Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ!

Weather Report: ರಾಜ್ಯದ ವಿವಿಧ ಕಡೆಯಲ್ಲಿ ಕಡು ಬೇಸಿಗೆಯ ಅನುಭವ ಜೋರಾಗಿಯೇ ಇದ್ದು, ಈ ಕಡು ಬಿಸಿಲು ಈ ತಿಂಗಳು ಅಂತ್ಯದವರೆಗೆ ಮಾತ್ರ ಇರಲಿದೆ ಎಮದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಬೇರ ಬೇರೆ ಜಿಲ್ಲೆಯ ಹವಮಾನ ವರದಿ ಇಲ್ಲಿದೆ.  

Written by - Zee Kannada News Desk | Last Updated : Feb 11, 2024, 09:27 AM IST
  • ಫೆಬ್ರವರಿ ತಿಂಗಳು ಶುರುವಾದಾಗಿನಿಂದ ತಾಪಮಾನ ಹೆಚ್ಚಾಗುತ್ತಾ ಬರುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮುಂದುವರೆದಿದೆ.
  • ಆದರೆ ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಕೊಂಚ ಚಳಿಯ ಪ್ರಮಾಣ ಹಾಗೆಯೇ ಇದೆ.
  • ಹವಾಮಾನ ಶಾಸ್ತ್ರಜ್ಞರ ಪ್ರಕಾರ ಬೆಂಗಳೂರಿನಲ್ಲಿ ಗಾಳಿ ಮತ್ತು ಮಳೆಯ ಕೊರತೆಯಿಂದಾಗಿ ತಾಪಮಾನ ಏರಿಕೆಗೆ ಕಾರಣವಾಗಿದೆ .
Karnataka Weather: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ತಾಪಮಾನದಲ್ಲಿ ಏರಿಕೆ! title=

Karnataka Weather Report: ಕರ್ನಾಟಕದಲ್ಲಿ ಫೆಬ್ರವರಿ ತಿಂಗಳು ಶುರುವಾದಾಗಿನಿಂದ ತಾಪಮಾನ ಹೆಚ್ಚಾಗುತ್ತಾ ಬರುತ್ತಿದ್ದು, ವಿವಿಧ ಜಿಲ್ಲೆಗಳಲ್ಲಿ ಬಿಸಿಲಿನ ಝಳ ಮುಂದುವರೆದಿದೆ. ಈಗಲೇ ಕಡು ಬೇಸಿಗೆಯ ಅನುಭವವಾಗುತ್ತಿದೆ. ಆದರೆ ಮಂಡ್ಯ ಜಿಲ್ಲೆಯಲ್ಲಿ ಮಾತ್ರ ಕೊಂಚ ಚಳಿಯ ಪ್ರಮಾಣ ಹಾಗೆಯೇ ಇದೆ. ರಾಜ್ಯದಲ್ಲಿ ಬಿಸಿಲಿನ ಕಾವು ಹೆಚ್ಚಾಗಿಯೇ ಇದ್ದು, ಬಿಸಿಲು ಈ ತಿಂಗಳು ಅಂತ್ಯದವರೆಗೆ ಮಾತ್ರ. ಕಾರಣ ಮಾರ್ಚ್‍ನಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಾಮಾನ ಶಾಸ್ತ್ರಜ್ಞರ ಪ್ರಕಾರ ಬೆಂಗಳೂರಿನಲ್ಲಿ ಗಾಳಿ ಮತ್ತು ಮಳೆಯ ಕೊರತೆಯಿಂದಾಗಿ ತಾಪಮಾನ ಏರಿಕೆಗೆ ಕಾರಣವಾಗಿದೆ . ಫೆಬ್ರವರಿಯಲ್ಲಿ ನಗರದಲ್ಲಿ 7.1 ಮಿಮೀ ಮಳೆಯಾಗಬೇಕಿದ್ದು, ಆದರೆ ಇಲ್ಲಿಯವರೆಗೆ ಮಳೆಯ ಯಾವುದೇ ಕುರುಹು ಕಂಡುಬಂದಿಲ್ಲ.

ಬೆಂಗಳೂರಿನಲ್ಲಿ ಶುಭ್ರ ಆಕಾಶವಿರಲಿದೆ, 31 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಕಾರವಾರದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಂಗಳೂರಿನಲ್ಲಿ 32.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಬೀದರ್‌ನಲ್ಲಿ 34.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ವಿಜಯಪುರದಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 15.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಗದಗದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾವೇರಿಯಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ರಾಯಚೂರಿನಲ್ಲಿ 36.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಾಮರಾಜನಗರದಲ್ಲಿ 35.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 16.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಚಿತ್ರದುರ್ಗದಲ್ಲಿ 34.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಹಾಸನದಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 12.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ವರದಿಯಾಗಿದೆ.
ಶಿವಮೊಗ್ಗದಲ್ಲಿ 35.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 17.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ  ದಾಖಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News