PSI Recruitment Scam: ಇನ್ನೂ ಪತ್ತೆಯಾಗದೆ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ!

ಕಳೆದ ‌ಒಂದು ವಾರದಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ದಿವ್ಯಾ ಹಾಗರಗಿ ಒಡೆತನದ ಜ್ಞಾನಜೋತಿ ಶಾಲೆಯಲ್ಲಿಯೇ ಅಕ್ರಮ ನಡೆದಿತ್ತು.

Written by - Zee Kannada News Desk | Last Updated : Apr 23, 2022, 08:45 AM IST
  • ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪೊಲೀಸರ ಕೈಗೆ ಸಿಗದೆ ಇನ್ನೂ ನಾಪತ್ತೆಯಾಗಿದ್ದಾರೆ
  • ದಿವ್ಯಾ ಹಾಗರಗಿ ಒಡೆತನದ ಜ್ಞಾನಜೋತಿ ಶಾಲೆಯಲ್ಲಿಯೇ ಪಿಎಸ್‍ಐ ಪರೀಕ್ಷೆ ಅಕ್ರಮ ನಡೆದಿತ್ತು
  • ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್‌ಗಾಗಿ ಸಿಐಡಿ ತಲಾಶ್
PSI Recruitment Scam: ಇನ್ನೂ ಪತ್ತೆಯಾಗದೆ ತಲೆಮರೆಸಿಕೊಂಡಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ!  title=
ಪೊಲೀಸರ ಕೈಗೆ ಸಿಗದ ದಿವ್ಯಾ ಹಾಗರಗಿ

ಕಲಬುರಗಿ: 545 ಹುದ್ದೆಗಳ ಪಿಎಸ್ಐ ನೇಮಕಾತಿ ಅಕ್ರಮ ಆರೋಪದಲ್ಲಿ ನಿನ್ನೆ(ಏ.22) ಅಫಜಲಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಂತೇಶ್ ಪಾಟೀಲ್ ನಿನ್ನೆ ಬಂಧನವಾಗಿದೆ. ಆದರೆ ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ಪೊಲೀಸರ ಕೈಗೆ ಸಿಗದೆ ಇನ್ನೂ ನಾಪತ್ತೆಯಾಗಿದ್ದಾರೆ.

ಕಳೆದ ‌ಒಂದು ವಾರದಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದು, ತಲೆಮರೆಸಿಕೊಂಡಿದ್ದಾರೆ. ದಿವ್ಯಾ ಹಾಗರಗಿ ಒಡೆತನದ ಜ್ಞಾನಜೋತಿ ಶಾಲೆಯಲ್ಲಿಯೇ ಅಕ್ರಮ ನಡೆದಿತ್ತು. ಇದೇ ಪರೀಕ್ಷಾ ಕೇಂದ್ರದಲ್ಲಿ 11ಕ್ಕೂ ಹೆಚ್ಚು ಅಭ್ಯರ್ಥಿಗಳು ಅಕ್ರಮವಾಗಿ ಪರೀಕ್ಷೆ ಬರೆದಿದ್ದರು. ಕಳೆದ ಒಂದು ವಾರದಿಂದ ರಾಜ್ಯ, ನೆರೆ ರಾಜ್ಯಗಳಲ್ಲಿ ದಿವ್ಯಾರಿಗಾಗಿ ಹುಡುಕಾಟ ನಡೆಸಲಾಗುತ್ತಿದೆ. ಆದರೆ, ಫೋನ್ ಸ್ವಿಚ್ ಆಫ್ ಮಾಡಿಕೊಂಡಿರೋ ದಿವ್ಯಾ ಹಾಗರಗಿ ಖಾಕಿಪಡೆಯ ಕೈಗೆ ಸಿಗದೆ ಎಸ್ಕೇಪ್ ಆಗಿದ್ದಾರೆ.

ಇದನ್ನೂ ಓದಿ: Cabinet Expansion: ಏ.30ರಂದು ದೆಹಲಿಗೆ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಸಾಧ್ಯತೆ

ದಿವ್ಯಾ ಹಾಗರಗಿ ಜೊತೆ ಅಕ್ರಮದಲ್ಲಿ ಇನ್ನು ನಾಲ್ವರು ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಬಿಜೆಪಿಯ ಕೆಲ ನಾಯಕರ ಜೊತೆ ದಿವ್ಯಾ ಆತ್ಮೀಯ ಒಡನಾಟ ಹೊಂದಿದ್ದಾರೆ. ಕಲಬುರಗಿ ಬಿಜೆಪಿ ಮುಖಂಡೆ ಕೂಡ ಆಗಿರುವ ದಿವ್ಯಾಳಿಗೆ ಬಿಜೆಪಿ ಪ್ರಭಾವಿ ಮುಖಂಡರು ಆಶ್ರಯ ನೀಡಿದ್ದಾರಾ? ಅನ್ನೋ ಪ್ರಶ್ನೆ ಮೂಡಿದೆ.

ಅಕ್ರಮದ ಕಿಂಗ್‌ಪಿನ್‍ಗಾಗಿ ಸಿಐಡಿ ತಲಾಶ್!

ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ರುದ್ರಗೌಡ ಪಾಟೀಲ್‌ಗಾಗಿ ಸಿಐಡಿ ತಲಾಶ್ ನಡೆಸುತ್ತಿದೆ. ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿ ಪರೀಕ್ಷೆ ಬರೆಸುತ್ತಿದ್ದ ಆರೋಪ ರುದ್ರಗೌಡ ಪಾಟೀಲ್ ಮೇಲಿದೆ. ಈತ ಕಲಬುರಗಿ ಜಿಲ್ಲೆಯ ನೂರಾರು ಜನರಿಗೆ ಅಕ್ರಮವಾಗಿ ಪರೀಕ್ಷೆ ಬರೆಸಿದ್ದಾನೆಂದು ತಿಳಿದುಬಂದಿದೆ. ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ 7ಕ್ಕೂ ಹೆಚ್ಚು ಅಭ್ಯರ್ಥಿಗಳಿಗೆ ಅಕ್ರಮಕ್ಕೆ ಬೆಂಬಲ ನೀಡಿದ್ದಾನೆ.

ಇದನ್ನೂ ಓದಿ: 'ಬಿಜೆಪಿಯ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಘೋಷಿಸಲು ನೀವು ಸಿದ್ಧ ಇದ್ದೀರಾ? '

40-80 ಲಕ್ಷ ರೂ. ಹಣ ಪಡೆದು ಅಕ್ರಮವಾಗಿ ಪರೀಕ್ಷೆ ಬರೆಸುತ್ತಿದ್ದ ಈತನಿಗಾಗಿ ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಅನೇಕ ಕಡೆ ಸಿಐಡಿ ಹುಡುಕಾಟ ನಡೆಸುತ್ತಿದೆ. ಈಗಾಗಲೇ ರುದ್ರಗೌಡನ ಸಹೋದರ ಮಹಂತೇಶ್ ಪಾಟೀಲ್‌ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದು, ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News