ ಕಡೂರಿನ ಗಿರಿಯಾಪುರ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. 

ಕಡೂರಿನಿಂದ ಹೊಸದುರ್ಗದ ಕಡೆಗೆ ಸಾಗುತ್ತಿದ್ದ ಟ್ಯಾಂಕರ್ ಗಿರಿಯಾಪುರ ಸಾಗುತ್ತಿದ್ದಂತೆ ಪಲ್ಟಿಯಾಗಿ ಬೆಂಕಿ ಹೊತ್ತಿಕೊಂಡಿದ್ದು ಬೆಂಕಿಯ ಜ್ವಾಲೆಗೆ ಸಮೀಪದ 15ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಆವರಿಸಿದೆ. ಘಟನೆಯಲ್ಲಿ ಟ್ಯಾಂಕರ್ ಕ್ಲೀನರ್ ಸಜೀವ ದಹನವಾಗಿದ್ದಾನೆ. ಸುಟ್ಟ ಗಾಯಗಳಿಂದ ನರಳುತ್ತಿದ್ದ ಟ್ಯಾಂಕರ್ ಚಾಲಕನನ್ನು ಸ್ಥಳಿಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಮಾರು 100 ಮೀ. ವ್ಯಾಪ್ತಿಯಲ್ಲಿ ಬೆಂಕಿ ಆವರಿಸಿದ್ದು, ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಹರಸಾಹಸ ಪಡುತ್ತಿದ್ದಾರೆ. 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕಾಗಮಿಸಿದ್ದು, ಸುತ್ತಮುತ್ತಲ ಪ್ರದೇಶ ಸಂಪೂರ್ಣ ಹೊಗೆಯಿಂದ ಆವೃತವಾಗಿರುವುದರಿಂದ, ಬೆಂಕಿ ನಂದಿಸುವ ಕಾರ್ಯಕ್ಕೆ ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ.

ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ. 

Trending News