ಕಾರು ಚಾಲಕ ಕಾರ್ತಿಕ್, ವಿಡಿಯೋ ಹಂಚಿಕೆ ಮಾಡಿದ ಕಿಡಿಗೇಡಿ ಎಲ್ಲಿ? SIT ಗೆ ನೇರ ಪ್ರಶ್ನೆ ಕೇಳಿದ ಹೆಚ್ಡಿಕೆ

ಬೆಂಗಳೂರು: ಡಿ.ಕೆ ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Written by - Prashobh Devanahalli | Last Updated : May 8, 2024, 06:04 PM IST
    • ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ
    • ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ
    • ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಹೆಚ್ ಡಿ ಕೆ
ಕಾರು ಚಾಲಕ ಕಾರ್ತಿಕ್, ವಿಡಿಯೋ ಹಂಚಿಕೆ ಮಾಡಿದ ಕಿಡಿಗೇಡಿ ಎಲ್ಲಿ? SIT ಗೆ ನೇರ ಪ್ರಶ್ನೆ ಕೇಳಿದ ಹೆಚ್ಡಿಕೆ title=
File Photo

ಬೆಂಗಳೂರು: ಕುಮಾರಸ್ವಾಮಿ ಕಿಂಗ್ ಆಫ್ ಬ್ಲಾಕ್ ಮೇಲರ್ ಎಂದಿರುವ ಡಿಸಿಎಂ ಡಿಕೆಶಿಗೆ ತಿರುಗೇಟು ಕೊಟ್ಟಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ, ಇಡೀ ಪ್ರಕರಣವನ್ನು ಸ್ವಾರ್ಥಕ್ಕಾಗಿ ಬಳಸಿಕೊಂಡ ವ್ಯಕ್ತಿ ನೀನು ಎಂದು ಕಿಡಿ ಕಾರಿದರು.

ನಗರ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್ ಬಳಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮಹಿಳೆಯರ ಅಶ್ಲೀಲ ವಿಡಿಯೋಗಳನ್ನು ತುಂಬಲಾಗಿದ್ದ ಪೆನ್ ಡ್ರೈವ್’ಗಳನ್ನು ಹಾದಿಬೀದಿಯಲ್ಲಿ ಸುರಿದಿರುವ ಕಿಡಿಗೇಡಿಗಳನ್ನು ರಾಜ್ಯ ಸರ್ಕಾರ ರಕ್ಷಣೆ ಮಾಡುತ್ತಿದೆ ಎಂದು ನೇರ ಆರೋಪ ಮಾಡಿದರು.

ಇದನ್ನೂ ಓದಿ: ಕ್ರಿಕೆಟ್ ಲೋಕಕ್ಕೇ ವಿರಾಟ್ ಪ್ರೇರಣೆ… ಆದ್ರೆ ವಿರಾಟ್’ಗೆ ಪ್ರೇರಣೆ ಯಾರು ಗೊತ್ತಾ? ಈ ವಿಶೇಷ ವ್ಯಕ್ತಿಯೇ ಕೊಹ್ಲಿಯ Inspiration!

ಡಿ.ಕೆ ಶಿವಕುಮಾರ್ ಸಂಸ್ಕೃತಿ ಎಂಥದು ಎಂದು ಎಲ್ಲರಿಗೂ ಗೊತ್ತಿದೆ. ವಕೀಲರಾದ ದೇವರಾಜೇಗೌಡ ಜತೆ ಯಾಕಪ್ಪ ಮಾತಾನಾಡಿದೆ ನೀನು? ನಿನಗೇನಿತ್ತು ಅವರ ಹತ್ತಿರ ಕೆಲಸ ಡಿ.ಕೆ.ಶಿವಕುಮಾರ್? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

“ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ”

ಕುಮಾರಸ್ವಾಮಿ ಬ್ಲಾಕ್ ಮೇಲರ್ ಅಲ್ಲ. ಐದು  ಜನರನ್ನು ಇಟ್ಟಕೊಂಡಿದ್ದೀನಿ ಅಂತ ಹೇಳಿದ್ದೀಯಾ ಅಲ್ಲವೇ ನೀನು? ನಿಮ್ಮ ಮುಖ್ಯಮಂತ್ರಿಗೆ ಮಾನ ಮರ್ಯಾದೆ ಇದೆಯಾ? ಡಾ.ಜಿ ಪರಮೇಶ್ವರ ಅವರೇ ನಿಮಗೆ ಬೆನ್ನು ಮೂಳೆ ಇದೆಯಾ? ನನ್ನನ್ನು ಹಿಟ್ ಅಂಡ್ ರನ್ ಅಂತಾರೆ. ಹಾಗಾದರೆ ನಿಮ್ಮದೇನು? ನಿಮ್ಮ ಎಸ್ ಐಟಿ ಅಧಿಕಾರಿಗಳಿಗೆ ಕ್ರೆಡಿಬಲಿಟಿ ಎನ್ನುವುದು ಇದೆಯಾ? ಎಂದು ಗುಡುಗಿದರು.

ನೊಂದ ಮಹಿಳೆ ಎಲ್ಲಿ ಸಿಕ್ಕಿದರೆಂದು ಹೇಳಿ?

ಕಿಡ್ನಾಪ್ ಪ್ರಕರಣದಲ್ಲಿ ಏನೇನು ನಡೆದಿದೆ ಎನ್ನುವುದು ನನಗೆ ಗೊತ್ತಿದೆ. ನೊಂದ ಮಹಿಳೆ ರಾಜಗೋಪಾಲ್ ಎಂಬುವರ ತೋಟದ ಮನೆಯಲ್ಲಿ ಸಿಕ್ಕಿದರಾ? ಅಥವಾ ಅವರ ಸಂಬಂಧಿಕರ ಮನೆಯಲ್ಲಿ ಸಿಕ್ಕಿದರಾ? ಎಸ್ ಐಟಿ ಅಧಿಕಾರಿಗಳು ಹೇಳಬೇಕು. ಆ ಮಹಿಳೆ ಸಿಕ್ಕಿದ್ದು ಅವರ ಸಂಬಂಧಿಕರ ಮನೆಯಲ್ಲಿ. ಹುಣಸೂರಿನ ಪವಿತ್ರಾ ಎಂಬುವವರ ಮನೆಯಿಂದ ಕರೆದುಕೊಂಡು ಬಂದಿದ್ದಾರೆ ಎಂದು ಆರೋಪ ಮಾಡಿದರು.

2 ಜನರ ನೊಂದ ಮಹಿಳೆಯರು ಎನ್ನಲಾದ ಮಹಿಳೆಯರನ್ನು ಕುಮಾರಕೃಪಾದಲ್ಲಿ ಇಟ್ಟಿದ್ದಾರೆ. ಎಲ್ಲಾ ಸಂಚು ಮಾಡಿ ಈಗ ಅನುಕಂಪ ತೋರಿಸ್ತಾ ಇದ್ದೀರಿ ಅಲ್ಲವೇ ಶಿವಕುಮಾರ್? ನಿಮ್ಮ ಯೋಗ್ಯತೆಗೆ ಈಗ ಯಾಕೆ ಅನುಕಂಪ? ಪೆನ್ ಡ್ರೈವ್ ಲೀಕ್ ಮಾಡುವಾಗ ಆ ಮಹಿಳೆಯರ ಮುಖ ತೋರಿಸಿದ್ದೀರಿ. ಅವರ ಮಾನ ಮರ್ಯಾದೆಯನ್ನು ಹಾದಿ ಬೀದಿಯಲ್ಲಿ ಹರಾಜು ಹಾಕಿದ್ದೀರಿ. ಈಗ ನೋಡಿದರೆ ಅವರ ಬಗ್ಗೆ ಅನುಕಂಪ ತೋರಿಸುತ್ತಿರಿ. ನಾಚಿಕೆ ಆಗುವುದಿಲ್ಲವೇ ನಿಮಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೇವಣ್ಣ ವಿಚಾರದಲ್ಲಿ ಮಾತ್ರ ನಾನು ಹೋರಾಟ ಮಾಡುತ್ತೇನೆ. ನಮ್ಮ ಪಕ್ಷದ ಶಾಸಕ, ನನ್ನ ಸಹೋದರನಾದ್ದರಿಂದ ರೇವಣ್ಣ ಅವರ ಪರವಾಗಿ ಶಾಸಕಾಂಗ ಪಕ್ಷದ ನಾಯಕನಾಗಿ ಹೋರಾಟ ಮಾಡುತ್ತೇನೆ. ಪ್ರಜ್ವಲ್ ರೇವಣ್ಣ ಪ್ರಕರಣ ಬಗ್ಗೆ ನನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಚಾಲಕ ಕಾರ್ತಿಕ್ ಗೆ ಖಾಸಗಿ ವಾಹಿನಿಯಲ್ಲಿ ತರಬೇತಿ

ಪೆನ್ ಡ್ರೈವ್ ಹಂಚಿಕೆಯ ಮೂಲ ಸೂತ್ರಧಾರ ಕಾರು ಚಾಲಕ ಕಾರ್ತಿಕ್ ನನ್ನು ಖಾಸಗಿ ಚಾನೆಲ್ ಒಂದರಲ್ಲಿ ಕೂರಿಸಿ ಸೂಕ್ತ ತರಬೇತಿ ಕೊಡುವ ಕೆಲಸ ನಡೆಯುತ್ತಿದೆ. ಈ ತನಿಖೆಯ ದಿಕ್ಕು ಎತ್ತ ಸಾಗುತ್ತಿದೆ ಎನ್ನುವುದು ಅರ್ಥವಾಗುತ್ತಿದೆ ಎಂದು ಕಿಡಿಕಾರಿದರು.

ತಮ್ಮ ಹಳೆಯ ಪ್ರಕರಣ ಒಂದರ ವಿಚಾರವಾಗಿ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರಾದ ನಂತರ ತಮಗೆ ಎದುರಾದ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಹಾಸನ ಪ್ರಕರಣದ ತನಿಖೆಗೆ ಎಸ್ ಐಟಿ ರಚನೆ ಆಗಿದೆ. ಅದು ಕೆಲಸವನ್ನು ಮಾಡುತ್ತಿದೆ. ಆದರೆ, ವಿಶೇಷ ತನಿಖಾ ತಂಡಕ್ಕೆ ಸಿಗದ ಕಾರು ಚಾಲಕ ಖಾಸಗಿ ವಾಹಿನಿ ಸಿಕ್ಕಿ ಸಂದರ್ಶನ ನೀಡುತ್ತಾನೆ. ನಾನು ಗೃಹ ಸಚಿವರಿಗೆ ಪ್ರಶ್ನೆ ಕೇಳುತ್ತೇನೆ, ನಿಮ್ಮ ತನಿಖೆ ರೇವಣ್ಣ ಕೇಂದ್ರೀಕೃತವಾಗಿದೆ. ಆದರೆ, ವಿಡಿಯೋಗಳು ಬಿಡುಗಡೆ ಮಾಡಿದವರನ್ನು ಯಾಕೆ ಹೊರಗೆ ಬಿಟ್ಟಿದ್ದೀರಿ? ಅವರ ವಿರುದ್ಧ ಕ್ರಮ ಕೈಗೊಳ್ಳಿ. ಇದುವರೆಗೂ ಏನು ಮಾಡಿಲ್ಲ ಎಂದು ಕಿಡಿಕಾರಿದರು.

ಕಾರು ಚಾಲಕ ಕಾರ್ತಿಕ್ ನ ಖಾಸಗಿ ಚಾನೆಲ್ ಅಲ್ಲಿ ಕುಳಿತು ಟ್ರೈನ್ ಅಪ್ ಮಾಡ್ತಾ ಇದ್ದಾರೆ. ಮಿಸ್ಟರ್ ಪರಮೇಶ್ವರ್ ತಾವು ಏನ್ ಮಾಡ್ತಾ ಇದ್ದೀರಿ? ಎಂದು ಆಕ್ರೋಶ ವ್ಯಕ್ತಪಡಿಸಿದರು.

14 ವರ್ಷದ ರೇವಣ್ಣ ಮನೆಯಲ್ಲಿ ಕೆಲಸದಲ್ಲಿ ಇದ್ದವನು ಇವನು. ಪ್ರಜ್ವಲ್ ನಡವಳಿಕೆ ಗೊತ್ತಿದ್ದ ಮೇಲೆ ಕೆಲಸ ಬಿಡಬೇಕಿತ್ತು ಅಲ್ಲವೇ? ಬಂಡೆ ಹೇಗೆ ರಕ್ಷಣೆ ಮಾಡುತ್ತೆ ಅಂತ ಕಾಯ್ತಾ ಇದ್ದಾನೆ ಅವನು. ಬಂಡೆ ರಕ್ಷಣೆ ಕೊಡುತ್ತದೆ ಎಂದು  ಕಾರ್ತಿಕ್ ಅಂದುಕೊಂಡಿದ್ದಾನೆ. ಅವನು ಗಿರಿನಗರದಲ್ಲೇ ಇದ್ದಾನಂತೆ. ಬಹುಶಃ ಅವನಿಗೆ ಟ್ರೈನಿಂಗ್ ಕೊಡ್ತಾ ಇದ್ದಾರೆ ಎಂದು ಅವರು ಆರೋಪ ಮಾಡಿದರು. ನವೀನ್ ಗೌಡ, ಕಾರ್ತಿಕ್ ಹಾಗೂ ಹಾಸನ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ? ಇವರು ಮೂರು ಜನರು ಎಷ್ಟು ಆಪ್ತರು, ಇವರ ಸಂಬಂಧ ಎಂಥದ್ದು, ಇವರ ಪೋಟೋಗಲೆಲ್ಲ ಎಲ್ಲಾ ಕಡೆ ವೈರಲ್ ಆಗಿವೆ. ಇದೆಲ್ಲಾ ಎಸ್ ಐಟಿ ಕಣ್ಣಿಗೆ ಬಿದ್ದಿಲ್ಲವೇ ಎಂದು ಮಾಜಿ ಮುಖ್ಯಮಂತ್ರಿ ಪ್ರಶ್ನಿಸಿದರು.

ಈಗ ನೋಡಿದರೆ ಇಡೀ ಪ್ರಕರಣ ರೇವಣ್ಣ ಅವರ ಸುತ್ತ ಮಾತ್ರ ಸುತ್ತುತ್ತಿದೆ. ಅವರಿಗೆಮಾತ್ರ ನೋಟಿಸ್ ‌ಕೊಟ್ಟಿದ್ದಾರೆ ಎಂದು ಕಿಡಿಕಾರಿದರು.

ಇದನ್ನೂ ಓದಿ: SIT ಮುಂದೆ ದಾಖಲಾಗುವ ಪ್ರಕರಣಗಳಿಗೆ ಇಬ್ಬರು ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕರ ನೇಮಕ

ಹಿಂದೆ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಕೆಂಪಯ್ಯ ಎಂಬ ವ್ಯಕ್ತಿಯನ್ನು ಇಟ್ಟುಕೊಂಡು ನನ್ನನ್ನು ಬಂಧಿಸಬೇಕು ಎಂದು ಸಂಚು ಮಾಡಿದ್ದರು. ಅವರ ಆಸೆ ಈಡೇರಲಿಲ್ಲ. ನನ್ನನ್ನು ಒಂದು ದಿನವಾದರೂ ಅರೆಸ್ಟ್ ಮಾಡಿಸಿ ಜೈಲಿಗೆ ಕಲಿಸಬೇಕು ಎಂದು ಹೊಂಚು ಹಾಕಿದ್ದರು. ವಕೀಲರು ವಿಚಾರಣೆ ಹೋಗಬೇಡಿ ಇದನ್ನು ಸಲಹೆ ಮಾಡಿದ್ದರು. 2,900 ಮಹಿಳೆಯರು ಇರುವ ಪ್ರಕರಣ ಎಂದು ಹೇಳುತ್ತಿದ್ದಾರೆ. ಆದರೆ, ಇದುವರೆಗೂ ಯಾವುದೇ ಕೇಸ್ ಆಗಿಲ್ಲ ಎಂದು ತನಿಖೆಯ ಗತಿಯನ್ನು ಎಳೆಎಳೆಯಾಗಿ ಬಿಡಿಸಿಟ್ಟರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್

Trending News