ಸಿಎಂ ಜೊತೆಗೆ ಇಂದು ದೆಹಲಿ ಆಗಮಿಸಲಿರುವ ರಾಜ್ಯ ಕಾಂಗ್ರೆಸ್ ನಾಯಕರು

ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾದ ಹಿನ್ನೆಲೆಯಲ್ಲಿ ಕಾಂಗ್ರೇಸ್ ನಾಯಕರ ಆಗಮನ.

Last Updated : Dec 12, 2017, 12:53 PM IST
  • ಡಿ.13ರಿಂದ ರಾಜ್ಯದಲ್ಲಿ ಸಿಎಂ‌ ಸಿದ್ದರಾಮಯ್ಯ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ.
  • ರಾಹುಲ್ ಗಾಂಧಿಗೆ ಶುಭಕೋರಲು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ಆಗಮನ.
ಸಿಎಂ ಜೊತೆಗೆ ಇಂದು ದೆಹಲಿ ಆಗಮಿಸಲಿರುವ ರಾಜ್ಯ ಕಾಂಗ್ರೆಸ್ ನಾಯಕರು title=

ಬೆಂಗಳೂರು: ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಗೆ ಶುಭಕೋರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ರಾಜ್ಯದ ಹಲವು ಕಾಂಗ್ರೇಸ್ ನಾಯಕರು ಇಂದು ಮಧ್ಯಾಹ್ನ ದೆಹಲಿಗೆ ಆಗಮಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್, ದಿನೇಶ್ ಗುಂಡೂರಾವ್, ಸಚಿವ ಕೆ. ಜೆ.ಜಾರ್ಜ್ ಮತ್ತಿತರರು ದೆಹಲಿಗೆ ಆಗಮಿಸಲಿದ್ದಾರೆ.

ಡಿ.13 (ನಾಳೆಯಿಂದ‌) ರಾಜ್ಯದಲ್ಲಿ ಸಿಎಂ‌ ಸಿದ್ದರಾಮಯ್ಯ ರಾಜ್ಯ ಪ್ರವಾಸ ಕೈಗೊಳ್ಳಲಿದ್ದಾರೆ. ನಿರಂತರವಾಗಿ 1 ತಿಂಗಳು ನಡೆಯಲಿರುವ ಸಿಎಂ ಪ್ರವಾಸ ಮಧ್ಯದಲ್ಲಿ ಮೊಟಕುಗೊಳಿಸಬಾರದೆಂದು ಸಿಎಂ ಇಂದೇ ದೆಹಲಿಗೆ ಆಗಮಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ರಾಹುಲ್ ಗಾಂಧಿಗೆ ಶುಭಾಶಯ ಕೋರಿ ಅವರೊಂದಿಗೆ ಸಮಾಲೋಚನೆ ನಡೆಸಲಿರುವ ಸಿದ್ದರಾಮಯ್ಯ ರಾಜ್ಯ ಪ್ರವಾಸದ ಬಗ್ಗೆ ಮಾಹಿತಿ ನೀಡಲಿದ್ದಾರೆ. ಸಿಎಂಗೆ ಪರಮೇಶ್ವರ್ ಸಾಥ್ ನೀಡಲಿದ್ದಾರೆ.

Trending News