ಸಿದ್ದರಾಮಯ್ಯ ಒಬ್ಬ ಅಸಮರ್ಥ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ

Rameswaram Cafe Blast Case: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸಮರ್ಥ ಆಡಳಿತ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಈ ಎರಡೂ ಪ್ರಕರಣಗಳು ಕೈಗನ್ನಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ. 

Written by - Prashobh Devanahalli | Edited by - Puttaraj K Alur | Last Updated : Mar 1, 2024, 09:21 PM IST
  • ಕರ್ನಾಟಕ ರಾಜ್ಯದ ಆಂತರಿಕ ಭದ್ರತೆ ಕಾಪಾಡಿಕೊಳ್ಳಲೂ ಆಗದ ಕಾಂಗ್ರೆಸ್ ಸರ್ಕಾರ!
  • ಸಿದ್ದರಾಮಯ್ಯ ಸಿಎಂ ಪಟ್ಟ ಉಳಿಸಿಕೊಳ್ಳಲು ತೋರಿದ ದಕ್ಷತೆಯನ್ನು ರಾಜ್ಯದ ಆಂತರಿಕ ಭದ್ರತೆ ಬಗ್ಗೆ ತೋರಿಲ್ಲ
  • ಸಿದ್ದರಾಮಯ್ಯ ಒಬ್ಬ ಅಸಮರ್ಥ ಸಿಎಂ ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ
ಸಿದ್ದರಾಮಯ್ಯ ಒಬ್ಬ ಅಸಮರ್ಥ ಸಿಎಂ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ವಾಗ್ದಾಳಿ title=
ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್‌ ಜೋಶಿ ವಾಗ್ದಾಳಿ!

ಹುಬ್ಬಳ್ಳಿ: ಒಂದು ರಾಜ್ಯದ ಆಂತರಿಕ ಭದ್ರತೆಯನ್ನೂ ಕಾಪಾಡಿಕೊಳ್ಳಲು ಕಾಂಗ್ರೆಸ್ ಅಶಕ್ತ ಮತ್ತು ಅಸಮರ್ಥವಾಗಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ‌ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದಿರುವ ಸ್ಫೋಟ ಪ್ರಕರಣ ಸಂಬಂಧ ಮಾತನಾಡಿದ ಅವರು, ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. 

ಆಂತರಿಕ ಭದ್ರತೆ ಕಾಪಾಡಿಕೊಳ್ಳುವಲ್ಲಿ ಕಾಂಗ್ರೆಸ್ ಒಂದು ವಿಫಲ ಆಡಳಿತ ಪಕ್ಷವಾಗಿರುವುದು ಮತ್ತೆ ಸಾಬೀತಾಗಿದ. ಕರ್ನಾಟಕದ ಪರಿಸ್ಥಿತಿ ಇಂದು ಎಲ್ಲಿಗೆ ಬಂದಿದೆ? ಎಂದರೆ ಜನ ಸದಾ ಆತಂಕದಲ್ಲೇ ಇರುವಂಥ ಸನ್ನಿವೇಶ ಕಾಂಗ್ರೆಸ್ ಆಡಳಿತದಲ್ಲಿ ಉದ್ಭವಿಸಿದೆ ಎಂದು ಜೋಶಿ ಕಳವಳ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ತುಮಕೂರಿನಲ್ಲಿ ವಿ.ಸೋಮಣ್ಣ ಸ್ಪರ್ಧೆಗೆ ತೀವ್ರ ವಿರೋಧ!

ಶಾಸಕಾಂಗದ ದೇವಾಲಯ ಎಂದೇ ಕರೆಯಲ್ಪಡುವ ವಿಧಾನಸೌಧದಲ್ಲೇ ಪಾಕಿಸ್ತಾನಕ್ಕೆ 'ಕೈ' ಎತ್ತಿ ಜೈಕಾರ ಕೂಗಿದರು. ಅದರ ಬೆನ್ನಲ್ಲೇ ಈಗ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಫೋಟ! ಇದು ನಿಜಕ್ಕೂ ಕಾಂಗ್ರೆಸ್ ಆಡಳಿತದಲ್ಲಿ ಕರ್ನಾಟಕ ಸ್ಥಿತಿಯನ್ನು ಉಹಿಸಲು ಸಾಧ್ಯವಾಗುತ್ತಿಲ್ಲ ಎಂದಿದ್ದಾರೆ ಎಂದು ಸಚಿವ ಜೋಶಿ ಆತಂಕ ವ್ಯಕ್ತಪಡಿಸಿದ್ದಾರೆ. 

ಆಡಳಿತ ವೈಫಲ್ಯಕ್ಕೆ "ಕೈ'ಗನ್ನಡಿ: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಅಸಮರ್ಥ ಆಡಳಿತ ಮತ್ತು ರಾಜ್ಯ ಗೃಹ ಇಲಾಖೆಯ ವೈಫಲ್ಯಕ್ಕೆ ಈ ಎರಡೂ ಪ್ರಕರಣಗಳು ಕೈಗನ್ನಡಿ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನ ದಿ ರಾಮೇಶ್ವರಂ ಕೆಫೆಯಲ್ಲಿ ಭಾರೀ ಸ್ಫೋಟ..!

ಸಿದ್ದರಾಮಯ್ಯ ಅಸಮರ್ಥ ಆಡಳಿತಗಾರ: ಇನ್ನು ಸಿದ್ದರಾಮಯ್ಯ ಅವರು ಸಿಎಂ ಪಟ್ಟ ಉಳಿಸಿಕೊಳ್ಳಲು ತೋರಿದ ದಕ್ಷತೆಯನ್ನು ರಾಜ್ಯದ ಆಂತರಿಕ ಭದ್ರತೆ ಬಗ್ಗೆ ತೋರಿಲ್ಲ. ರಾಜ್ಯ ಕಂಡ ಅತೀ ಅಸಮರ್ಥ ಆಡಳಿತಗಾರ ಎಂದರೆ ಅದು ಸಿದ್ದರಾಮಯ್ಯ ಎಂಬುದು ಇದರಿಂದ ಸಾಬೀಗುತ್ತಿದೆ ಎಂದು ಜೋಶಿ ಕುಟುಕಿದ್ದಾರೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News